ಅಮೃತ್​​ಸರದ ಸಂಯೋಜಿತ ಅವಳಿ ಸೋಹ್ನಾ ಮತ್ತು ಮೋಹ್ನಾಗೆ ಸಿಕ್ಕಿತು ಸರ್ಕಾರಿ ಕೆಲಸ

ನಮಗೆ ಕೆಲಸದ ಬಗ್ಗೆ ತುಂಬಾ ಖುಷಿಯಾಗಿದೆ ಮತ್ತು ಡಿಸೆಂಬರ್ 20 ರಂದು ಸೇರಿದ್ದೇವೆ. ಅವಕಾಶಕ್ಕಾಗಿ ಪಂಜಾಬ್ ಸರ್ಕಾರ ಮತ್ತು ನಮಗೆ ಶಿಕ್ಷಣ ನೀಡಿದ ಪಿಂಗಲ್ವಾರಾ ಸಂಸ್ಥೆಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಅವರು  ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಅಮೃತ್​​ಸರದ ಸಂಯೋಜಿತ ಅವಳಿ ಸೋಹ್ನಾ ಮತ್ತು ಮೋಹ್ನಾಗೆ ಸಿಕ್ಕಿತು ಸರ್ಕಾರಿ ಕೆಲಸ
ಅವಳಿ ಸೋಹ್ನಾ- ಮೋಹ್ನಾ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Dec 23, 2021 | 7:30 PM

ದೆಹಲಿ: ಅಮೃತ್​​ಸರದ ಸಂಯೋಜಿತ ಅವಳಿಗಳಾದ ಸೋಹ್ನಾ(Sohna) ಮತ್ತು ಮೋಹ್ನಾಗೆ (Mohna) ಪಂಜಾಬ್ ಸ್ಟೇಟ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (PSPCL) ನಲ್ಲಿ ಉದ್ಯೋಗ ಲಭಿಸಿದೆ. 19ರ ಹರೆಯದ ಸೋಹ್ನಾ ಡಿಸೆಂಬರ್ 20 ರಂದು ಕೆಲಸ ಮಾಡಲು ಪ್ರಾರಂಭಿಸಿದರು. ಅವರು ಮೋಹ್ನಾ ಜೊತೆಗೆ PSPCL ನಲ್ಲಿ ವಿದ್ಯುತ್ ಉಪಕರಣಗಳನ್ನು ನೋಡಿಕೊಳ್ಳುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  “ನಮಗೆ ಕೆಲಸದ ಬಗ್ಗೆ ತುಂಬಾ ಸಂತೋಷವಾಗಿದೆ ಮತ್ತು ಡಿಸೆಂಬರ್ 20 ರಂದು ಸೇರಿದ್ದೇವೆ. ಅವಕಾಶಕ್ಕಾಗಿ ನಾವು ಪಂಜಾಬ್ ಸರ್ಕಾರ ಮತ್ತು ಪಿಂಗಲ್ವಾರಾ ಸಂಸ್ಥೆಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ,” ಎಂದು ಈ ಅವಳಿಗಳು ಹೇಳಿದ್ದಾರೆ.  ಇಲ್ಲಿನ ವಿದ್ಯುತ್ ಉಪಕರಣಗಳನ್ನು ನೋಡಿಕೊಳ್ಳಲು ಸೋಹ್ನಾ, ಮೋಹ್ನಾ ನಮಗೆ ಸಹಾಯ ಮಾಡುತ್ತಾರೆ. ಸೋಹ್ನಾಗೆ ಕೆಲಸ ಸಿಕ್ಕಿತು ಮತ್ತು ಮೋಹ್ನಾ ಜೊತೆಗೆ ಸಹಾಯ ಮಾಡುತ್ತಾರೆ” ಎಂದು ಪಿಎಸ್‌ಪಿಸಿಎಲ್‌ನ ಸಬ್‌ಸ್ಟೇಷನ್ ಜೂನಿಯರ್ ಎಂಜಿನಿಯರ್ ರವೀಂದರ್ ಕುಮಾರ್ ಹೇಳಿದರು. ಈ ಕ್ಷೇತ್ರದಲ್ಲಿ ಅನುಭವವಿದ್ದ ಕಾರಣ ಅವರನ್ನು ನೇಮಿಸಿಕೊಳ್ಳಲಾಗಿದೆ ಎಂದು ಕುಮಾರ್ ಹೇಳಿದರು. ಈ ಅವಕಾಶವನ್ನು ಒದಗಿಸಿದ್ದಕ್ಕಾಗಿ ಅವಳಿಗಳು ಪಂಜಾಬ್ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು.

ನಮಗೆ ಕೆಲಸದ ಬಗ್ಗೆ ತುಂಬಾ ಖುಷಿಯಾಗಿದೆ ಮತ್ತು ಡಿಸೆಂಬರ್ 20 ರಂದು ಸೇರಿದ್ದೇವೆ. ಅವಕಾಶಕ್ಕಾಗಿ ಪಂಜಾಬ್ ಸರ್ಕಾರ ಮತ್ತು ನಮಗೆ ಶಿಕ್ಷಣ ನೀಡಿದ ಪಿಂಗಲ್ವಾರಾ ಸಂಸ್ಥೆಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಅವರು  ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಈ ಅವಳಿಗಳು ಜೂನ್ 14, 2003 ರಂದು ನವದೆಹಲಿಯಲ್ಲಿ ಎರಡು ಹೃದಯಗಳು, ತೋಳುಗಳು, ಮೂತ್ರಪಿಂಡಗಳು ಮತ್ತು ಬೆನ್ನುಹುರಿಗಳೊಂದಿಗೆ ಜನಿಸಿದರು. ಆದರೆ ಯಕೃತ್ತು, ಪಿತ್ತಕೋಶ ಮತ್ತು ಕಾಲುಗಳು ಇಬ್ಬರಿಗೂ ಒಂದೇ. ಜನನದ ನಂತರ, ಸೋಹ್ನಾ ಮತ್ತು ಮೋಹ್ನಾ ಅವರನ್ನು ಅವರ ಪೋಷಕರು ಕೈಬಿಟ್ಟಿದ್ದು ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ಗೆ ಕರೆದೊಯ್ಯಲಾಯಿತು. ಶಸ್ತ್ರಚಿಕಿತ್ಸೆಯು ಮಾರಣಾಂತಿಕ ತೊಡಕುಗಳನ್ನು ಉಂಟುಮಾಡಬಹುದು ಎಂದು ಏಮ್ಸ್ ನ ವೈದ್ಯರು ಅವರನ್ನು ಬೇರ್ಪಡಿಸುವುದು ಬೇಡ ಎಂದು ನಿರ್ಧರಿಸಿದ್ದರು.

ಇದನ್ನೂ ಓದಿ: PM Modi in Varanasi ಗೋವುಗಳ ಬಗ್ಗೆ ಗೇಲಿ ಮಾಡುವವರು ಕೋಟಿಗಟ್ಟಲೆ ಜನರ ಜೀವನೋಪಾಯವೇ ಅವು ಎಂಬುದನ್ನು ಮರೆಯುತ್ತಾರೆ: ಮೋದಿ

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ