AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕನಿಗೆ ಸೇರಿದ 35 ಸಾವಿರ ಮೌಲ್ಯದ ಮದ್ಯದ ಬಾಟಲಿ ಒಡೆದ ಪ್ರಕರಣ: ಇಂಡಿಗೋಗೆ ಶಾಕ್​​ ಕೊಟ್ಟ ಗ್ರಾಹಕರ ಆಯೋಗ

ದೆಹಲಿಯಿಂದ ಚೆನ್ನೈಗೆ ವಿಮಾನದಲ್ಲಿ ಪ್ರಯಾಣಿಸುವಾಗ ಸೂಟ್‌ಕೇಸ್‌ನಲ್ಲಿದ್ದ 35,000 ಮೌಲ್ಯದ ದುಬಾರಿ ಮದ್ಯದ ಬಾಟಲಿಯನ್ನು ಒಡೆದು ನಿರ್ಲಕ್ಷ್ಯ ವಹಿಸಿದ್ದ ಇಂಡಿಗೋ ಏರ್‌ಲೈನ್ಸ್‌ಗೆ ಹೈದರಾಬಾದ್ ಜಿಲ್ಲಾ ಗ್ರಾಹಕರ ವಿವಾದ ಪರಿಹಾರ ಆಯೋಗವು ಭಾರಿ ದಂಡ ವಿಧಿಸಿದೆ. ಬಾಟಲಿಯನ್ನು ಸರಿಯಾಗಿ ಪ್ಯಾಕ್ ಮಾಡಲಾಗಿತ್ತು ಎಂಬುದನ್ನು ಇಂಡಿಗೋ ಒಪ್ಪಿಕೊಂಡರೂ, ತಮ್ಮ ಲಗೇಜ್ ನಿಯಮಗಳ ಪ್ರಕಾರ ಸೂಕ್ಷ್ಮ ವಸ್ತುಗಳನ್ನು ಪ್ರಯಾಣಿಕರು ತಮ್ಮದೇ ಜವಾಬ್ದಾರಿಯಲ್ಲಿ ಸಾಗಿಸಬೇಕು ಎಂದು ಹೇಳಿ ಕೇವಲ 500 ರೂ. ಮೌಲ್ಯದ ವೋಚರ್ ನೀಡಲು ಮುಂದಾಗಿತ್ತು ಎನ್ನಲಾಗಿದೆ.

ಪ್ರಯಾಣಿಕನಿಗೆ ಸೇರಿದ 35 ಸಾವಿರ ಮೌಲ್ಯದ ಮದ್ಯದ ಬಾಟಲಿ ಒಡೆದ ಪ್ರಕರಣ: ಇಂಡಿಗೋಗೆ ಶಾಕ್​​ ಕೊಟ್ಟ ಗ್ರಾಹಕರ ಆಯೋಗ
ಮದ್ಯದ ಬಾಟಲಿ
ಪ್ರಸನ್ನ ಹೆಗಡೆ
|

Updated on: Jul 29, 2026 | 3:34 PM

Share

ಹೈದರಾಬಾದ್, ಜುಲೈ 29: ಪ್ರಯಾಣಿಕನ ದುಬಾರಿ ಮದ್ಯದ ಬಾಟಲಿ ಒಡೆದ ಪ್ರಕರಣದಲ್ಲಿ ಕೇವಲ 500 ಮೌಲ್ಯದ ವೋಚರ್​​ ನೀಡಲು ಮುಂದಾಗಿದ್ದ ಇಂಡಿಗೋ ಏರ್‌ಲೈನ್ಸ್‌ಗೆ ಹೈದರಾಬಾದ್ ಜಿಲ್ಲಾ ಗ್ರಾಹಕರ ವಿವಾದ ಪರಿಹಾರ ಆಯೋಗ-III (District Consumer Disputes Redressal Commission-III) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಒಡೆದ ಬಾಟಲಿಯ ಸಂಪೂರ್ಣ ಮೌಲ್ಯ, ಮಾನಸಿಕ ವೇದನೆಗೆ ಪರಿಹಾರ ಹಾಗೂ ನ್ಯಾಯಾಂಗ ವೆಚ್ಚವನ್ನು ಪಾವತಿಸುವಂತೆ ಆಯೋಗ ಆದೇಶಿಸಿದೆ.

2025ರ ಸೆಪ್ಟೆಂಬರ್ 3ರಂದು ನಡೆದಿದ್ದ ಘಟನೆ

ಯೂಸುಫ್‌ಗುಡ ನಿವಾಸಿ ವಿನೀತ್ ಅವರು 2025ರ ಸೆಪ್ಟೆಂಬರ್ 3ರಂದು ದೆಹಲಿಯಿಂದ ಚೆನ್ನೈಗೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಿದ್ದರು. ಚೆಕ್-ಇನ್ ವೇಳೆ ತಮ್ಮ ಸೂಟ್‌ಕೇಸ್‌ನಲ್ಲಿ 35,000 ಮೌಲ್ಯದ ಪ್ರೀಮಿಯಂ ವೈಟ್ ಅಂಡ್ ಬ್ಲೂ ಮದ್ಯದ ಬಾಟಲಿ ಇದೆ ಎಂದು ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಮುಂಚಿತವಾಗಿಯೇ ತಿಳಿಸಿದ್ದರು. ಇದು ಅತ್ಯಂತ ಸೂಕ್ಷ್ಮ ವಸ್ತುವಾಗಿರುವುದನ್ನೂ ಅವರು ಹೇಳಿದ್ದರು. ಆದರೆ ಚೆನ್ನೈ ತಲುಪಿ ಲಗೇಜ್ ಪಡೆದು ಸೂಟ್‌ಕೇಸ್ ತೆರೆದಾಗ, ಮದ್ಯದ ಬಾಟಲಿ ಸಂಪೂರ್ಣ ಒಡೆದಿರುವುದು ಕಂಡುಬಂದಿತು. ಬಾಟಲಿಯಲ್ಲಿದ್ದ ಮದ್ಯ ಸೋರಿಕೆಯಾಗಿದ್ದು, ಸೂಟ್‌ಕೇಸ್‌ನಲ್ಲಿದ್ದ ಇತರೆ ವಸ್ತುಗಳಿಗೂ ಹಾನಿಯಾಗಿತ್ತು.

ಇದನ್ನೂ ಓದಿ: 15 ಸಾವಿರ ರೂ ಸಿಗುತ್ತೆ ಎಂಬ ಆಸೆಗೆ ತಲೆ ಬೋಳಿಸಿಕೊಂಡ ಮಹಿಳೆಯರು, ಆಮೇಲೆ ಸಿಕ್ಕಿದ್ದೇನು?

ಪ್ರಯಾಣಿಕರದ್ದೇ ಜವಾಬ್ದಾರಿ ಎಂದಿದ್ದ ಇಂಡಿಗೋ

ವಿಮಾನ ನಿಲ್ದಾಣದಲ್ಲೇ ದೂರು ನೀಡಿದ ಬಳಿಕವೂ ಯಾವುದೇ ಸಮರ್ಪಕ ಪ್ರತಿಕ್ರಿಯೆ ಸಿಗದ ಕಾರಣ ವಿನೀತ್ ಇ-ಮೇಲ್ ಮೂಲಕ ಇಂಡಿಗೋವನ್ನು ಸಂಪರ್ಕಿಸಿದರು. ಬಾಟಲಿಯನ್ನು ಸರಿಯಾಗಿ ಪ್ಯಾಕ್ ಮಾಡಲಾಗಿತ್ತು ಎಂಬುದನ್ನು ಇಂಡಿಗೋ ಒಪ್ಪಿಕೊಂಡರೂ, ತಮ್ಮ ಲಗೇಜ್ ನಿಯಮಗಳ ಪ್ರಕಾರ ಸೂಕ್ಷ್ಮ ವಸ್ತುಗಳನ್ನು ಪ್ರಯಾಣಿಕರು ತಮ್ಮದೇ ಜವಾಬ್ದಾರಿಯಲ್ಲಿ ಸಾಗಿಸಬೇಕು ಎಂದು ಹೇಳಿ ಕೇವಲ 500 ರೂ. ಮೌಲ್ಯದ ವೋಚರ್ ನೀಡಲು ಮುಂದಾಗಿತ್ತು. ಇದರಿಂದ ಅಸಮಾಧಾನಗೊಂಡ ವಿನೀತ್ ಮೊದಲು ಕಾನೂನು ನೋಟಿಸ್ ನೀಡಿ, ಬಳಿಕ ಗ್ರಾಹಕರ ಆಯೋಗದ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೈದರಾಬಾದ್ ಜಿಲ್ಲಾ ಗ್ರಾಹಕರ ವಿವಾದ ಪರಿಹಾರ ಆಯೋಗ-III, ಚೆಕ್-ಇನ್ ಲಗೇಜ್ ಅನ್ನು ನಿರ್ಲಕ್ಷ್ಯದಿಂದ ನಿರ್ವಹಿಸಿರುವುದರಿಂದ ಇಂಡಿಗೋ ಸೇವೆಯಲ್ಲಿ ಲೋಪವಾಗಿದೆ ಎಂದು ತೀರ್ಪು ನೀಡಿದೆ. ಒಡೆದ ಮದ್ಯದ ಬಾಟಲಿಗೆ 35,000 ಪರಿಹಾರವನ್ನು ವಾರ್ಷಿಕ 9% ಬಡ್ಡಿಯೊಂದಿಗೆ, ಮಾನಸಿಕ ವೇದನೆಗೆ 15,000, ಹಾಗೂ ನ್ಯಾಯಾಂಗ ವೆಚ್ಚಕ್ಕೆ 5,000 ಪಾವತಿಸುವಂತೆ ಆಯೋಗವು ಇಂಡಿಗೋಗೆ ಆದೇಶಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!