AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Assembly Elections 2021: 173 ಕ್ಷೇತ್ರಗಳಲ್ಲೂ ಕರುಣಾನಿಧಿ ಸ್ಪರ್ಧೆ! ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಘೋಷಣೆ

ಎಂ.ಕೆ. ಸ್ಟಾಲಿನ್ ಈ ಬಾರಿಯೂ ಕೂಡ ಕೊಲತ್ತೂರ್​ನಿಂದ ಸ್ಪರ್ಧಿಸಲಿದ್ದಾರೆ. ಸ್ಟಾಲಿನ್ ಪುತ್ರ ಉದಯನಿಧಿ, ಚೆಪಾಕ್ ಕ್ಷೇತ್ರದದಿಂದ ಕಣಕ್ಕಿಳಿಯಲಿದ್ದಾರೆ. ಡಿಎಂಕೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಎಂ.ಕೆ. ಸ್ಟಾಲಿನ್ ಇಂದು (ಮಾರ್ಚ್ 12) ಘೋಷಣೆ ಮಾಡಿದ್ದಾರೆ.

Tamil Nadu Assembly Elections 2021: 173 ಕ್ಷೇತ್ರಗಳಲ್ಲೂ ಕರುಣಾನಿಧಿ ಸ್ಪರ್ಧೆ! ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಘೋಷಣೆ
ತಮಿಳುನಾಡು ಡಿಎಂಕೆ ನಾಯಕ ಸ್ಟಾಲಿನ್
TV9 Web
| Edited By: |

Updated on:Apr 06, 2022 | 7:14 PM

Share

ಚೆನ್ನೈ: ಎಲ್ಲಾ ಕ್ಷೇತ್ರಗಳಿಂದಲೂ ಎಂ. ಕರುಣಾನಿಧಿಯೇ ಅಭ್ಯರ್ಥಿಯಾಗಿ ನಿಂತಿದ್ದಾರೆಂದು ಪರಿಗಣಿಸಲು ದ್ರಾವಿಡ ಮುನ್ನೇತ್ರ ಕಳಗಂ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ 173 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಘೋಷಣೆ ಮಾಡಿದ ಅವರು ಹೀಗೆ ತಿಳಿಸಿದ್ದಾರೆ. ಡಿಎಂಕೆ ಮುಖ್ಯಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂ.ಕೆ. ಸ್ಟಾಲಿನ್, ಮಾರ್ಚ್ 15ರಂದು ನಾಮಪತ್ರ ಸಲ್ಲಿಸುತ್ತೇನೆ. ಬಳಿಕ ಮುಂದಿನ ಹಂತದ ಚುನಾವಣಾ ಪ್ರಚಾರಕ್ಕೆ ಲಗ್ಗೆ ಇಡುತ್ತೇನೆ ಎಂದು ತಿಳಿಸಿದ್ದಾರೆ.

ಎಂ.ಕೆ. ಸ್ಟಾಲಿನ್ ಈ ಬಾರಿಯೂ ಕೂಡ ಕೊಲತ್ತೂರ್​ನಿಂದ ಸ್ಪರ್ಧಿಸಲಿದ್ದಾರೆ. ಸ್ಟಾಲಿನ್ ಪುತ್ರ ಉದಯನಿಧಿ, ಚೆಪಾಕ್ ಕ್ಷೇತ್ರದದಿಂದ ಕಣಕ್ಕಿಳಿಯಲಿದ್ದಾರೆ. ಟಿಟಿವಿ ದಿನಕರನ್ ನೇತೃತ್ವದ AMMK ಸೇರಲು AIADMK ತೊರೆದಿದ್ದ ತಂಗ ತಮಿಳ್​ಸೆಲ್ವಂ ಬಳಿಕ DMK ಪಕ್ಷದ ಜೊತೆಯಾಗಿದ್ದರು. ಇದೀಗ, ತಮಿಳ್​ಸೆಲ್ವಂಗೆ ಡಿಎಂಕೆ ಪಕ್ಷ ಬೋದಿನಾಯಕನೂರ್​ನಿಂದ ಟಿಕೆಟ್ ನೀಡಿದೆ.

ಬಹುತೇಕ ಹಾಲಿ ಶಾಸಕರಿಗೇ ಈ ಬಾರಿಯೂ ಕೂಡ ಚುನಾವಣಾ ಸ್ಪರ್ಧೆಗೆ ಅವಕಾಶ ನೀಡಲಾಗಿದೆ. ಪಕ್ಷದ ಹಿರಿಯರಾದ ದುರೈ ಮುರುಗನ್, ಕೆ.ಎನ್. ನೆಹ್ರು, ಕೆ. ಪೊನ್​​ಮುಡಿ ಮತ್ತು ಎಂ.ಆರ್​.ಕೆ. ಪನೀರ್​ಸೆಲ್ವಂಗೆ ಈ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಲಭಿಸಿದೆ.

ದ್ರಾವಿಡ ಮುನ್ನೇತ್ರ ಕಳಗಂ ಪಕ್ಷವು ಕಾಂಗ್ರೆಸ್ ಹಾಗೂ ಇತರ ಎಡಪಕ್ಷಗಳೊಂದಿಗೆ ಚುನಾವಣಾ ಕಣದಲ್ಲಿ ಭಾಗಿಯಾಗಲಿದೆ. ತಮಿಳುನಾಡು ವಿಧಾನಸಭೆಯ ಒಟ್ಟು 234 ಕ್ಷೇತ್ರಗಳ ಪೈಕಿ 173ರಲ್ಲಿ ಡಿಎಂಕೆ ತನ್ನ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಉಳಿದಂತೆ, ಕಾಂಗ್ರೆಸ್, MDMK, VCK ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ.

ಮಕ್ಕಳ್ ನೀಧಿ ಮಯಂ ಪಕ್ಷದ ಕಮಲ್ ಹಾಸನ್ ಕೊಯಮತ್ತೂರ್ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಉಪಮುಖ್ಯಮಂತ್ರಿ ಒ. ಪನೀರ್​ಸೆಲ್ವಂ AOADMK ಅಭ್ಯರ್ಥಿಯಾಗಿ ಬೋದಿನಾಯಕನೂರ್​ನಿಂದ ಇಂದು (ಮಾರ್ಚ್ 12) ನಾಮಪತ್ರ ಸಲ್ಲಿಸಿದ್ದಾರೆ.

ಸಿ-ವೋಟರ್ ಸಮೀಕ್ಷೆ ಏನು ಹೇಳುತ್ತಿದೆ? ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಮತ ಎಣಿಕೆ ದಿನಾಂಕಗಳು ಪ್ರಕಟವಾಗಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಏಪ್ರಿಲ್ 6ರಂದು ಚುನಾವಣೆ ಮತ್ತು ಮೇ 2ರಂದು ಮತ ಎಣಿಕೆ ನಡೆಯಲಿದೆ. ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟ 158 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು. ಒಟ್ಟು 234 ಕ್ಷೇತ್ರಗಳಲ್ಲಿ, ಎಐಡಿಎಂಕೆ 65 ಸ್ಥಾನಗಳನ್ನು ಮಾತ್ರ ಗೆಲ್ಲಬಹುದು ಎಂದು ಸಿ-ವೋಟರ್ ಸಮೀಕ್ಷೆ ಹೇಳುತ್ತಿದೆ.

ಇದನ್ನೂ ಓದಿ: Tamil Nadu Assembly Elections 2021: ತಮಿಳುನಾಡು ಚುನಾವಣೆಗೆ ಎಐಎಡಿಎಂಕೆ ಪಕ್ಷದ 171 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

West Bengal Assembly Elections 2021: ನಂದಿಗ್ರಾಮದಲ್ಲಿ ಇಂದು ಬಿಜೆಪಿ ನೇತಾರ ಸುವೇಂದು ಅಧಿಕಾರಿ ನಾಮಪತ್ರ ಸಲ್ಲಿಕೆ

Published On - 3:16 pm, Fri, 12 March 21

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ