AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶಕ್ಕೆ ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?-ನಿರ್ಧಾರ ಅವರ ಕೈಲಿದೆ ಎಂದ ಕಾಂಗ್ರೆಸ್​ ನಾಯಕ

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ನಂತರ ರಾಹುಲ್​ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದಾದ ಬಳಿಕ ಸೋನಿಯಾ ಗಾಂಧಿ ಆ ಸ್ಥಾನಕ್ಕೆ ಏರಿದ್ದಾರೆ.

ಉತ್ತರ ಪ್ರದೇಶಕ್ಕೆ ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?-ನಿರ್ಧಾರ ಅವರ ಕೈಲಿದೆ ಎಂದ ಕಾಂಗ್ರೆಸ್​ ನಾಯಕ
ಪ್ರಿಯಾಂಕಾ ಗಾಂಧಿ ವಾದ್ರಾ
TV9 Web
| Edited By: |

Updated on:Sep 19, 2021 | 9:59 AM

Share

ಲಖನೌ:  ಉತ್ತರ ಪ್ರದೇಶದಲ್ಲಿ ಮುಂದಿನ ವಿಧಾನಸಭೆ ಚುನಾವಣೆ (Uttar Pradesh Assembly Election) ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi)  ನೇತೃತ್ವದಲ್ಲೇ ನಡೆಯಲಿದೆ ಎಂದು ಕಾಂಗ್ರೆಸ್​ ನಾಯಕ ಸಲ್ಮಾನ್​ ಖುರ್ಷಿದ್​ ಹೇಳಿದ್ದಾರೆ. ಇನ್ನು ಪ್ರಿಯಾಂಕಾ ಗಾಂಧಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾ ಎಂಬ ಬಗ್ಗೆ ನಾವೇನೂ ಹೇಳುವುದಿಲ್ಲ. ಅದನ್ನು ಅವರೇ ನಿರ್ಧರಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯ ವೇಳೆ ಹೇಳಿದ್ದಾರೆ. 

ರಾಷ್ಟ್ರಮಟ್ಟದ ನಾಯಕತ್ವದಲ್ಲಿ ಏನಾದೂ ಬದಲಾವಣೆಗಳು ಆಗಬಹುದಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್​ಗೆ ಈಗಾಗಲೇ ಅಧ್ಯಕ್ಷರು ಇದ್ದಾರೆ. ಹಾಗಾಗಿ ಬೇರೆ ಅಧ್ಯಕ್ಷರನ್ನು ನೇಮಕ ಮಾಡುವ ಅಗತ್ಯವಿಲ್ಲ. ಈಗಿರುವ ಅಧ್ಯಕ್ಷರ ಬಗ್ಗೆ ನಾವೆಲ್ಲ ಕಾಂಗ್ರೆಸ್​ ನಾಯಕರು, ಕಾರ್ಯಕರ್ತರು ತುಂಬ ಗೌರವ ಹೊಂದಿದ್ದೇವೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ತಿಳಿಸಿದರು. ಹಾಗೇ, ಕಾಂಗ್ರೆಸ್ಸಿಗರಲ್ಲದ ಜನರಿಗೆ ನಮ್ಮ ಪಕ್ಷದ ಅಧ್ಯಕ್ಷರ ಬಗ್ಗೆ ತೃಪ್ತಿಯಿಲ್ಲ ಎಂದು ಹೇಳಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ನಂತರ ರಾಹುಲ್​ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದಾದ ಬಳಿಕ ಸೋನಿಯಾ ಗಾಂಧಿ ಆ ಸ್ಥಾನಕ್ಕೆ ಏರಿದ್ದಾರೆ. ಬೇರೆ ಯಾರನ್ನಾದರೂ ನೇಮಕ ಮಾಡುವವರೆಗೆ ತಾವು ಆ ಸ್ಥಾನದಲ್ಲಿ ಮುಂದುವರಿಯುವುದಾಗಿ ಸೋನಿಯಾ ಗಾಂಧಿ ಹೇಳಿದ್ದರು. ಆದರೆ ಅಧ್ಯಕ್ಷ ಸ್ಥಾನಕ್ಕೆ ಇನ್ಯಾರನ್ನೂ ಆಯ್ಕೆ ಮಾಡಲು ಕಾಂಗ್ರೆಸ್​ಗೆ ಸಾಧ್ಯವಾಗಿಲ್ಲ. ಈ ಮಧ್ಯೆ ಕೆಲವರು ರಾಹುಲ್ ಗಾಂಧಿಯೇ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ಒತ್ತಾಯಿಸುತ್ತಿದ್ದಾರೆ. ರಾಹುಲ್​ ಗಾಂಧಿ ಕಾಂಗ್ರೆಸ್​ ಅಧ್ಯಕ್ಷರಾಗಬೇಕು ಎಂದು ಕಾಂಗ್ರೆಸ್​ನ ಸಾಮಾಜಿಕ ಮಾಧ್ಯಮ ವಿಭಾಗ ಶನಿವಾರ ಒಮ್ಮತದಿಂದ ನಿರ್ಣಯ ಅಂಗೀಕಾರ ಮಾಡಿದೆ. ಕಳೆದ ವಾರ ದೆಹಲಿ ಪ್ರದೇಶ ಮಹಿಳಾ ಕಾಂಗ್ರೆಸ್​ ಕೂಡ ಇದೇ ರೀತಿಯ ನಿರ್ಣಯ ಪಾಸ್​ ಮಾಡಿದೆ.  ಅಂದಹಾಗೆ ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ಫೆಬ್ರವರಿ-ಮಾರ್ಚ್​​ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಜನಪ್ರಿಯ ಒಟಿಟಿಗೆ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾದ ರಾಮ್​ ಚರಣ್; ಇದಕ್ಕೆ ಅವರು ಪಡೆಯೋ ಹಣ ಇಷ್ಟೊಂದಾ?

Poetry : ಅವಿತಕವಿತೆ ; ‘ನಿನ್ನ ಸೇರಿ ಉಪ್ಪಾಗಲಾರೆ ಎಂದಿತು ತನ್ನೆಡೆ ಹರಿದುಬಂದ ನದಿ’

(Congress would contest in the Uttar Pradesh assembly polls under Priyanka Gandhi Vadra)

Published On - 9:51 am, Sun, 19 September 21

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ