AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Lockdown: ಕೋವಿಡ್ 2ನೇ ಅಲೆಗೆ ಕಡಿವಾಣ ಹಾಕಲು ಲಾಕ್​ಡೌನ್ ಹೇರಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ಸೂಚನೆ

‘ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಲಾಕ್​ಡೌನ್ ಹೇರುವ ಬಗ್ಗೆಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಲೋಚಿಸಬೇಕು’ ಎಂದು ಸುಪ್ರೀಂಕೋರ್ಟ್​ ಸರ್ಕಾರಗಳಿಗೆ ಸಲಹೆ ಮಾಡಿದೆ.

Covid Lockdown: ಕೋವಿಡ್ 2ನೇ ಅಲೆಗೆ ಕಡಿವಾಣ ಹಾಕಲು ಲಾಕ್​ಡೌನ್ ಹೇರಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ಸೂಚನೆ
ಸುಪ್ರೀಂಕೋರ್ಟ್​
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:May 03, 2021 | 10:34 AM

ದೆಹಲಿ: ‘ದೇಶದಲ್ಲಿ ಕೊರೊನಾ 2ನೇ ಅಲೆಯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಹೆಚ್ಚು ಜನರು ಸೇರುವ, ಸೂಪರ್ ಸ್ಪ್ರೆಡರ್ ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಲಾಕ್​ಡೌನ್ ಹೇರುವ ಬಗ್ಗೆಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಲೋಚಿಸಬೇಕು’ ಎಂದು ಸುಪ್ರೀಂಕೋರ್ಟ್​ ಭಾನುವಾರ ರಾತ್ರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಲಹೆ ಮಾಡಿದೆ.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಭಾನುವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಲವು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದೆ. ‘ಲಾಕ್​ಡೌನ್​ನ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳ ಬಗ್ಗೆ ನಮಗೆ ಅರಿವಿದೆ. ಆದರಲ್ಲಿಯೂ ಬಡವರ ಮೇಲೆ ಲಾಕ್​ಡೌನ್​ನ ಪರಿಣಾಮಗಳು ತೀವ್ರತರವಾಗಿರುತ್ತವೆ ಎಂಬುದು ನಮಗೆ ತಿಳಿದಿದೆ. ಲಾಕ್​ಡೌನ್ ಹೇರಿದರೆ ಈ ಸಮುದಾಯದ ಹಿತ ಕಾಪಾಡಲು ಅಗತ್ಯ ಕ್ರಮಗಳನ್ನೂ ಸರ್ಕಾರಗಳು ತೆಗೆದುಕೊಳ್ಳಬೇಕು’ ಎಂದು ಸುಪ್ರೀಂಕೋರ್ಟ್​ ಹೇಳಿದೆ.

‘ಸ್ಥಳೀಯ ಗುರುತಿನ ಪುರಾವೆಗಳು ಇಲ್ಲ ಎನ್ನುವ ಕಾರಣಕ್ಕೆ ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಆಡಳಿತ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಬಾರದು. ಆಸ್ಪತ್ರೆಗಳಿಗೆ ರೋಗಿಗಳನ್ನು ದಾಖಲು ಮಾಡಿಕೊಳ್ಳುವ ಕುರಿತು ಕೇಂದ್ರ ಸರ್ಕಾರವು ಇನ್ನು 2 ವಾರಗಳ ಒಳಗೆ ರಾಷ್ಟ್ರೀಯ ನೀತಿಯೊಂದನ್ನು ರೂಪಿಸಬೇಕು. ಇದನ್ನು ಎಲ್ಲ ರಾಜ್ಯ ಸರ್ಕಾರಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸುಪ್ರೀಂಕೋರ್ಟ್​ ಸೂಚಿಸಿದೆ.

‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಪ್ರಮಾಣದಲ್ಲಿ ಆಕ್ಸಿಜನ್ ದಾಸ್ತಾನು ಇರಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಊಹಿಸಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾದರೆ, ಅದನ್ನು ಎದುರಿಸಲು ಬೇಕಿರುವಷ್ಟು ತುರ್ತು ಬಳಕೆ ವಸ್ತುಗಳ ದಾಸ್ತಾನು ಇರಿಸಿಕೊಳ್ಳಬೇಕು. ಮುಂದಿನ ನಾಲ್ಕು ದಿನಗಳ ಒಳಗೆ ತುರ್ತು ದಾಸ್ತಾನು ಸಿದ್ಧವಾಗಬೇಕು. ಇದನ್ನು ಪ್ರತಿದಿನವೂ ಪರಿಶೀಲಿಸಬೇಕು. ಯಾವುದೇ ರಾಜ್ಯಕ್ಕೆ ಆಕ್ಸಿಜನ್ ಸರಬರಾಜಿನಲ್ಲಿ ತೊಂದರೆಯಾಗಬಾರದು’ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಸುಪ್ರೀಂಕೋರ್ಟ್​ ಸ್ವಯಂಪ್ರೇರಿತವಾಗಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸಿತು. ಈ ವೇಳೆ ಆಕ್ಸಿಜನ್, ಜೀವರಕ್ಷಕ ಔಷಧಿಗಳು ಮತ್ತು ಲಸಿಕೆಗಳ ಪೂರೈಕೆ ಬಗ್ಗೆ ಸುಪ್ರೀಂಕೋರ್ಟ್​ ಪರಾಮರ್ಶೆ ನಡೆಸಿತು.

ಹರಿಯಾಣ, ಒಡಿಶಾ ಲಾಕ್​ಡೌನ್ ಹರಿಯಾಣ ಮತ್ತು ಒಡಿಶಾ ರಾಜ್ಯಗಳಲ್ಲಿ ಲಾಕ್​ಡೌನ್ ಘೋಷಿಸಲಾಗಿದೆ. ಹರಿಯಾಣದಲ್ಲಿ ಒಂದು ವಾರ ಮತ್ತು ಒಡಿಶಾದಲ್ಲಿ 14 ದಿನಗಳ ಅವಧಿಗೆ ಲಾಕ್‌ಡೌನ್ ನಿರ್ಬಂಧ ಜಾರಿಯಲ್ಲಿರುತ್ತದೆ.

(Consider Lockdown to Curb 2nd Wave of Covid 19 Supreme Court to Centre State govts)

ಇದನ್ನೂ ಓದಿ: ವ್ಯಕ್ತಿ-ವ್ಯಕ್ತಿತ್ವ: ಕಡಿಮೆ ಮಾತು, ಖಚಿತ ನಿಲುವು- ಇದು ಸುಪ್ರೀಂಕೋರ್ಟ್​ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ಅವರ ಕಾರ್ಯಶೈಲಿ

ಇದನ್ನೂ ಓದಿ: ಆರ್​ಜೆಡಿಯ ಮಾಜಿ ಸಂಸದ, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮೊಹಮ್ಮದ್ ಶಹಾಬುದ್ದೀನ್ ಕೊವಿಡ್​ನಿಂದ ನಿಧನ

Published On - 10:05 am, Mon, 3 May 21

Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ