AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನದ ಪ್ರಕಾರ ಕೆಲಸ ನಿರ್ವಹಿಸುತ್ತೇನೆ: ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮೊದಲ ಪ್ರತಿಕ್ರಿಯೆ

ಕಾರ್ಯಾಂಗ ಮತ್ತು ನ್ಯಾಯಾಂಗವು ಸೌಹಾರ್ದಯುತ ಸಂಬಂಧವನ್ನು ಹೊಂದಿದೆ. ಅದು ಸೌಹಾರ್ದಯುತ ಮತ್ತು ಸಾಂವಿಧಾನಿಕವಾಗಿ ಉಳಿಯುತ್ತದೆ. ಗಡಿಗಳು ಈಗಾಗಲೇ ಇವೆ ಎಂದಿದ್ದಾರೆ ಮೇಘವಾಲ್.

ಸಂವಿಧಾನದ ಪ್ರಕಾರ ಕೆಲಸ ನಿರ್ವಹಿಸುತ್ತೇನೆ: ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮೊದಲ ಪ್ರತಿಕ್ರಿಯೆ
ಅರ್ಜುನ್ ರಾಮ್ ಮೇಘವಾಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 18, 2023 | 4:05 PM

Share

ದೆಹಲಿ: ಕೇಂದ್ರ ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜು (Kiren Rijiju )ಸ್ಥಾನಕ್ಕೆ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಬಂದಿದ್ದಾರೆ. ಇದೀಗ ಹೊಸ ಜವಾಬ್ದಾರಿ ವಹಿಸಿಕೊಂಡಿರುವ ಮೇಘವಾಲ್, ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಾನು ಪ್ರಧಾನಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಸಂವಿಧಾನವು (constitution) ನಮಗೆ ತಿಳಿಯಬೇಕಾದ ಎಲ್ಲವನ್ನೂ ಕಲಿಸುತ್ತದೆ. ಅದರ ಪ್ರಕಾರ ನಾನು ಕೆಲಸ ಮಾಡುತ್ತೇನೆ ಎಂದು ಅವರು ಎನ್‌ಡಿಟಿವಿಗೆ ತಿಳಿಸಿದರು ರಿಜಿಜು ಅವರ ಹಠಾತ್ ವರ್ಗಾವಣೆಯು ನ್ಯಾಯಾಂಗ ವಿಷಯಗಳಲ್ಲಿನ ಅವರ ಇತ್ತೀಚಿಗಿನ ಹೇಳಿಕೆಯಿಂದ ಎಂದು ನೀವು ಭಾವಿಸಿದ್ದಾರಾ ಎಂಬ ಪ್ರಶ್ನೆಗೆ, ಮೇಘವಾಲ್ ಅವರು ಹಾಗೇನಲ್ಲ ಎಂದು ಹೇಳಿದರು.ಈಗ ಕಾನೂನು ಸಚಿವಾಲಯದ ಸ್ವತಂತ್ರ ಉಸ್ತುವಾರಿಯನ್ನು ಹೊಂದಿರುವ ಸಂಸದೀಯ ವ್ಯವಹಾರಗಳ ಉಸ್ತುವಾರಿ ರಾಜ್ಯ ಸಚಿವರು ಆಗಿರುವ ಮೇಘವಾಲ್, ಈ ವರ್ಷದ ಕೊನೆಯಲ್ಲಿ ಅವರ ತವರು ರಾಜ್ಯವಾದ ರಾಜಸ್ಥಾನದಲ್ಲಿ ನಡೆವ ಚುನಾವಣೆಗೆ ಅವರ ನೇಮಕಾತಿ ಸಂಬಂಧವಿದೆ ಎಂಬುದನ್ನು ನಿರಾಕರಿಸಿದರು.

ಕಾರ್ಯಾಂಗ ಮತ್ತು ನ್ಯಾಯಾಂಗವು ಸೌಹಾರ್ದಯುತ ಸಂಬಂಧವನ್ನು ಹೊಂದಿದೆ. ಅದು ಸೌಹಾರ್ದಯುತ ಮತ್ತು ಸಾಂವಿಧಾನಿಕವಾಗಿ ಉಳಿಯುತ್ತದೆ. ಗಡಿಗಳು ಈಗಾಗಲೇ ಇವೆ ಎಂದಿದ್ದಾರೆ ಮೇಘವಾಲ್.

ಸರ್ಕಾರದ ಅತ್ಯಂತ ಉನ್ನತ ಮಂತ್ರಿಗಳಲ್ಲಿ ಒಬ್ಬರು ಮತ್ತು ಟ್ರಬಲ್‌ಶೂಟರ್ ಎಂದು ಕರೆಯಲ್ಪಡುವ ರಿಜಿಜು ಅವರನ್ನು ಕ್ಯಾಬಿನೆಟ್ ಸ್ಥಾನಮಾನದೊಂದಿಗೆ ಕಾನೂನು ಸಚಿವಾಲಯಕ್ಕೆ ಬಡ್ತಿ ನೀಡಿದ ಒಂದು ವರ್ಷದ ನಂತರ, ಭೂ ವಿಜ್ಞಾನ ಸಚಿವಾಲಯಕ್ಕೆ ವರ್ಗಾಯಿಸಿದ್ದಾರೆ.

ಇದನ್ನೂ ಓದಿ: Kiren Rijiju: ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆ, ಕಾನೂನು ಸಚಿವ ಕಿರಣ್​ ರಿಜಿಜುಗೆ ಗೇಟ್​ಪಾಸ್

ನ್ಯಾಯಾಧೀಶರ ನೇಮಕಾತಿಯಲ್ಲಿ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನಡುವಿನ ಜಟಾಪಟಿ ನಡುವೆಯೇ ಈ ಬದಲಾವಣೆ ಬಂದಿದೆ. ರಿಜಿಜು ಅವರ ಸಂಕ್ಷಿಪ್ತ ಅವಧಿಯು ವಿವಾದಾಸ್ಪದವಾಗಿತ್ತು.  ಏಕೆಂದರೆ ಸರ್ಕಾರ ಮತ್ತು ನ್ಯಾಯಾಂಗದ ನಡುವೆ ಆಗಾಗ್ಗೆ ಅವರು ನೀಡುತ್ತಿದ್ದ ಹೇಳಿಕೆ ಮತ್ತು ಸುಪ್ರೀಂಕೋರ್ಟ್ ಗೆ ನ್ಯಾಯಾಧೀಶರನ್ನು ನೇಮಿಸುವ ನ್ಯಾಯಾಧೀಶರ ಕೊಲಿಜಿಯಂ ವ್ಯವಸ್ಥೆಯ ಬಗ್ಗೆ ಅವರು ಟೀಕೆ ವ್ಯಕ್ತ ಪಡಿಸಿದ್ದರು.

ಗುರುವಾರ ಟ್ವೀಟ್ ಮಾಡಿದ ರಿಜಿಜು, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಎಲ್ಲಾ ನ್ಯಾಯಾಧೀಶರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ರವಿಶಂಕರ್ ಪ್ರಸಾದ್ ಅವರ ನಿರ್ಗಮನದ ನಂತರ ಜುಲೈ 7, 2021 ರಂದು ಕಾನೂನು ಸಚಿವಾಲಯಕ್ಕೆ ನಿಯೋಜಿಸಲ್ಪಟ್ಟಾಗ ಅರುಣಾಚಲ ಪ್ರದೇಶದ ಮೂರು ಅವಧಿಯ ಲೋಕಸಭಾ ಸಂಸದರಾದ ರಿಜಿಜು ಅವರು ಕ್ರೀಡಾ ಸಚಿವರಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:04 pm, Thu, 18 May 23

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ