AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸ್ತುತ ರಾಜಕೀಯ, ಚುನಾವಣಾ ಸಿದ್ಧತೆ ಮುಂತಾದ ವಿಚಾರಗಳ ಚರ್ಚೆ: ಅ. 16ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

Congress Working Committee Meeting: ಕಾಂಗ್ರೆಸ್ ವರ್ಕಿಂಗ್ ಕಮಿಟಿಯ ಸಭೆಯು ಅಕ್ಟೋಬರ್ 16, ಶನಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪಕ್ಷದ ಮುಖ್ಯ ಕಚೇರಿ ದೆಹಲಿಯಲ್ಲಿ ಈ ಸಭೆ ನಡೆಯಲಿದೆ ಎಂದು ಹೇಳಿಕೆ ಬಿಡುಗಡೆಗೊಳಿಸಲಾಗಿದೆ.

ಪ್ರಸ್ತುತ ರಾಜಕೀಯ, ಚುನಾವಣಾ ಸಿದ್ಧತೆ ಮುಂತಾದ ವಿಚಾರಗಳ ಚರ್ಚೆ: ಅ. 16ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
ಸೋನಿಯಾ ಗಾಂಧಿ, ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on:Oct 09, 2021 | 3:41 PM

Share

ದೆಹಲಿ: ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಹಾಗೂ ಮುಂದಿನ ವರ್ಷ ನಡೆಯಲಿರುವ ರಾಜ್ಯ ಚುನಾವಣೆಗಳ ಬಗ್ಗೆ ಮಾತುಕತೆ ನಡೆಸುವ ಸಲುವಾಗಿ ಅಕ್ಟೋಬರ್ 16 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಈ ಬಗ್ಗೆ ಕೆ.ಸಿ. ವೇಣುಗೋಪಾಲ್ ಇಂದು (ಅಕ್ಟೋಬರ್ 9) ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ವರ್ಕಿಂಗ್ ಕಮಿಟಿಯ ಸಭೆಯು ಅಕ್ಟೋಬರ್ 16, ಶನಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪಕ್ಷದ ಮುಖ್ಯ ಕಚೇರಿ ದೆಹಲಿಯಲ್ಲಿ ಈ ಸಭೆ ನಡೆಯಲಿದೆ ಎಂದು ಹೇಳಿಕೆ ಬಿಡುಗಡೆಗೊಳಿಸಲಾಗಿದೆ. ದೇಶದ ರಾಜಕೀಯ ಪರಿಸ್ಥಿತಿ, ಮುಂಬರುವ ಚುನಾವಣೆ, ಇತ್ಯಾದಿ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಲಾಗಿದೆ.

ಕಾಂಗ್ರೆಸ್​ ಈ ವೇಳೆ, ಪಂಜಾಬ್​ನ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಕೂಡ ಚರ್ಚಿಸುವ ಹಾಗೂ ಜಿ 23 ನಾಯಕರ ಪ್ರಶ್ನೆಗಳಿಗೆ ಉತ್ತರಿಸುವ ನಿರೀಕ್ಷೆ ಇದೆ. ಕಳೆದ 18 ತಿಂಗಳ ಅವಧಿಯಲ್ಲಿ ನಡೆದಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯು ಕೊರೊನಾ ಸಾಂಕ್ರಾಮಿಕದ ಕಾರಣದಿಂದ ವರ್ಚುವಲ್ ವಿಧಾನದಲ್ಲಿ ನಡೆದಿತ್ತು. ಈ ಬಾರಿ ದೆಹಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿರುವ ಬಗ್ಗೆ ತಿಳಿಸಲಾಗಿದೆ. ಸಭೆಯಲ್ಲಿ ರೈತರ ಹೋರಾಟ, ಅಕ್ಟೋಬರ್ 3ರಂದು ಉತ್ತರಪ್ರದೇಶದ ಲಖಿಂಪುರ ಕೇರಿಯಲ್ಲಿ ನಡೆದ ಘಟನೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕಳೆದ ತಿಂಗಳು, ಪಕ್ಷದ ಹಿರಿಯ ನಾಯಕ ಗುಲಾಮ್ ನಬಿ ಆಜಾದ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆ ನಡೆಸುವಂತೆ ತಿಳಿಸಿ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಪಂಜಾಬ್ ಹಾಗೂ ಗೋವಾ ಕಾಂಗ್ರೆಸ್​ನ ರಾಜಕೀಯ ಸ್ಥಿತಿಗತಿ ಮತ್ತು ಪಕ್ಷದ ಒಟ್ಟಾರೆ ಪರಿಸ್ಥಿತಿಯ ಬಗ್ಗೆ ಅವಲೋಕನ ಮಾಡುವಂತೆ ತಿಳಿಸಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಸಾಯುವ ಹಂತದಲ್ಲಿದೆ ಎಂದಿರುವ ನವಜೋತ್ ಸಿಧು ಹೈಕಮಾಂಡ್​ಗೆ ಮತ್ತೆ ತಲೆನೋವಾಗಿದ್ದಾರೆ!

ಇದನ್ನೂ ಓದಿ: ಲಖಿಂಪುರ್ ಖೇರಿ ಪ್ರಕರಣವು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಅವಕಾಶವನ್ನು ಹೆಚ್ಚಿಸಲಿದೆಯೇ? ಪ್ರಶಾಂತ್ ಕಿಶೋರ್ ಏನಂತಾರೆ?

Published On - 3:28 pm, Sat, 9 October 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?