AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಟ್ಕಾ ತಿನ್ನಿ, ಮದ್ಯ ಸೇವಿಸಿ; ಬರಿಗೈಯಲ್ಲಿ ಟಾಯ್ಲೆಟ್ ಕ್ಲೀನ್ ಮಾಡಿದ್ದ ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಈ ರೀತಿಯ ವಿಚಿತ್ರ ಹೇಳಿಕೆಗಳನ್ನು ನೀಡಿ ವಿವಾದಕ್ಕೀಡಾಗಿರುವುದು ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ಅವರು ತನ್ನ ಕೈಯಿಂದ ಸಾರ್ವಜನಿಕ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು.

ಗುಟ್ಕಾ ತಿನ್ನಿ, ಮದ್ಯ ಸೇವಿಸಿ; ಬರಿಗೈಯಲ್ಲಿ ಟಾಯ್ಲೆಟ್ ಕ್ಲೀನ್ ಮಾಡಿದ್ದ ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ
TV9 Web
| Edited By: |

Updated on: Nov 08, 2022 | 9:01 AM

Share

ರೇವಾ: ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ (Janardan Mishra) ಅವರು ರೇವಾದಲ್ಲಿನ ನೀರಿನ ಸಂರಕ್ಷಣೆ ಕುರಿತು ವಿಚಿತ್ರವಾದ ಹೇಳಿಕೆ ನೀಡಿ ಟ್ರೋಲ್ ಆಗುತ್ತಿದ್ದಾರೆ. “ಭೂಮಿ ನೀರಿಲ್ಲದೆ ಒಣಗುತ್ತಿವೆ, ನಾವು ಭೂಮಿಯನ್ನು ಮತ್ತು ನೀರನ್ನು ಉಳಿಸಬೇಕು. ನೀವು ಗುಟ್ಕಾ ಬೇಕಾದರೂ ತಿನ್ನಿರಿ, ಮದ್ಯ ಸೇವಿಸಿ, ಸುಲೇಸನ್ ಅಥವಾ ಅಯೋಡೆಕ್ಸ್ ತಿನ್ನಿರಿ. ಆದರೆ ನೀರಿನ ಮಹತ್ವವನ್ನು ಅರ್ಥಮಾಡಿಕೊಳ್ಳಿ” ಎಂದು ಸಂಸದ ಜನಾರ್ದನ್ ಮಿಶ್ರಾ ಜಲ ಸಂರಕ್ಷಣಾ ಕಾರ್ಯಾಗಾರದಲ್ಲಿ ಹೇಳಿದ್ದಾರೆ .

ಭಾನುವಾರ ರೇವಾದ ಕೃಷ್ಣರಾಜ್ ಕಪೂರ್ ಸಭಾಂಗಣದಲ್ಲಿ ಜಲ ಸಂರಕ್ಷಣಾ ಕಾರ್ಯಾಗಾರ ಆಯೋಜಿಸಲಾಗಿತ್ತು. ಆಗ ಸಂಸದ ಜನಾರ್ದನ್ ಮಿಶ್ರಾ ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು, ಅವೆಲ್ಲ ಅವೈಜ್ಞಾನಿಕ: ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ

“ಯಾವುದೇ ಸರ್ಕಾರವು ನೀರಿನ ತೆರಿಗೆಯನ್ನು ಮನ್ನಾ ಮಾಡುತ್ತೇವೆ ಎಂದು ಘೋಷಿಸಿದರೆ ಅದಕ್ಕೆ ನೀವು ಒಪ್ಪಬೇಡಿ. ನಾವು ನೀರಿನ ತೆರಿಗೆಯನ್ನು ಪಾವತಿಸುತ್ತೇವೆ. ನೀವು ನೀರಿನ ತೆರಿಗೆ ಬದಲು ವಿದ್ಯುತ್ ಬಿಲ್ ಸೇರಿದಂತೆ ಉಳಿದ ತೆರಿಗೆಗಳನ್ನು ಮನ್ನಾ ಮಾಡಿ ಎಂದು ಅವರಿಗೆ ಒತ್ತಾಯಿಸಿ” ಎಂದು ಜನಾರ್ದನ್ ಮಿಶ್ರಾ ಕರೆ ನೀಡಿದ್ದಾರೆ.

ಅಂದಹಾಗೆ, ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಈ ರೀತಿಯ ವಿಚಿತ್ರ ಹೇಳಿಕೆಗಳನ್ನು ನೀಡಿ ವಿವಾದಕ್ಕೀಡಾಗಿರುವುದು ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ಅವರು ತನ್ನ ಕೈಯಿಂದ ಸಾರ್ವಜನಿಕ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು. ಅದಾದ ಬಳಿಕ ಇದೀಗ ಮತ್ತೆ ಅವರು ಸುದ್ದಿಯಲ್ಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!