AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಹಕರು ಖರೀದಿ ಮಾಡಿದ ನಂತರ ಬಿಲ್​​ಗಾಗಿ ಫೋನ್ ನಂಬರ್​​ ಶೇರ್​​ ಮಾಡುವ ಅಗತ್ಯವಿಲ್ಲ: ಗ್ರಾಹಕ ವ್ಯವಹಾರಗಳ ಸಚಿವಾಲಯ

ವೈಯಕ್ತಿಕ ಸಂಪರ್ಕ ವಿವರಗಳನ್ನು ಒದಗಿಸುವವರೆಗೆ ಅವರು ಬಿಲ್ ಮಾಡಲು ಸಾಧ್ಯವಿಲ್ಲ ಎಂದು ಮಾರಾಟಗಾರರು ಹೇಳುತ್ತಾರೆ. ಇದು ಗ್ರಾಹಕ ಸಂರಕ್ಷಣಾ ಕಾಯಿದೆಯಡಿಯಲ್ಲಿ ಅನ್ಯಾಯ ಮತ್ತು ನಿರ್ಬಂಧಿತ ವ್ಯಾಪಾರದ ಅಭ್ಯಾಸವಾಗಿದೆ. ಅದೇ ವೇಳೆ ಮಾಹಿತಿಯನ್ನು ಸಂಗ್ರಹಿಸುವುದಕ್ಕೆ ತಕ್ಕ ಕಾರಣ ಯಾವುದೂ ಇಲ್ಲ ಎಂದು ಸಿಂಗ್ ಹೇಳಿದ್ದಾರೆ.

ಗ್ರಾಹಕರು ಖರೀದಿ ಮಾಡಿದ ನಂತರ ಬಿಲ್​​ಗಾಗಿ ಫೋನ್ ನಂಬರ್​​ ಶೇರ್​​ ಮಾಡುವ ಅಗತ್ಯವಿಲ್ಲ: ಗ್ರಾಹಕ ವ್ಯವಹಾರಗಳ ಸಚಿವಾಲಯ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 24, 2023 | 12:44 PM

Share

ಮುಖ್ಯಾಂಶಗಳು

  • ವೈಯಕ್ತಿಕ ಸಂಪರ್ಕ ವಿವರಗಳನ್ನು ಒದಗಿಸುವವರೆಗೆ ಅವರು ಬಿಲ್ ಮಾಡಲು ಸಾಧ್ಯವಿಲ್ಲ ಎಂದು ಮಾರಾಟಗಾರರು ಹೇಳುತ್ತಾರೆ
  • ಇದು ಗ್ರಾಹಕ ಸಂರಕ್ಷಣಾ ಕಾಯಿದೆಯಡಿಯಲ್ಲಿ ಅನ್ಯಾಯ ಮತ್ತು ನಿರ್ಬಂಧಿತ ವ್ಯಾಪಾರದ ಅಭ್ಯಾಸವಾಗಿದೆ
  • ಏನನ್ನಾದರೂ ಡೆಲಿವರಿ ಮಾಡಲು ಅಥವಾ ಬಿಲ್ ಮಾಡಲು ಚಿಲ್ಲರೆ ವ್ಯಾಪಾರಿಗಳಿಗೆ ಫೋನ್ ಸಂಖ್ಯೆಗಳನ್ನು ಒದಗಿಸುವುದು ಭಾರತದಲ್ಲಿ ಅಗತ್ಯವಿಲ್ಲ.

ಫೋನ್ ಕರೆಗಳು ಮತ್ತು ಪಠ್ಯ ಸಂದೇಶಗಳ ಮೂಲಕ ವಂಚನೆಗಳು (scams) ಹೆಚ್ಚುತ್ತಿರುವ ವರದಿಗಳ ನಡುವೆ, ಗ್ರಾಹಕ ವ್ಯವಹಾರಗಳ ಸಚಿವಾಲಯವು (Consumer Affairs Ministry) ಮಂಗಳವಾರ ಕೆಲವು ಉತ್ಪನ್ನಗಳನ್ನು ನೀಡುವಾಗ ಖರೀದಿದಾರರ ವೈಯಕ್ತಿಕ ಸಂಪರ್ಕ ವಿವರಗಳನ್ನು ಒತ್ತಾಯಿಸದಂತೆ ಚಿಲ್ಲರೆ ವ್ಯಾಪಾರಿಗಳಿಗೆ ಸಲಹೆ ನೀಡಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ (Rohit Kumar Singh) ಹೇಳಿದ್ದಾರೆ.ಗ್ರಾಹಕರು ತಮ್ಮ ಸಂಪರ್ಕ ವಿವರಗಳನ್ನು ಹಂಚಿಕೊಳ್ಳದ ಹೊರತು ಮಾರಾಟಗಾರರು ಸೇವೆಗಳನ್ನು ಒದಗಿಸಲು ನಿರಾಕರಿಸುತ್ತಾರೆ ಎಂದು ಹಲವಾರು ಗ್ರಾಹಕರು ದೂರಿದ ನಂತರ ಈ ಸಲಹೆ ಬಂದಿದೆ.

ವೈಯಕ್ತಿಕ ಸಂಪರ್ಕ ವಿವರಗಳನ್ನು ಒದಗಿಸುವವರೆಗೆ ಅವರು ಬಿಲ್ ಮಾಡಲು ಸಾಧ್ಯವಿಲ್ಲ ಎಂದು ಮಾರಾಟಗಾರರು ಹೇಳುತ್ತಾರೆ. ಇದು ಗ್ರಾಹಕ ಸಂರಕ್ಷಣಾ ಕಾಯಿದೆಯಡಿಯಲ್ಲಿ ಅನ್ಯಾಯ ಮತ್ತು ನಿರ್ಬಂಧಿತ ವ್ಯಾಪಾರದ ಅಭ್ಯಾಸವಾಗಿದೆ. ಅದೇ ವೇಳೆ ಮಾಹಿತಿಯನ್ನು ಸಂಗ್ರಹಿಸುವುದಕ್ಕೆ ತಕ್ಕ ಕಾರಣ ಯಾವುದೂ ಇಲ್ಲ ಎಂದು ಸಿಂಗ್ ಹೇಳಿದ್ದಾರೆ.

ಗೌಪ್ಯತೆಯ ಕಾಳಜಿಯೂ ಇದೆ ಎಂದು ಹೇಳಿದ ಸಿಂಗ್, ಗ್ರಾಹಕರ ಹಿತಾಸಕ್ತಿಯಿಂದ ಚಿಲ್ಲರೆ ಉದ್ಯಮ ಮತ್ತು ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ & ಇಂಡಸ್ಟ್ರಿ (ಎಫ್‌ಐಸಿಸಿಐ) ಮತ್ತು ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ)ಸೇರಿದಂತೆ ಉದ್ಯಮ ಚೇಂಬರ್‌ಗಳಿಗೆ ಈ ಸಲಹೆ ನೀಡಲಾಗಿದೆ.

ಇದನ್ನೂ ಓದಿ: ಚಪ್ಪಲಿ ಖರೀದಿಸಲು ದುಡ್ಡಿಲ್ಲದ ಕಾರಣ ತನ್ನ ಮಕ್ಕಳ ಕಾಲಿಗೆ ಪಾಸ್ಟಿಕ್​​ ಸುತ್ತಿಕೊಂಡ ಮಹಿಳೆ

ಏನನ್ನಾದರೂ ಡೆಲಿವರಿ ಮಾಡಲು ಅಥವಾ ಬಿಲ್ ಮಾಡಲು ಚಿಲ್ಲರೆ ವ್ಯಾಪಾರಿಗಳಿಗೆ ಫೋನ್ ಸಂಖ್ಯೆಗಳನ್ನು ಒದಗಿಸುವುದು ಭಾರತದಲ್ಲಿ ಅಗತ್ಯವಿಲ್ಲ. ಆದಾಗ್ಯೂ, ಚಿಲ್ಲರೆ ವ್ಯಾಪಾರಿಗಳು ವಹಿವಾಟು ನಡೆಸಲು ಮೊಬೈಲ್ ಸಂಖ್ಯೆಗಳನ್ನು ಕೇಳಿದರೆ ಗ್ರಾಹಕರು ವಿಚಿತ್ರ ಪರಿಸ್ಥಿತಿಗೆ ಒಳಗಾಗುತ್ತಾರೆ. ಇಲ್ಲಿ ಮೊಬೈಲ್ ಸಂಖ್ಯೆ ಒದಗಿಸದೆ ಗ್ರಾಹಕರಿಗೆ ಬೇರೆ ಮಾರ್ಗ ಇರುವುದಿಲ್ಲ ಎಂದು ಸಿಂಗ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ