AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

ಏಪ್ರಿಲ್ 22 ರಂದು ಲೋಕಸಭೆಯ ಸಚಿವಾಲಯದ ನೋಟಿಸ್‌ನ ಮೇರೆಗೆ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದ ರಾಹುಲ್, ತೀರ್ಪಿನ ವಿರುದ್ಧ ಸೂರತ್ ಸೆಷನ್ಸ್ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಶಿಕ್ಷೆಗೆ ತಡೆ ಕೋರಿದರು.

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 25, 2023 | 9:04 PM

Share

ಮುಖ್ಯಾಂಶಗಳು

  • ನ್ಯಾಯಾಲಯದ ಏಪ್ರಿಲ್ 20 ರ ಆದೇಶದ ವಿರುದ್ಧ ರಾಹುಲ್ ಮೇಲ್ಮನವಿ ಸಲ್ಲಿಸಿದ್ದಾರೆ
  • ಏಪ್ರಿಲ್ 22 ರಂದು ಲೋಕಸಭೆಯ ಸಚಿವಾಲಯದ ನೋಟಿಸ್‌ನ ಮೇರೆಗೆ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದ ರಾಹುಲ್
  • ಏಪ್ರಿಲ್ 3 ರಂದು, ರಾಹುಲ್ ಗಾಂಧಿಯವರು ಮ್ಯಾಜಿಸ್ಟ್ರೇಟ್ ತೀರ್ಪಿನ ವಿರುದ್ಧ ಸೆಷನ್ಸ್ ನ್ಯಾಯಾಲಯಕ್ಕೆ ತಮ್ಮ ಮನವಿಯನ್ನು ಸಲ್ಲಿಸಿದ್ದರು.

ಮಾನನಷ್ಟ ಮೊಕದ್ದಮೆಯಲ್ಲಿ (Defamation Case) ಶಿಕ್ಷೆಗೆ ತಡೆಯಾಜ್ಞೆ ಕೋರಿ ಸೂರತ್ ಸೆಷನ್ಸ್ ಕೋರ್ಟ್ ತನ್ನ ಮನವಿಯನ್ನು ತಿರಸ್ಕರಿಸಿದ ದಿನಗಳ ನಂತರ,  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಗುಜರಾತ್ ಹೈಕೋರ್ಟ್‌ಗೆ (Gujarat High Court) ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯದ ಏಪ್ರಿಲ್ 20 ರ ಆದೇಶದ ವಿರುದ್ಧ ರಾಹುಲ್ ಮೇಲ್ಮನವಿ ಸಲ್ಲಿಸಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಾಹುಲ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿತು ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ತೀರ್ಪಿನಿಂದಾಗಿ ಅವರು ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡರು. ಏಪ್ರಿಲ್ 22 ರಂದು ಲೋಕಸಭೆಯ ಸಚಿವಾಲಯದ ನೋಟಿಸ್‌ನ ಮೇರೆಗೆ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದ ರಾಹುಲ್, ತೀರ್ಪಿನ ವಿರುದ್ಧ ಸೂರತ್ ಸೆಷನ್ಸ್ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಶಿಕ್ಷೆಗೆ ತಡೆ ಕೋರಿದರು. ಒಂದು ವೇಳೆ ದೋಷಾರೋಪಣೆಗೆ ತಡೆ ನೀಡಿದರೆ, ನ್ಯಾಯಾಲಯದ ಅಂತಿಮ ತೀರ್ಪಿನವರೆಗೆ ಲೋಕಸಭಾ ಸಂಸದರಾಗಿ ಅವರ ಅನರ್ಹತೆಯನ್ನು ಹಿಂಪಡೆಯಲಾಗುತ್ತದೆ.

ಈ ಕಾನೂನು ಹೋರಾಟ ನಡೆಸುತ್ತಿರುವ ಕಾಂಗ್ರೆಸ್‌ನ ಹಿರಿಯ ಸಂಸದ ಮತ್ತು ವಕೀಲ ಅಭಿಷೇಕ್ ಸಿಂಘ್ವಿ ಕಾನೂನು ಮೆಟ್ಟಿಲು ಇದೆ. ಕೆಲವರು ಸೂಚಿಸಿದಂತೆ ರಾಹುಲ್ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಹೋಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.  ನಾವು ನೇರವಾಗಿ ಸುಪ್ರೀಂಕೋರ್ಟ್‌ಗೆ ಹೋದರೆ ಮತ್ತು ನ್ಯಾಯಾಧೀಶರು ನಮಗೆ ಮೊದಲು ಕೆಳ ನ್ಯಾಯಾಲಯಗಳಿಗೆ ಹೋಗಬೇಕಿತ್ತು ಎಂದು ಹೇಳಿದರೆ, ಇದನ್ನು ಸಲಹೆ ಮಾಡುವವರೇ ಮೊದಲು ನಮ್ಮನ್ನು ಟೀಕಿಸುತ್ತಾರೆ ಎಂದು ಸಿಂಘ್ವಿ ಹೇಳಿದ್ದಾರೆ.

ಏಪ್ರಿಲ್ 3 ರಂದು, ರಾಹುಲ್ ಗಾಂಧಿಯವರು ಮ್ಯಾಜಿಸ್ಟ್ರೇಟ್ ತೀರ್ಪಿನ ವಿರುದ್ಧ ಸೆಷನ್ಸ್ ನ್ಯಾಯಾಲಯಕ್ಕೆ ತಮ್ಮ ಮನವಿಯನ್ನು ಸಲ್ಲಿಸಿದ್ದರು. ನಂತರ ಅವರ ಮನವಿ ಇತ್ಯರ್ಥವಾಗುವವರೆಗೆ ಅವರಿಗೆ ಜಾಮೀನು ನೀಡಲಾಯಿತು. ನನ್ನ ಅನರ್ಹತೆಯು ಸರಿಪಡಿಸಲಾಗದ ನಷ್ಟ ಮತ್ತು ಬದಲಾಯಿಸಲಾಗದ ಗಾಯ ಎಂದು ರಾಹುಲ್ ಗಾಂಧಿಯವರು ಸೆಷನ್ಸ್ ನ್ಯಾಯಾಲಯಕ್ಕೆ ತಿಳಿಸಿದರು.

ಇದನ್ನೂ ಓದಿಏಪ್ರಿಲ್ 27ರಂದು ಚೀನಾ- ಭಾರತ ರಕ್ಷಣಾ ಸಚಿವರ ಭೇಟಿ; ಗಾಲ್ವಾನ್ ಸಂಘರ್ಷ ನಂತರ ಇದು ಮೊದಲನೇ ಸಭೆ

ದೋಷಾರೋಪಣೆ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಯಿಂದ ರಾಹುಲ್ ಗಾಂಧಿ ಎಂಟು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗುತ್ತಾರೆ. ಉನ್ನತ ನ್ಯಾಯಾಲಯವು ಅವರ ಅಪರಾಧವನ್ನು ರದ್ದುಗೊಳಿಸಿದರೆ ಅಥವಾ ಅವರು ಶಿಕ್ಷೆಯನ್ನು ಎರಡು ವರ್ಷಗಳಿಗಿಂತಲೂ ಕಡಿಮೆಗೊಳಿಸಿದರೆ ಮತ್ತೆ ಅರ್ಹತೆಯನ್ನು ಪಡೆಯಬಹುದು.

2019 ರ ಚುನಾವಣೆಗೆ ಪೂರ್ವಭಾವಿಯಾಗಿ ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ ಮೋದಿ ಉಪನಾಮದ ಹೇಳಿಕೆ ಮಾನಹಾನಿಕರವಲ್ಲ ಎಂದು ರಾಹುಲ್ ಗಾಂಧಿ ವಾದಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ಅವರ ಈ ಹೇಳಿಕೆ “ಬಾಲಿಶ, ದುರಹಂಕಾರದ ಪ್ರದರ್ಶನ” ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?