AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶಕ್ಕೆ ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?-ನಿರ್ಧಾರ ಅವರ ಕೈಲಿದೆ ಎಂದ ಕಾಂಗ್ರೆಸ್​ ನಾಯಕ

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ನಂತರ ರಾಹುಲ್​ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದಾದ ಬಳಿಕ ಸೋನಿಯಾ ಗಾಂಧಿ ಆ ಸ್ಥಾನಕ್ಕೆ ಏರಿದ್ದಾರೆ.

ಉತ್ತರ ಪ್ರದೇಶಕ್ಕೆ ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?-ನಿರ್ಧಾರ ಅವರ ಕೈಲಿದೆ ಎಂದ ಕಾಂಗ್ರೆಸ್​ ನಾಯಕ
ಪ್ರಿಯಾಂಕಾ ಗಾಂಧಿ ವಾದ್ರಾ
TV9 Web
| Edited By: |

Updated on:Sep 19, 2021 | 9:59 AM

Share

ಲಖನೌ:  ಉತ್ತರ ಪ್ರದೇಶದಲ್ಲಿ ಮುಂದಿನ ವಿಧಾನಸಭೆ ಚುನಾವಣೆ (Uttar Pradesh Assembly Election) ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi)  ನೇತೃತ್ವದಲ್ಲೇ ನಡೆಯಲಿದೆ ಎಂದು ಕಾಂಗ್ರೆಸ್​ ನಾಯಕ ಸಲ್ಮಾನ್​ ಖುರ್ಷಿದ್​ ಹೇಳಿದ್ದಾರೆ. ಇನ್ನು ಪ್ರಿಯಾಂಕಾ ಗಾಂಧಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾ ಎಂಬ ಬಗ್ಗೆ ನಾವೇನೂ ಹೇಳುವುದಿಲ್ಲ. ಅದನ್ನು ಅವರೇ ನಿರ್ಧರಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯ ವೇಳೆ ಹೇಳಿದ್ದಾರೆ. 

ರಾಷ್ಟ್ರಮಟ್ಟದ ನಾಯಕತ್ವದಲ್ಲಿ ಏನಾದೂ ಬದಲಾವಣೆಗಳು ಆಗಬಹುದಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್​ಗೆ ಈಗಾಗಲೇ ಅಧ್ಯಕ್ಷರು ಇದ್ದಾರೆ. ಹಾಗಾಗಿ ಬೇರೆ ಅಧ್ಯಕ್ಷರನ್ನು ನೇಮಕ ಮಾಡುವ ಅಗತ್ಯವಿಲ್ಲ. ಈಗಿರುವ ಅಧ್ಯಕ್ಷರ ಬಗ್ಗೆ ನಾವೆಲ್ಲ ಕಾಂಗ್ರೆಸ್​ ನಾಯಕರು, ಕಾರ್ಯಕರ್ತರು ತುಂಬ ಗೌರವ ಹೊಂದಿದ್ದೇವೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ತಿಳಿಸಿದರು. ಹಾಗೇ, ಕಾಂಗ್ರೆಸ್ಸಿಗರಲ್ಲದ ಜನರಿಗೆ ನಮ್ಮ ಪಕ್ಷದ ಅಧ್ಯಕ್ಷರ ಬಗ್ಗೆ ತೃಪ್ತಿಯಿಲ್ಲ ಎಂದು ಹೇಳಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ನಂತರ ರಾಹುಲ್​ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದಾದ ಬಳಿಕ ಸೋನಿಯಾ ಗಾಂಧಿ ಆ ಸ್ಥಾನಕ್ಕೆ ಏರಿದ್ದಾರೆ. ಬೇರೆ ಯಾರನ್ನಾದರೂ ನೇಮಕ ಮಾಡುವವರೆಗೆ ತಾವು ಆ ಸ್ಥಾನದಲ್ಲಿ ಮುಂದುವರಿಯುವುದಾಗಿ ಸೋನಿಯಾ ಗಾಂಧಿ ಹೇಳಿದ್ದರು. ಆದರೆ ಅಧ್ಯಕ್ಷ ಸ್ಥಾನಕ್ಕೆ ಇನ್ಯಾರನ್ನೂ ಆಯ್ಕೆ ಮಾಡಲು ಕಾಂಗ್ರೆಸ್​ಗೆ ಸಾಧ್ಯವಾಗಿಲ್ಲ. ಈ ಮಧ್ಯೆ ಕೆಲವರು ರಾಹುಲ್ ಗಾಂಧಿಯೇ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ಒತ್ತಾಯಿಸುತ್ತಿದ್ದಾರೆ. ರಾಹುಲ್​ ಗಾಂಧಿ ಕಾಂಗ್ರೆಸ್​ ಅಧ್ಯಕ್ಷರಾಗಬೇಕು ಎಂದು ಕಾಂಗ್ರೆಸ್​ನ ಸಾಮಾಜಿಕ ಮಾಧ್ಯಮ ವಿಭಾಗ ಶನಿವಾರ ಒಮ್ಮತದಿಂದ ನಿರ್ಣಯ ಅಂಗೀಕಾರ ಮಾಡಿದೆ. ಕಳೆದ ವಾರ ದೆಹಲಿ ಪ್ರದೇಶ ಮಹಿಳಾ ಕಾಂಗ್ರೆಸ್​ ಕೂಡ ಇದೇ ರೀತಿಯ ನಿರ್ಣಯ ಪಾಸ್​ ಮಾಡಿದೆ.  ಅಂದಹಾಗೆ ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ಫೆಬ್ರವರಿ-ಮಾರ್ಚ್​​ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಜನಪ್ರಿಯ ಒಟಿಟಿಗೆ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾದ ರಾಮ್​ ಚರಣ್; ಇದಕ್ಕೆ ಅವರು ಪಡೆಯೋ ಹಣ ಇಷ್ಟೊಂದಾ?

Poetry : ಅವಿತಕವಿತೆ ; ‘ನಿನ್ನ ಸೇರಿ ಉಪ್ಪಾಗಲಾರೆ ಎಂದಿತು ತನ್ನೆಡೆ ಹರಿದುಬಂದ ನದಿ’

(Congress would contest in the Uttar Pradesh assembly polls under Priyanka Gandhi Vadra)

Published On - 9:51 am, Sun, 19 September 21

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!