AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರ್ಭೂಮ್ ಹತ್ಯೆಯ ಹಿಂದೆ ಪಿತೂರಿ, ಬಿಜೆಪಿ ಆದೇಶವನ್ನು ಸಿಬಿಐ ಅನುಸರಿಸಿದರೆ ಪ್ರತಿಭಟನೆ: ಮಮತಾ ಎಚ್ಚರಿಕೆ

ಘಟನೆಯ ಬಗ್ಗೆ ಮಾತನಾಡಿದ ಬ್ಯಾನರ್ಜಿ, ಉತ್ತರ ಬಂಗಾಳದ ಆರು ದಿನಗಳ ಪ್ರವಾಸದಲ್ಲಿತೃಣಮೂಲ ಕಾರ್ಯಕರ್ತನನ್ನು ಇನ್ನೊಬ್ಬ ಪಕ್ಷದ ಕಾರ್ಯಕರ್ತ ಕೊಂದಿದ್ದಾನೆ. ಆದರೆ ಟಿಎಂಸಿಯನ್ನು ಮಾತ್ರ ಎಲ್ಲೆಡೆ ಟೀಕೆ ಮಾಡಲಾಗುತ್ತಿದೆ...

ಬಿರ್ಭೂಮ್ ಹತ್ಯೆಯ ಹಿಂದೆ ಪಿತೂರಿ, ಬಿಜೆಪಿ ಆದೇಶವನ್ನು ಸಿಬಿಐ ಅನುಸರಿಸಿದರೆ ಪ್ರತಿಭಟನೆ: ಮಮತಾ ಎಚ್ಚರಿಕೆ
ಮಮತಾ ಬ್ಯಾನರ್ಜಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Mar 27, 2022 | 6:30 PM

Share

ಬಿರ್ಭೂಮ್‌ನಲ್ಲಿ (Birbhum killings) ಸ್ಥಳೀಯ ಟಿಎಂಸಿ ನಾಯಕನ ಹತ್ಯೆಯ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಎಂಟು ಜನರನ್ನು ಸಜೀವ ದಹನ ಮಾಡಿದ್ದ ಪ್ರಕರಣದ ಹಿಂದೆ”ಪಿತೂರಿ” ಇದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಭಾನುವಾರ ಹೇಳಿದ್ದಾರೆ. ಸಿಬಿಐ ತನಿಖೆ ನಡೆಸುವಾಗ ಬಿಜೆಪಿಯ ಆದೇಶಗಳನ್ನು ಅನುಸರಿಸಿದರೆ ತೃಣಮೂಲ ಕಾಂಗ್ರೆಸ್  (TMC) ಪ್ರತಿಭಟಿಸಲಿದೆ ಎಂದು ಅವರು ಹೇಳಿದರು.ಉತ್ತರ ಬಂಗಾಳದ ಬಾಗ್ಡೋಗ್ರಾದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, “ರಾಮ್‌ಪುರಹತ್ ಘಟನೆಯ ಹಿಂದೆ ಪಿತೂರಿ ಇದೆ ಎಂದು ನಾನು ಇನ್ನೂ ಭಾವಿಸುತ್ತೇನೆ. ತನಿಖೆಯನ್ನು ಸಿಬಿಐಗೆ ವಹಿಸಿರುವುದು ಒಳ್ಳೆಯ ನಿರ್ಧಾರ. ಆದರೆ ಅವರು ಕೇವಲ ಬಿಜೆಪಿಯ ಆದೇಶಗಳನ್ನು ಅನುಸರಿಸಿದರೆ, ನಾವು ಪ್ರತಿಭಟನೆಗೆ ಸಿದ್ಧರಿದ್ದೇವೆ. ಟ್ಯಾಗೋರ್ ಅವರ ನೊಬೆಲ್ ಪ್ರಶಸ್ತಿ ಕಳ್ಳತನ, ನೇತಾಜಿ ಘಟನೆ ಮತ್ತು ತಾಪಸಿ ಮಲಿಕ್ ಪ್ರಕರಣದ ತನಿಖೆ ಸೇರಿದಂತೆ ಸಿಬಿಐ ನ್ಯಾಯ ಒದಗಿಸಲು ವಿಫಲವಾಗಿರುವುದನ್ನು ನಾವು ಹಿಂದಿನ ನಿದರ್ಶನಗಳಲ್ಲಿ ನೋಡಿದ್ದೇವೆ. ಬದಲಿಗೆ ವಿಶೇಷ ತನಿಖಾ ತಂಡವೇ ಉತ್ತಮ ತನಿಖೆ ನಡೆಸಿದೆ ಎಂದಿದ್ದಾರೆ. ಈ ವಾರದ ಆರಂಭದಲ್ಲಿ ಎಂಟು ಜನರನ್ನು ಸಜೀವ ದಹನಗೊಳಿಸಿದ ಬಿರ್ಭೂಮ್ ಬೊಗ್ಟುಯಿ ಗ್ರಾಮದಲ್ಲಿ ನಡೆದ ಹತ್ಯೆಗಳ ತನಿಖೆ ಮತ್ತು ಏಪ್ರಿಲ್ 7 ರಂದು ಅದರ ಪ್ರಾಥಮಿಕ ವರದಿಯನ್ನು ಸಲ್ಲಿಸಲು ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಸಿಬಿಐಗೆ ಕೇಳಿದೆ. ಮುಂದಿನ ತನಿಖೆ ನಡೆಸಲು ಸಿಬಿಐಗೆ ಸಂಪೂರ್ಣ ಸಹಕಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

ಘಟನೆಯ ಬಗ್ಗೆ ಮಾತನಾಡಿದ ಬ್ಯಾನರ್ಜಿ, ಉತ್ತರ ಬಂಗಾಳದ ಆರು ದಿನಗಳ ಪ್ರವಾಸದಲ್ಲಿ, “ತೃಣಮೂಲ ಕಾರ್ಯಕರ್ತನನ್ನು ಇನ್ನೊಬ್ಬ ಪಕ್ಷದ ಕಾರ್ಯಕರ್ತ ಕೊಂದಿದ್ದಾನೆ. ಆದರೆ ಟಿಎಂಸಿಯನ್ನು ಮಾತ್ರ ಎಲ್ಲೆಡೆ ಟೀಕೆ ಮಾಡಲಾಗುತ್ತಿದೆ. ಪ್ರಕರಣದ ತನಿಖೆ ಮತ್ತು ಘಟನೆಯ ಮೂಲ ಕಾರಣವನ್ನು ತಿಳಿಯಲು ನಾವು ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಉತ್ತರ ಪ್ರದೇಶ, ದೆಹಲಿ, ಕರ್ನಾಟಕ, ತ್ರಿಪುರಾ ಮತ್ತು ಅಸ್ಸಾಂನಲ್ಲಿ ಇಂತಹ ಹಲವು ಘಟನೆಗಳು ನಡೆದಿವೆ. ಹಲವು ಸಂದರ್ಭಗಳಲ್ಲಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಘಟನೆ ನಡೆದ ಸ್ಥಳಕ್ಕೆ ತೆರಳಲು ಅವಕಾಶ ನೀಡಿರಲಿಲ್ಲ. ಆದರೆ ಬಿರ್ಭೂಮ್ ನಲ್ಲಿ ನಾವು ಯಾವುದೇ ರಾಜಕೀಯ ಪಕ್ಷವು ಸ್ಥಳಕ್ಕೆ ಭೇಟಿ ನೀಡುವುದನ್ನು ತಡೆಯಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಬಿರ್ಭೂಮ್‌ ಜಿಲ್ಲೆಯ ಫುಟ್ಬಾಲ್ ಮೈದಾನದ ಬಳಿ ಕಚ್ಚಾ ಬಾಂಬ್‌ ಪತ್ತೆ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?