AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fake death certificate: ಆಸ್ತಿಗಾಗಿ ಪತ್ನಿ ಮೃತಪಟ್ಟಿದ್ದಾಳೆ ಎಂದು ಕತೆ ಕಟ್ಟಿದ ಕಾನ್ಸ್‌ಟೆಬಲ್, ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿದ್ದ, ಆ ಮೇಲೆ?

Property: ಮಕ್ಕಳು ಬೆಳೆದಂತೆ, ಪತ್ನಿ ಮಾಧವಿ ತನ್ನ ಇಬ್ಬರು ಪುತ್ರರೊಂದಿಗೆ ಗುಂಟೂರಿನಲ್ಲಿ ಪೋಷಕರೊಂದಿಗೆ ವಾಸಿಸುತ್ತಿದ್ದಾರೆ. ಪತ್ನಿ ಮತ್ತು ಪತಿ ಒಟ್ಟಿಗೆ ಇದ್ದಾಗ ಪತ್ನಿ ಮಾಧವಿ ನಂದ್ಯಾಲ ಜಿಲ್ಲೆಯ ರೈತನಗರದಲ್ಲಿ ನಾಲ್ಕು ಸೆಂಟ್ಸ್ ಜಮೀನು ಹೊಂದಿದ್ದರು.

Fake death certificate: ಆಸ್ತಿಗಾಗಿ ಪತ್ನಿ ಮೃತಪಟ್ಟಿದ್ದಾಳೆ ಎಂದು ಕತೆ ಕಟ್ಟಿದ ಕಾನ್ಸ್‌ಟೆಬಲ್, ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿದ್ದ, ಆ ಮೇಲೆ?
ಆಸ್ತಿಗಾಗಿ ಪತ್ನಿ ಮೃತಪಟ್ಟಿದ್ದಾಳೆ ಎಂದು ಕತೆ ಕಟ್ಟಿದ ಕಾನ್ಸ್‌ಟೆಬಲ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 30, 2023 | 1:37 PM

ಮಂಗಳಗಿರಿ, ಅಕ್ಟೋಬರ್ 30: ಕಾನೂನು ಪ್ರಕಾರ ನಡೆದುಕೊಳ್ಳಬೇಕಾದ ಕಾನ್ಸ್‌ಟೆಬಲ್ ಒಬ್ಬರು ಪತ್ನಿಯ ಹೆಸರಲ್ಲಿದ್ದ ಜಮೀನನ್ನು, ಪತ್ನಿಯ ನಕಲಿ ಮರಣ ಪ್ರಮಾಣ ಪತ್ರ (fake death certificate) ಹಾಗೂ ಪತ್ನಿಯ (wife) ಕುಟುಂಬ ಸಂಖ್ಯೆ ಪ್ರಮಾಣ ಪತ್ರವನ್ನು ನಕಲಿ ಮಾಡಿ ಬೇರೆಯವರಿಗೆ ಮಾರಾಟ ಮಾಡಿರುವ ಘಟನೆ ನಂದ್ಯಾಲ ಜಿಲ್ಲೆಯಲ್ಲಿ ನಡೆದಿದೆ. ಮಂಗಳಗಿರಿ ಎಪಿಎಸ್‌ಪಿ ಬೆಟಾಲಿಯನ್‌ನಲ್ಲಿ ಕಾನ್‌ಸ್ಟೆಬಲ್ (Constable) ಆಗಿ ಕಾರ್ಯನಿರ್ವಹಿಸುತ್ತಿರುವ ಶಿವಶಂಕರ್ 16 ವರ್ಷಗಳ ಹಿಂದೆ ಮಾಧವಿ ಎಂಬ ಮಹಿಳೆಯನ್ನು ವಿವಾಹವಾಗಿದ್ದರು. ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ಶಿವಶಂಕರ್ (husband) ಹಾಗೂ ಮಾಧವಿ ನಡುವೆ ಮನಸ್ತಾಪ ಉಂಟಾಗಿತ್ತು. ಹಾಗಾಗಿ ಪತಿ-ಪತ್ನಿ ಬೇರೆಯಾಗಿದ್ದರು.

ಮಕ್ಕಳು ಬೆಳೆದಂತೆ, ಪತ್ನಿ ಮಾಧವಿ ತನ್ನ ಇಬ್ಬರು ಪುತ್ರರೊಂದಿಗೆ ಗುಂಟೂರಿನಲ್ಲಿ ಪೋಷಕರೊಂದಿಗೆ ವಾಸಿಸುತ್ತಿದ್ದಾರೆ. ಪತ್ನಿ ಮತ್ತು ಪತಿ ಒಟ್ಟಿಗೆ ಇದ್ದಾಗ ಪತ್ನಿ ಮಾಧವಿ ನಂದ್ಯಾಲ ಜಿಲ್ಲೆಯ ರೈತನಗರದಲ್ಲಿ ನಾಲ್ಕು ಸೆಂಟ್ಸ್ ಜಮೀನು ಹೊಂದಿದ್ದರು. ಈಗ ಜಮೀನಿನ ಮೌಲ್ಯ ಲಕ್ಷಗಟ್ಟಲೆ ಇದ್ದು, ಪತ್ನಿಗೆ ಸಿಗಬಾರದು ಎಂಬ ಕಾರಣಕ್ಕೆ ಗಿಡ್ಡಲೂರಿನ ಕೆಲ ಮಧ್ಯವರ್ತಿಗಳನ್ನು ಸಂಪರ್ಕಿಸಿದ ಶಿವಶಂಕರ್, ನಕಲಿ ಪ್ರಮಾಣ ಪತ್ರ ಸಿದ್ಧಪಡಿಸಿದ್ದಾರೆ.

Also Read: ಆಸ್ತಿ ಕಬಳಿಸಲು ಬದುಕಿದ ವೃದ್ಧೆ ಮರಣ ಪ್ರಮಾಣ ಪತ್ರ ಮಾಡಿಸಿದ ಸಂಬಂಧಿಕರು, ದೂರು ದಾಖಲಿಸಿದ ಮಗ

ಮಾಧವಿ ಗಿದ್ದಲೂರಿನಲ್ಲಿ ವಾಸ ಇಲ್ಲ. ಮಾಧವಿ 2019 ರಲ್ಲಿ ಮೃತಪಟ್ಟಿದ್ದಾರೆ ಎಂದು ಕೇಳಿದ ತಕ್ಷಣ ಗಿಡ್ಡಲೂರು ನಗರ ಪಂಚಾಯತ್ ಅಧಿಕಾರಿಗಳು ಯಾವುದೇ ತನಿಖೆ ನಡೆಸದೆ ಮರಣ ಪ್ರಮಾಣ ಪತ್ರ ಮತ್ತು ಕುಟುಂಬ ಪ್ರಮಾಣಪತ್ರವನ್ನು ನೀಡಿದ್ದಾರೆ. ಈ ಎರಡು ಪ್ರಮಾಣ ಪತ್ರಗಳ ಆಧಾರದ ಮೇಲೆ ಕಾನ್‌ಸ್ಟೆಬಲ್ ಶಿವಶಂಕರ್ ಅವರು ತಾನೇ ವಾರಸುದಾರ ಎಂದು ಹೇಳಿಕೊಂಡು ಆಸ್ತಿಯನ್ನು ಇತರರಿಗೆ ಮಾರಾಟ ಮಾಡಿದ್ದಾರೆ.

Also Read: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ, ಒಬ್ಬೊಬ್ಬರೇ ಓಡಾಡದಂತೆ K.R.ಪುರಂ ಅರಣ್ಯಾಧಿಕಾರಿಗಳಿಂದ ಅನೌನ್ಸ್​

ಈ ವಿಷಯ ತಿಳಿದ ಪತ್ನಿ ಮಾಧವಿ ನ್ಯಾಯಕ್ಕಾಗಿ ನಂದ್ಯಾಲ ತಾಲೂಕು ನಗರ ಪೊಲೀಸರ ಮೊರೆ ಹೋಗಿದ್ದಾರೆ. ಮಾಧವಿ ಅವರ ದೂರಿನ ಮೇರೆಗೆ ಪೊಲೀಸರು ಕಾನ್‌ಸ್ಟೆಬಲ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕಾನ್‌ಸ್ಟೆಬಲ್ ಶಿವಶಂಕರ್ ತಲೆಮರೆಸಿಕೊಂಡಿದ್ದಾರೆ. ಇದು ಜಿಲ್ಲಾ ಪೊಲೀಸ್‌ ಅಧಿಕಾರಿಗಳು ಆಕ್ರೋಶಕ್ಕೆ ಗುರಿಯಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ