AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಮೋಸ ಮಾಡಿ ಹಣ ಲೂಟಿ, ಪತಿ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಪತ್ನಿ, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದ ಗ್ರಾಹಕ ನ್ಯಾಯಾಲಯ

ಪತಿ ತನಗೆ ಮೋಸ ಮಾಡಿ ಬ್ಯಾಂಕ್​ನಿಂದ ಹಣ ದೋಚಿದ್ದಾರೆ ಎಂದು ಮಹಿಳೆಯೊಬ್ಬರು ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ್ದರು.

Mumbai: ಮೋಸ ಮಾಡಿ ಹಣ ಲೂಟಿ, ಪತಿ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಪತ್ನಿ, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದ ಗ್ರಾಹಕ ನ್ಯಾಯಾಲಯ
ನ್ಯಾಯಾಲಯImage Credit source: Times Of India
ನಯನಾ ರಾಜೀವ್
|

Updated on: Mar 10, 2023 | 2:44 PM

Share

ಪತಿ ತನಗೆ ಮೋಸ ಮಾಡಿ ಬ್ಯಾಂಕ್​ನಿಂದ ಹಣ ದೋಚಿದ್ದಾರೆ ಎಂದು ಮಹಿಳೆಯೊಬ್ಬರು ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ ಇದು ಗ್ರಾಹಕ ವ್ಯಾಜ್ಯವಲ್ಲ ಆನ್​ಲೈನ್ ವಂಚನೆ ಎಂದು ನ್ಯಾಯಾಲಯ ಸ್ಪಷ್ಟವಾಗಿ ತಿಳಿಸಿದೆ. ಎಚ್​ಡಿಎಫ್​ಸಿ ಬ್ಯಾಂಕ್ ವಿರುದ್ಧದ ಸಲ್ಲಿಸಲಾಗಿದ್ದ ಸೇವೆಯಲ್ಲಿನ ಕೊರತೆ ದೂರನ್ನು ಜಿಲ್ಲಾ ಗ್ರಾಹಕ ನ್ಯಾಯಾಲಯ ವಜಾಗೊಳಿಸಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಆನ್​ಲೈನ್ ಟ್ರ್ಯಾನ್ಸಾಕ್ಷನ್​ನಲ್ಲಿ ಬ್ಯಾಂಕ್ ಯಾವ್ದೇ ಕಾರಣಕ್ಕೂ ಮಧ್ಯಪ್ರವೇಶಿಸುವುದಿಲ್ಲ. ಆನ್​ಲೈನ್ ವಟಿವಾಟಿನಲ್ಲಾದ ಮೋಸದಲ್ಲಿ ಬ್ಯಾಂಕ್ ಭಾಗಿಯಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಹಾಗಾಗಿ ಬ್ಯಾಂಕ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕೋರ್ಟ್​ ಹೇಳಿದೆ.

ಮುಂಬೈ ನಿವಾಸಿಯಾಗಿರುವ ನಿವಿಯಾ ತನ್ನ ಪತಿಯಿಂದ ವಂಚನೆಗೊಳಗಾಗಿದ್ದೇನೆ ಎಂದು ದೂರು ನೀಡಿದ್ದರು. ಪತಿ ನನಗೆ ಮೋಸ ಮಾಡಿ 5.11 ಲಕ್ಷಕ್ಕೂ ಅಧಿಕ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಆ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾರೆ.

ಮತ್ತಷ್ಟು ಓದಿ: Cyber Crime: ಹಣ ಡಬಲ್ ಆಮಿಷವೊಡ್ಡಿ ಪ್ರತಿಷ್ಠಿತ ಮನೆತನ ‌ಮಹಿಳೆಗೆ ಲಕ್ಷ ಲಕ್ಷ ಹಣ ವಂಚನೆ

ಈ ಕುರಿತು ಎಫ್​ಐಆರ್​ ದಾಖಲಿಸಲಾಗಿದೆ. ಸೇವೆಯಲ್ಲಿನ ಲೋಪದಿಂದಾಗಿಯೇ ನನ್ನ ಅಕೌಂಟ್​ನಲ್ಲಿರುವ ಹಣವನ್ನು ಸುಲಭವಾಗಿ ಡ್ರಾ ಮಾಡಿದ್ದಾರೆ ಎಂದು ದೂರಿದ್ದರು.

ಇದೀಗ ನ್ಯಾಯಾಲಯವು ಇದರಲ್ಲಿ ಬ್ಯಾಂಕ್ ತಪ್ಪು ಇಲ್ಲ, ಎಂದು ಹೇಳಿದ್ದು, ಈ ಸಮಸ್ಯೆ ನಮ್ಮ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ