AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chief Minister of Meghalaya: ಮೇಘಾಲಯದ ಮುಖ್ಯಮಂತ್ರಿಯಾಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ

ಮೇಘಾಲಯದ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಕಾನ್ರಾಡ್ ಸಂಗ್ಮಾ ಅವರು ಇಂದು (ಮಾ.7) ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಅಕ್ಷಯ್​ ಪಲ್ಲಮಜಲು​​
|

Updated on:Mar 07, 2023 | 3:26 PM

Share

ಶಿಲ್ಲಾಂಗ್: ಮೇಘಾಲಯ(Meghalaya) ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಕಾನ್ರಾಡ್ ಸಂಗ್ಮಾ (Conrad Sangma) ಅವರು ಇಂದು (ಮಾ.7) ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮೇಘಾಲಯದ ರಾಜ್ಯಪಾಲ ಫಾಗು ಚೌಹಾಣ್ ಅವರು ಸಂಗ್ಮಾ ಅವರಿಗೆ ಮುಖ್ಯಮಂತ್ರಿಯಾಗಿ ಮತ್ತು ಇಬ್ಬರು ನಾಯಕರಿಗೆ ಉಪಮುಖ್ಯಮಂತ್ರಿಯಾಗಿ, ಇತರ ಒಂಬತ್ತು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಹೊಸದಾಗಿ ಚುನಾಯಿತರಾದ ಹನ್ನೊಂದು ಶಾಸಕರು ಕೂಡ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಂಪುಟದಲ್ಲಿ ಇಬ್ಬರು ಉಪಮುಖ್ಯಮಂತ್ರಿಗಳಾಗಿ ಪ್ರೆಸ್ಟೋನ್ ಟೈನ್ಸಾಂಗ್ ಮತ್ತು ಸ್ನಿಯಾವ್ಭಲ್ಯಾಂಡ್ ಧಾರ್ ಇರಲಿದ್ದಾರೆ. ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ 2.0 ಎಂದು ಕರೆಯಲ್ಪಡುವ ಹೊಸ ಸರ್ಕಾರವನ್ನು ರಚನೆ ಮಾಡಿದೆ. ಈ ಸಚಿವ ಸಂಪುಟವು ಎಂ ಅಂಪಾರೀನ್ ಲಿಂಗ್ಡೋಹ್ ಎಂಬ ಒಬ್ಬ ಮಹಿಳಾ ಸಚಿವರನ್ನು ಹೊಂದಿದೆ.

ಹೊಸ ಕ್ಯಾಬಿನೆಟ್‌ನಲ್ಲಿ ಎನ್‌ಪಿಪಿ ಪಕ್ಷದಿಂದ ರಕ್ಕಮ್ ಎ ಸಂಗ್ಮಾ, ಮಾರ್ಕ್ಯೂಸ್ ಎಂ ಮರಕ್, ಎಟಿ ಮೊಂಡಲ್ ಮತ್ತು ಕಮಿಂಗೋನ್ ಯಂಬನ್​​. ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ (ಯುಡಿಪಿ) ಯಿಂದ ಪಾಲ್ ಲಿಂಗ್ಡೋಹ್ ಮತ್ತು ಕಿರ್ಮೆನ್ ಶೈಲ್ಲಾ ಹಾಗೂ ಬಿಜೆಪಿಯಿಂದ ಎಎಲ್ ಹೆಕ್ ಮತ್ತು ಶಕ್ಲಿಯಾರ್ ವಾರ್ಜ್ರಿ, ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದಿಂದ ಎಚ್‌ಎಸ್‌ಪಿಡಿಪಿಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: 50 ವರ್ಷಗಳ ಗಡಿ ವಿವಾದ ಬಗೆಹರಿಸಲು ಅಸ್ಸಾಂ, ಮೇಘಾಲಯ ಮುಖ್ಯಮಂತ್ರಿಗಳಿಂದ ಐತಿಹಾಸಿಕ ಒಪ್ಪಂದಕ್ಕೆ ಸಹಿ

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಂಗ್ಮಾ ಅವರ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಕಳೆದ ತಿಂಗಳು ವಿಧಾನಸಭೆ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು ಆದರೆ ಸರಿಯಾದ ಬಹುಮತ ಬರುವ ಸಾಧ್ಯತೆವಿಲ್ಲ ಎಂದು ಹೊಸ ಸರ್ಕಾರವನ್ನು ರಚಿಸಲು ಚುನಾವಣೋತ್ತರ ಮೈತ್ರಿ ಮಾಡಿಕೊಂಡರು.

Published On - 12:29 pm, Tue, 7 March 23

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!