AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ma Kamakhya Corridor: ಕಾಶಿ ವಿಶ್ವನಾಥ ದೇವಾಲಯದ ಮಾದರಿಯಲ್ಲಿ ಕಾಮಾಖ್ಯ ದೇವಾಲಯದ ಕಾರಿಡಾರ್‌ ನಿರ್ಮಾಣ, ಪ್ರಧಾನಿ ಮೋದಿ ಶ್ಲಾಘನೆ

ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ ಮಾದರಿಯಲ್ಲಿ ಅಸ್ಸಾಂ ಸರ್ಕಾರವು ಗುವಾಹಟಿಯ ಕಾಮಾಖ್ಯ ದೇವಾಲಯದಲ್ಲಿ ಕಾರಿಡಾರ್ ನಿರ್ಮಿಸಲು ಯೋಜಿಸುತ್ತಿದೆ ಎಂದು ಹೇಳಲಾಗಿದೆ.

Ma Kamakhya Corridor: ಕಾಶಿ ವಿಶ್ವನಾಥ ದೇವಾಲಯದ ಮಾದರಿಯಲ್ಲಿ ಕಾಮಾಖ್ಯ ದೇವಾಲಯದ ಕಾರಿಡಾರ್‌ ನಿರ್ಮಾಣ, ಪ್ರಧಾನಿ ಮೋದಿ ಶ್ಲಾಘನೆ
ಕಾಮಾಖ್ಯ ದೇವಾಲಯ
ಅಕ್ಷಯ್​ ಪಲ್ಲಮಜಲು​​
|

Updated on:Apr 20, 2023 | 11:25 AM

Share

ದಿಸ್ಪುರ್: ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ (Corridor of Kashi Vishwanath Temple) ಮಾದರಿಯಲ್ಲಿ ಅಸ್ಸಾಂ ಸರ್ಕಾರವು ಗುವಾಹಟಿಯ ಕಾಮಾಖ್ಯ ದೇವಾಲಯದಲ್ಲಿ ಕಾರಿಡಾರ್ (Corridor in Kamakhya Temple) ನಿರ್ಮಿಸಲು ಯೋಜಿಸುತ್ತಿದೆ ಎಂದು ಹೇಳಲಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ನಾಲ್ಕು ನಿಮಿಷಗಳ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ, ಈ ವೀಡಿಯೊದಲ್ಲಿ ಮಾ ಕಾಮಾಖ್ಯ ಕಾರಿಡಾರ್ ಮುಂದಿನ ಭವಿಷ್ಯದಲ್ಲಿ ಹೇಗೆ ಕಾಣಿಸುತ್ತದೆ ಎಂಬ ಶೀರ್ಷಿಕೆಯನ್ನು ಹಾಕಿ ಟ್ವಿಟರ್​​ನಲ್ಲಿ ಕಾಮಾಖ್ಯ ದೇವಾಲಯದಲ್ಲಿ ಕಾರಿಡಾರ್ ಕುರಿತು ಒಂದು ನೋಟವನ್ನು ಹಂಚಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಏ.19 (ಬುಧವಾರ) ಈ ಯೋಜನೆಯ ಹಂಚಿಕೊಂಡ ಪೋಸ್ಟ್​ ಕುರಿತು ರೀ ಪೋಸ್ಟ್ ಮಾಡಿದ್ದಾರೆ. ಮಾ ಕಾಮಾಖ್ಯ ಕಾರಿಡಾರ್ ಒಂದು ಹೆಗ್ಗುರುತು. ಕಾಶಿ ವಿಶ್ವನಾಥ ಧಾಮ ಮತ್ತು ಶ್ರೀ ಮಹಾಕಾಲ್ ಮಹಾಲೋಕಗಳು, ಆಧ್ಯಾತ್ಮಿಕ ಅನುಭವವನ್ನು ನೀಡಲು ಇದು ರೂಪಾಂತರಗೊಂಡಿವೆ. ಇದರ ಜತೆಗೆ ಇದು ಪ್ರವಾಸೋದ್ಯಮಕ್ಕೂ ಒತ್ತು ನೀಡುತ್ತಿದೆ ಮತ್ತು ಸ್ಥಳೀಯ ಆರ್ಥಿಕತೆಯು ಉತ್ತೇಜನವನ್ನು ಪಡೆಯುತ್ತದೆ ಎಂದು ಹೇಳಿದ್ದಾರೆ.

ದೇವಾಲಯದ ಸುತ್ತಲಿನ ತೆರೆದ ಸ್ಥಳದಲ್ಲಿ ಈ ಕಾರಿಡಾರ್​ಗಳು ನಿರ್ಮಾಣ ಮಾಡಲಾಗುವುದು ಮತ್ತು ಇದರಿಂದ 3,000 ಚದರ ಅಡಿ ಇರುವ ಈ ಕಾಮಾಖ್ಯ ದೇವಾಲಯದಲ್ಲಿ ಕಾರಿಡಾರ್ 100,000 ಚದರ ಅಡಿಗಳಿಗೆ ಹೆಚ್ಚಾಗುತ್ತದೆ, ಇದರ ಜತೆಗೆ ಇದು ಮೂರು ಹಂತಗಳಲ್ಲಿ ನಿರ್ಮಾಣವಾಗಲಿದೆ.

ಇದನ್ನೂ ಓದಿ: Kashi Vishwanath corridor ಕಾಶಿ ವಿಶ್ವನಾಥ ಕಾರಿಡಾರ್ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಪ್ರವೇಶ ಕಾರಿಡಾರ್‌ನ ಸರಾಸರಿ ಅಗಲವು 8-10 ಅಡಿಗಳಿಂದ ಸರಿಸುಮಾರು 27-30 ಅಡಿಗಳಿಗೆ ಹೆಚ್ಚಾಗುತ್ತದೆ. ಸಂಕೀರ್ಣದಲ್ಲಿರುವ ಆರು ಪ್ರಮುಖ ದೇವಾಲಯಗಳನ್ನು ಈಗಾಗಲೇ ಸಾರ್ವಜನಿಕ ವೀಕ್ಷಣೆಗೆ ನಿಷೇಧಿಸಲಾಗಿದೆ, ಅವುಗಳ ಮೂಲ ವೈಭವಗಳನ್ನು ಮರುಸ್ಥಾಪಿಸುತ್ತಿರುವ ಕಾರಣ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಯೋಜನೆಯು ಅಂಬುಬಾಚಿ ಮೇಳ ಮತ್ತು ಇತರ ಪ್ರಮುಖ ಉತ್ಸವಗಳ ಸಮಯದಲ್ಲಿ ಸರಿಸುಮಾರು 8,000-10,000 ಯಾತ್ರಾರ್ಥಿಗಳು ಭಾಗವಹಿಸುವಷ್ಟು ಈ ಕಾರಿಡಾರ್ ಜಾಗವನ್ನು ಸೃಷ್ಟಿ ಮಾಡುತ್ತದೆ ಎಂದು ಹೇಳಿದ್ದಾರೆ.

Published On - 11:22 am, Thu, 20 April 23

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು