AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand: ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ, ರೈಲ್ವೆ ಹಳಿಯಲ್ಲಿ ಸಿಲಿಂಡರ್ ಪತ್ತೆ

ಉತ್ತರಾಖಂಡದಲ್ಲಿ ದುಷ್ಕರ್ಮಿಗಳು ರೈಲು ಹಳಿ ತಪ್ಪಿಸುವ ಯತ್ನ ಮಾಡಿದ್ದಾರೆ. ರೂರ್ಕಿಯ ಧನೇರಾ ರೈಲು ನಿಲ್ದಾಣದ ಬಳಿಯ ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಗ್ಯಾಸ್ ಸಿಲಿಂಡರ್ ಪತ್ತೆಯಾದ ಸ್ಥಳವು ಬಂಗಾಳ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್‌ನ ಪ್ರಧಾನ ಕಚೇರಿಗೆ ಸಮೀಪದಲ್ಲಿರುವ ಕಾರಣ ಸೂಕ್ಷ್ಮ ಪ್ರದೇಶವಾಗಿದೆ. ಸೇನಾ ವಾಹನಗಳು ಮತ್ತು ಸಿಬ್ಬಂದಿಯನ್ನು ಸರಕು ರೈಲುಗಳ ಮೂಲಕ ವಿವಿಧ ಪೋಸ್ಟ್‌ಗಳಿಗೆ ಸಾಗಿಸುವುದರೊಂದಿಗೆ ಈ ಪ್ರದೇಶವನ್ನು ಮಿಲಿಟರಿಯವರು ಬಳಕೆ ಮಾಡುತ್ತಾರೆ.

Uttarakhand: ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ, ರೈಲ್ವೆ ಹಳಿಯಲ್ಲಿ ಸಿಲಿಂಡರ್ ಪತ್ತೆ
ಸಿಲಿಂಡರ್Image Credit source: News 9
ನಯನಾ ರಾಜೀವ್
|

Updated on: Oct 13, 2024 | 11:22 AM

Share

ಉತ್ತರಾಖಂಡದಲ್ಲಿ ದುಷ್ಕರ್ಮಿಗಳು ರೈಲು ಹಳಿ ತಪ್ಪಿಸುವ ಯತ್ನ ಮಾಡಿದ್ದಾರೆ. ರೂರ್ಕಿಯ ಧನೇರಾ ರೈಲು ನಿಲ್ದಾಣದ ಬಳಿಯ ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಗ್ಯಾಸ್ ಸಿಲಿಂಡರ್ ಪತ್ತೆಯಾದ ಸ್ಥಳವು ಬಂಗಾಳ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್‌ನ ಪ್ರಧಾನ ಕಚೇರಿಗೆ ಸಮೀಪದಲ್ಲಿರುವ ಕಾರಣ ಸೂಕ್ಷ್ಮ ಪ್ರದೇಶವಾಗಿದೆ. ಸೇನಾ ವಾಹನಗಳು ಮತ್ತು ಸಿಬ್ಬಂದಿಯನ್ನು ಸರಕು ರೈಲುಗಳ ಮೂಲಕ ವಿವಿಧ ಪೋಸ್ಟ್‌ಗಳಿಗೆ ಸಾಗಿಸುವುದು ಸೇರಿದಂತೆ ಈ ಪ್ರದೇಶವನ್ನು ಮಿಲಿಟರಿಯವರು ಹೆಚ್ಚಾಗಿ ಬಳಕೆ ಮಾಡುತ್ತಾರೆ.

ಹಳಿಗಳ ಮೇಲೆ ಸಿಲಿಂಡರ್ ಪತ್ತೆಯಾಗಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಹೆಚ್ಚಿಸಿದೆ. ಸಿಲಿಂಡರ್​ ಕಂಡ ಕೂಡಲೇ ಲೋಕೊ ಪೈಲಟ್​ ಬ್ರೇಕ್​ ಹಾಕಿ ರೈಲು ನಿಲ್ಲಿಸಿದ್ದಾರೆ. ಘಟನೆಯನ್ನು ರೈಲ್ವೆ ಅಧಿಕಾರಿಗಳಿಗೆ ತಿಳಿಸಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು ಸಿಲಿಂಡರ್ ತೆಗೆದಿದ್ದಾರೆ.

ಈ ಸಮಯದಲ್ಲಿ, ರೈಲ್ವೆ ಹಳಿಗಳ ಮೇಲೆ ಗ್ಯಾಸ್ ಸಿಲಿಂಡರ್ ಅನ್ನು ಯಾರು ಇರಿಸಿದರು ಎಂಬುದು ಸ್ಪಷ್ಟವಾಗಿಲ್ಲ.

ರೈಲ್ವೆ ಹಳಿ ಮೇಲೆ ಕಿಡಿಗೇಡಿಗಳು ಇರಿಸಿದ್ದ ಸಿಮೆಂಟ್ ಮೈಲಿಗಲ್ಲಿಗೆ ಗುದ್ದಿದ ರೈಲು ರಾಜಸ್ಥಾನದ ಅಜ್ಮೀರ್​ನಿಂದ ಅಹಮದಾಬಾದ್​ಗೆ ಹೋಗುವ ಮಾರ್ಗದಲ್ಲಿ ರೈಲಿನ ಹಳಿ ತಪ್ಪಿಸುವ ಪ್ರಯತ್ನ ನಡೆದಿದೆ. ರೈಲ್ವೆ ಹಳಿ ಮೇಲಿದ್ದ ಸಿಮೆಂಟ್​ ಮೈಲಿಗಲ್ಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಹಳಿ ತಪ್ಪಿದೆ. ಕಾನ್ಪುರದಲ್ಲಿ ಭಾನುವಾರ ಕಾಳಿಂದಿ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನವನ್ನು ಕಿಡಿಗೇಡಿಗಳು ನಡೆಸಿದ್ದರು, ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್​ ತುಂಬಿದ ಬಾಟಲಿಗಳು, ಗನ್​ ಪೌಡರ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇರಿಸಲಾಗಿತ್ತು.

ಮತ್ತಷ್ಟು ಓದಿ: ಕಾನ್ಪುರ: ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ, ಹಳಿಯಲ್ಲಿತ್ತು ಸಿಲಿಂಡರ್​

ರೈಲು ಸಿಲಿಂಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಅದು ಸ್ಫೋಟಗೊಂಡಿತ್ತು, ಆದರೆ ರೈಲಿಗಾಗಲಿ ಅಥವಾ ಪ್ರಯಾಣಿಕರಿಗಾಗಲಿ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ. ಲೊಕೊ ಪೈಲಟ್ ತುರ್ತು ಬ್ರೇಕ್ ಹಾಕಿದ್ದರಿಂದ ರೈಲು ಹಳಿಯಲ್ಲಿ ಅಡಚಣೆ ಉಂಟಾದ ಕಾರಣ ತಕ್ಷಣ ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಗೆ ಎಚ್ಚರಿಕೆ ನೀಡಿ ಸಂಪೂರ್ಣ ತಪಾಸಣೆ ನಡೆಸಿದ ನಂತರ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲಾಯಿತು.

ಅಜ್ಮೀರ್‌ನ ಫುಲೇರಾದಿಂದ ಗುಜರಾತ್‌ನ ಅಹಮದಾಬಾದ್‌ಗೆ ರೈಲು ಪ್ರಯಾಣಿಸುತ್ತಿದ್ದಾಗ ಮಂಗಳವಾರ ನಸುಕಿನ ವೇಳೆ ಈ ಘಟನೆ ನಡೆದಿದೆ. ರೈಲು ಶಾರಧನ ನಿಲ್ದಾಣದ ಬಳಿ ಇದ್ದಾಗ ಇಂಜಿನ್ ಹಳಿಯಲ್ಲಿ ಯಾವುದೋ ವಸ್ತುವಿಗೆ ಡಿಕ್ಕಿ ಹೊಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ