Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​-19 ಕಾರಣಕ್ಕೆ ಸಿಗದ ರಜಾ; ಠಾಣೆಯಲ್ಲೇ ನಡೆಯಿತು ಮಹಿಳಾ ಪೊಲೀಸ್ ಅರಿಶಿಣ ಶಾಸ್ತ್ರ

ಈ ಮಹಿಳಾ ಕಾನ್​ಸ್ಟೆಬಲ್ ಡುಂಗುರ್​ಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಇವರಿಗೆ ಅರಿಶಿಣ ಶಾಸ್ತ್ರ ಕಾರ್ಯಕ್ರಮಕ್ಕೆ ರಜಾ ಸಿಕ್ಕಿರಲಿಲ್ಲ.

ಕೊವಿಡ್​-19 ಕಾರಣಕ್ಕೆ ಸಿಗದ ರಜಾ; ಠಾಣೆಯಲ್ಲೇ ನಡೆಯಿತು ಮಹಿಳಾ ಪೊಲೀಸ್ ಅರಿಶಿಣ ಶಾಸ್ತ್ರ
ಮಹಿಳಾ ಪೊಲೀಸ್​ ಕಾನ್​ಸ್ಟೆಬಲ್​ ಅರಿಶಿಣ ಶಾಸ್ತ್ರ
Follow us
Lakshmi Hegde
|

Updated on:Apr 24, 2021 | 5:22 PM

ಕೊರೊನಾ ಸಾಂಕ್ರಾಮಿಕ ಭೂಮಿಗೆ ಕಾಲಿಟ್ಟಾಗಿನಿಂದ ಪೊಲೀಸ್, ಆರೋಗ್ಯ ಸಿಬ್ಬಂದಿ ಸೇರಿ ಹಲವು ಕ್ಷೇತ್ರದ ಸಿಬ್ಬಂದಿ ಮುಂಚೂಣಿಯಲ್ಲಿದ್ದುಕೊಂಡು, ದಣಿವರಿಯದೆ ಕೆಲಸ ಮಾಡುತ್ತಿದ್ದಾರೆ. ನಾಗರಿಕರ ರಕ್ಷಣೆಗಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟಿದ್ದಾರೆ. ಅದರಲ್ಲೂ ಈಗ ಶುರುವಾಗಿರುವ ಕೊರೊನಾ ಎರಡನೇ ಅಲೆಯಲ್ಲಿ ಕೊವಿಡ್​ ವಾರಿಯರ್ಸ್​ ಮೇಲೆ ಇನ್ನೂ ಜಾಸ್ತಿ ಒತ್ತಡವೇ ಇದೆ. ರಜೆ, ವಿಶ್ರಾಂತಿ ಸಿಗುತ್ತಿಲ್ಲ. ಹೀಗಿರುವಾಗ ರಾಜಸ್ಥಾನದ ಮಹಿಳಾ ಕಾನ್​ಸ್ಟೆಬಲ್​ ಒಬ್ಬರು ಮದುವೆಯ ಅರಿಶಿಣ ಶಾಸ್ತ್ರಕ್ಕೆ ರಜೆ ಸಿಗದೆ, ಪೊಲೀಸ್​ ಠಾಣೆಯಲ್ಲೇ ಈ ಕಾರ್ಯಕ್ರಮ ಮಾಡಿಸಿಕೊಂಡಿದ್ದಾರೆ.

ಈ ಮಹಿಳಾ ಕಾನ್​ಸ್ಟೆಬಲ್ ಡುಂಗುರ್​ಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಇವರಿಗೆ ಅರಿಶಿಣ ಶಾಸ್ತ್ರ ಕಾರ್ಯಕ್ರಮಕ್ಕೆ ರಜಾ ಸಿಕ್ಕಿರಲಿಲ್ಲ. ಹಾಗಾಗಿ ತಾವು ಕೆಲಸ ಮಾಡುವ ಠಾಣೆಯಲ್ಲೇ ಈ ಶಾಸ್ತ್ರ ಮಾಡಿಕೊಂಡಿದ್ದಾರೆ. ಇದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ.

ವಾಗಾದ್ ದರ್ಶನ್​ ಎಂಬ ಫೇಸ್​​ಬುಕ್​ ಪೇಜ್​ನಲ್ಲಿ ವಿಡಿಯೋ ಶೇರ್ ಆಗಿದ್ದು, ಅದರಲ್ಲಿ ಉಳಿದ ಮಹಿಳಾ ಕಾನ್​ಸ್ಟೆಬಲ್​​ಗಳೆಲ್ಲ ಸೇರಿ, ಇವರಿಗೆ ಅರಿಶಿಣ ಶಾಸ್ತ್ರ ನೆರವೇರಿಸುವುದನ್ನು ನೋಡಬಹುದು. ಸಾಂಪ್ರದಾಯಿಕ ಹಾಡುಗಳನ್ನು ಹಾಡುತ್ತ, ಕಾನ್​ಸ್ಟೆಬಲ್ ಮುಖ, ಕೈಕಾಲುಗಳಿಗೆ ಅರಿಶಿಣ ಹಚ್ಚಿದ್ದಾರೆ. ಹಾಗೇ ಮದುಮಗಳು ಹಳದಿ ಬಣ್ಣದ ಚೂಡಿದಾರ್ ಧರಿಸಿ, ಕೆಂಪು ದುಪ್ಪಟ್ಟಾ ಹೊದ್ದಿದ್ದಾರೆ.

ವಿಶೇಷವೆಂದರೆ ಈ ಆಚರಣೆಯಲ್ಲಿ ಪುರುಷ ಪೊಲೀಸರೂ ಕೂಡ ಖುಷಿಯಿಂದ ಭಾಗವಹಿಸಿದ್ದಾರೆ. ಮಧುಮಗಳು ಕುಳಿತ ಕುರ್ಚಿಯನ್ನು ಎತ್ತಿ, ಮೇಲೆ-ಕೆಳಗೆ ಮಾಡುತ್ತ ಸಾಂಪ್ರದಾಯಿಕ ಹಾಡನ್ನೂ ಹಾಡಿದ್ದಾರೆ. ಅದೇನೇ ಇರಲಿ ವಿಡಿಯೋ ನೋಡಿದ ನೆಟ್ಟಿಗರು ತುಂಬ ಖುಷಿ ವ್ಯಕ್ತಪಡಿಸಿದ್ದಾರೆ. ಸದ್ಯ ದೇಶದಲ್ಲಿ ಎಲ್ಲ ರಾಜ್ಯಗಳೂ ಕೊರೊನಾ ಎರಡನೇ ಅಲೆಗೆ ತತ್ತರಿಸಿವೆ. ಇಂದು ಒಂದೇ ದಿನ 3.46 ಲಕ್ಷಕ್ಕೂ ಅಧಿಕ ಕೇಸ್​ಗಳು ದಾಖಲಾಗಿವೆ. ಮೊದಲನೇ ಬಾರಿಗೆ ಕಾಲಿಟ್ಟ ವೈರಸ್​​ಗಿಂತಲೂ, ಈ ಬಾರಿ ಇನ್ನೂ ವೇಗವಾಗಿ, ಮಾರಣಾಂತಿಕವಾಗಿ ಕೊರೊನಾ ವೈರಸ್ ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಇತರ ಲಸಿಕೆಗೆಳಿಗೆ ಹೋಲಿಸಿದರೆ ಕೊವಿಶೀಲ್ಡ್ ಲಸಿಕೆ ಬೆಲೆ ಕಡಿಮೆಯಿದೆ; ಅದಾರ್ ಪೂನಾವಲಾ

ನಾವು ತುಂಬಾ ಕೆಟ್ಟ ಪರಿಸ್ಥಿತಿಯಲ್ಲಿದ್ದೇವೆ; ಕೊವಿಡ್​ನಿಂದ ಆಪ್ತನನ್ನು ಕಳೆದುಕೊಂಡು ಕಣ್ಣೀರಿಟ್ಟ ನಟ ಅನಿರುದ್ಧ್​​

Published On - 5:20 pm, Sat, 24 April 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ