AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರ್ಭೂಮ್ ಹತ್ಯೆಯ ಹಿಂದೆ ಪಿತೂರಿ, ಬಿಜೆಪಿ ಆದೇಶವನ್ನು ಸಿಬಿಐ ಅನುಸರಿಸಿದರೆ ಪ್ರತಿಭಟನೆ: ಮಮತಾ ಎಚ್ಚರಿಕೆ

ಘಟನೆಯ ಬಗ್ಗೆ ಮಾತನಾಡಿದ ಬ್ಯಾನರ್ಜಿ, ಉತ್ತರ ಬಂಗಾಳದ ಆರು ದಿನಗಳ ಪ್ರವಾಸದಲ್ಲಿತೃಣಮೂಲ ಕಾರ್ಯಕರ್ತನನ್ನು ಇನ್ನೊಬ್ಬ ಪಕ್ಷದ ಕಾರ್ಯಕರ್ತ ಕೊಂದಿದ್ದಾನೆ. ಆದರೆ ಟಿಎಂಸಿಯನ್ನು ಮಾತ್ರ ಎಲ್ಲೆಡೆ ಟೀಕೆ ಮಾಡಲಾಗುತ್ತಿದೆ...

ಬಿರ್ಭೂಮ್ ಹತ್ಯೆಯ ಹಿಂದೆ ಪಿತೂರಿ, ಬಿಜೆಪಿ ಆದೇಶವನ್ನು ಸಿಬಿಐ ಅನುಸರಿಸಿದರೆ ಪ್ರತಿಭಟನೆ: ಮಮತಾ ಎಚ್ಚರಿಕೆ
ಮಮತಾ ಬ್ಯಾನರ್ಜಿ
TV9 Web
| Edited By: |

Updated on: Mar 27, 2022 | 6:30 PM

Share

ಬಿರ್ಭೂಮ್‌ನಲ್ಲಿ (Birbhum killings) ಸ್ಥಳೀಯ ಟಿಎಂಸಿ ನಾಯಕನ ಹತ್ಯೆಯ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಎಂಟು ಜನರನ್ನು ಸಜೀವ ದಹನ ಮಾಡಿದ್ದ ಪ್ರಕರಣದ ಹಿಂದೆ”ಪಿತೂರಿ” ಇದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಭಾನುವಾರ ಹೇಳಿದ್ದಾರೆ. ಸಿಬಿಐ ತನಿಖೆ ನಡೆಸುವಾಗ ಬಿಜೆಪಿಯ ಆದೇಶಗಳನ್ನು ಅನುಸರಿಸಿದರೆ ತೃಣಮೂಲ ಕಾಂಗ್ರೆಸ್  (TMC) ಪ್ರತಿಭಟಿಸಲಿದೆ ಎಂದು ಅವರು ಹೇಳಿದರು.ಉತ್ತರ ಬಂಗಾಳದ ಬಾಗ್ಡೋಗ್ರಾದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, “ರಾಮ್‌ಪುರಹತ್ ಘಟನೆಯ ಹಿಂದೆ ಪಿತೂರಿ ಇದೆ ಎಂದು ನಾನು ಇನ್ನೂ ಭಾವಿಸುತ್ತೇನೆ. ತನಿಖೆಯನ್ನು ಸಿಬಿಐಗೆ ವಹಿಸಿರುವುದು ಒಳ್ಳೆಯ ನಿರ್ಧಾರ. ಆದರೆ ಅವರು ಕೇವಲ ಬಿಜೆಪಿಯ ಆದೇಶಗಳನ್ನು ಅನುಸರಿಸಿದರೆ, ನಾವು ಪ್ರತಿಭಟನೆಗೆ ಸಿದ್ಧರಿದ್ದೇವೆ. ಟ್ಯಾಗೋರ್ ಅವರ ನೊಬೆಲ್ ಪ್ರಶಸ್ತಿ ಕಳ್ಳತನ, ನೇತಾಜಿ ಘಟನೆ ಮತ್ತು ತಾಪಸಿ ಮಲಿಕ್ ಪ್ರಕರಣದ ತನಿಖೆ ಸೇರಿದಂತೆ ಸಿಬಿಐ ನ್ಯಾಯ ಒದಗಿಸಲು ವಿಫಲವಾಗಿರುವುದನ್ನು ನಾವು ಹಿಂದಿನ ನಿದರ್ಶನಗಳಲ್ಲಿ ನೋಡಿದ್ದೇವೆ. ಬದಲಿಗೆ ವಿಶೇಷ ತನಿಖಾ ತಂಡವೇ ಉತ್ತಮ ತನಿಖೆ ನಡೆಸಿದೆ ಎಂದಿದ್ದಾರೆ. ಈ ವಾರದ ಆರಂಭದಲ್ಲಿ ಎಂಟು ಜನರನ್ನು ಸಜೀವ ದಹನಗೊಳಿಸಿದ ಬಿರ್ಭೂಮ್ ಬೊಗ್ಟುಯಿ ಗ್ರಾಮದಲ್ಲಿ ನಡೆದ ಹತ್ಯೆಗಳ ತನಿಖೆ ಮತ್ತು ಏಪ್ರಿಲ್ 7 ರಂದು ಅದರ ಪ್ರಾಥಮಿಕ ವರದಿಯನ್ನು ಸಲ್ಲಿಸಲು ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಸಿಬಿಐಗೆ ಕೇಳಿದೆ. ಮುಂದಿನ ತನಿಖೆ ನಡೆಸಲು ಸಿಬಿಐಗೆ ಸಂಪೂರ್ಣ ಸಹಕಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

ಘಟನೆಯ ಬಗ್ಗೆ ಮಾತನಾಡಿದ ಬ್ಯಾನರ್ಜಿ, ಉತ್ತರ ಬಂಗಾಳದ ಆರು ದಿನಗಳ ಪ್ರವಾಸದಲ್ಲಿ, “ತೃಣಮೂಲ ಕಾರ್ಯಕರ್ತನನ್ನು ಇನ್ನೊಬ್ಬ ಪಕ್ಷದ ಕಾರ್ಯಕರ್ತ ಕೊಂದಿದ್ದಾನೆ. ಆದರೆ ಟಿಎಂಸಿಯನ್ನು ಮಾತ್ರ ಎಲ್ಲೆಡೆ ಟೀಕೆ ಮಾಡಲಾಗುತ್ತಿದೆ. ಪ್ರಕರಣದ ತನಿಖೆ ಮತ್ತು ಘಟನೆಯ ಮೂಲ ಕಾರಣವನ್ನು ತಿಳಿಯಲು ನಾವು ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಉತ್ತರ ಪ್ರದೇಶ, ದೆಹಲಿ, ಕರ್ನಾಟಕ, ತ್ರಿಪುರಾ ಮತ್ತು ಅಸ್ಸಾಂನಲ್ಲಿ ಇಂತಹ ಹಲವು ಘಟನೆಗಳು ನಡೆದಿವೆ. ಹಲವು ಸಂದರ್ಭಗಳಲ್ಲಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಘಟನೆ ನಡೆದ ಸ್ಥಳಕ್ಕೆ ತೆರಳಲು ಅವಕಾಶ ನೀಡಿರಲಿಲ್ಲ. ಆದರೆ ಬಿರ್ಭೂಮ್ ನಲ್ಲಿ ನಾವು ಯಾವುದೇ ರಾಜಕೀಯ ಪಕ್ಷವು ಸ್ಥಳಕ್ಕೆ ಭೇಟಿ ನೀಡುವುದನ್ನು ತಡೆಯಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಬಿರ್ಭೂಮ್‌ ಜಿಲ್ಲೆಯ ಫುಟ್ಬಾಲ್ ಮೈದಾನದ ಬಳಿ ಕಚ್ಚಾ ಬಾಂಬ್‌ ಪತ್ತೆ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು