AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರವಾಗಿ ವರ್ತಿಸುತ್ತಿರುವ ಸರ್ಕಾರವನ್ನು ನಿಯಂತ್ರಿಸಿ: ಕೇಂದ್ರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಆ ಭಾಷಣಗಳಲ್ಲಿ ಮಾನಹಾನಿಕರ, ಅಸಭ್ಯ ಅಥವಾ ಅಸಂಸದೀಯ ಅಥವಾ ಘನತೆಯಿಲ್ಲದ ಯಾವುದೇ ಪದವಿರಲಿಲ್ಲ" ಎಂದು ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ. ರಾಹುಲ್ ಗಾಂಧಿ ಮತ್ತು ಖರ್ಗೆಯವರು ಅತ್ಯಂತ ನಯವಾಗಿ ಮತ್ತು ಗೌರವಯುತವಾಗಿ ಮಾತನಾಡಿದ್ದಾರೆ ಮತ್ತು ವಾಸ್ತವಿಕ ನಿರೂಪಣೆಗಳ ಮೇಲೆ ಅವರು ಭಾಷಣ ಮಾಡಿದ್ದಾರೆ .

ವಿಚಿತ್ರವಾಗಿ ವರ್ತಿಸುತ್ತಿರುವ ಸರ್ಕಾರವನ್ನು ನಿಯಂತ್ರಿಸಿ: ಕೇಂದ್ರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on:Feb 12, 2023 | 7:28 PM

Share

ದೆಹಲಿ: ಈ ವಾರದ ಆರಂಭದಲ್ಲಿ ಸಂಸತ್ತಿನಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಮತ್ತು ರಾಹುಲ್ ಗಾಂಧಿ (Rahul Gandhi) ಮಾಡಿದ ಟೀಕೆಗಳನ್ನು ಅಳಿಸಿದ್ದರ ಬಗ್ಗೆ ಕಾಂಗ್ರೆಸ್(Congress), ಕೇಂದ್ರ ಸರ್ಕಾರವನ್ನು ಮತ್ತಷ್ಟು ಪ್ರಶ್ನಿಸಿದೆ ಬಿಜೆಪಿ, ಸಂಸತ್ ಕಲಾಪಗಳು ಒಮ್ಮತ, ಸಹಯೋಗ ಮತ್ತು ಹೊಂದಾಣಿಕೆಯ ಮೂಲಕ ನಡೆಯಲು ಬಯಸುವುದಿಲ್ಲ, ಆದರೆ ಘರ್ಷಣೆ, ಅವ್ಯವಸ್ಥೆ ಮತ್ತು ಸಂಘರ್ಷದ ಮೂಲಕ ನಡೆಯಬೇಕೆಂದು ಬಯಸುತ್ತದೆ. ವಿಚಿತ್ರವಾಗಿ ವರ್ತಿಸುತ್ತಿರುವ ಸರ್ಕಾರವನ್ನು ನಿಯಂತ್ರಿಸಿ ಎಂದ ಪಕ್ಷ, ತಮ್ಮ ನಾಯಕರು ಯಾವುದೇ ಆಕ್ಷೇಪಾರ್ಹ ಪದಗಳನ್ನು ಅಲ್ಲಿ ಹೇಳಿಲ್ಲ ಎಂದಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದಾಗ ರಾಹುಲ್ ಗಾಂಧಿ ಮತ್ತು ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. 2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅದಾನಿ ಆಸ್ತಿ ಹೆಚ್ಚಾಗಿದ್ದು, ಬಿಲಿಯನೇರ್ ಗೌತಮ್ ಅದಾನಿಯೊಂದಿಗೆ ಪ್ರಧಾನಿಯವರಿಗೆ ಇರುವ ನಂಟು ಏನೆಂದು ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದರು.

“ಆ ಭಾಷಣಗಳಲ್ಲಿ ಮಾನಹಾನಿಕರ, ಅಸಭ್ಯ ಅಥವಾ ಅಸಂಸದೀಯ ಅಥವಾ ಘನತೆಯಿಲ್ಲದ ಯಾವುದೇ ಪದವಿರಲಿಲ್ಲ” ಎಂದು ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ. ರಾಹುಲ್ ಗಾಂಧಿ ಮತ್ತು ಖರ್ಗೆಯವರು ಅತ್ಯಂತ ನಯವಾಗಿ ಮತ್ತು ಗೌರವಯುತವಾಗಿ ಮಾತನಾಡಿದ್ದಾರೆ ಮತ್ತು ವಾಸ್ತವಿಕ ನಿರೂಪಣೆಗಳ ಮೇಲೆ ಅವರು ಭಾಷಣ ಮಾಡಿದ್ದಾರೆ. ಅಂದ ಹಾಗೆ ಸಂಸತ್ ದಾಖಲೆಗಳಿಂದ ತೆಗೆದು ಹಾಕಿದ ಭಾಗಗಳು ಕೇಳಿದ ಪ್ರಶ್ನೆಗಳನ್ನು ಸಹ ಒಳಗೊಂಡಿವೆ ಎಂಬುದು ಅಚ್ಚರಿಯುಂಟು ಮಾಡಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರನ್ನು “ಸದನಗಳ ಒಳಗೆ ವಾಕ್ ಸ್ವಾತಂತ್ರ್ಯದ ಪಾಲಕರು ಮತ್ತು ರಕ್ಷಕರು” ಎಂದು ಬಣ್ಣಿಸಿದ ಸಿಂಘ್ವಿ, “ಸಂಸತ್ತಿನ ಉಭಯ ಸದನಗಳಲ್ಲಿ ಮುಕ್ತ, ಸ್ಪಷ್ಟ ಮತ್ತು ನಿರ್ಭೀತ ಚರ್ಚೆಗೆ ಅವಕಾಶ ನೀಡದಿದ್ದರೆ, ಪ್ರಜಾಪ್ರಭುತ್ವವು ದುರ್ಬಲವಾಗಿದೆ ಎಂದರ್ಥ.

ಇದನ್ನೂ ಓದಿ: Malfeasance: ಸದಾ ನೆಹರು ಹೆಸರನ್ನು ಹೇಳುವ ಬಿಜೆಪಿಯ ಗೀಳಿಗೆ ಹೊಸ ಪದ ಪರಿಚಯಿಸಿದ ಶಶಿ ತರೂರ್

ನಿರ್ಭೀತ ಚರ್ಚೆಗೆ ಕಾರಣವಾಗುವ ವಾಕ್ ಸ್ವಾತಂತ್ರ್ಯವನ್ನು ತಡೆದರೆ ಸಂಸತ್ ಸಂಸತ್ ಆಗಿ ಉಳಿಯಲು ಸಾಧ್ಯವಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಬಹಳ ಹಿಂದಿನಿಂದಲೂ ಸರ್ಕಾರವನ್ನು ಕ್ರೋನಿ ಕ್ಯಾಪಿಟಲಿಸಂ ಎಂದು ಆರೋಪಿಸುತ್ತಿದೆ. ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯ ನಂತರ ಅದಾನಿ ಕಂಪನಿಗಳ ಮೇಲೆ ಕಾಂಗ್ರೆಸ್ ಮತ್ತಷ್ಟು ವಾಗ್ದಾಳಿ ಮಾಡಿದೆ.ಗಾಂಧಿಯವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದ ಕಾನೂನು ಸಚಿವ ಕಿರಣ್ ರಿಜಿಜು ವ್ಯಥಾ ಆರೋಪಗಳನ್ನು ಮಾಡಬೇಡಿ, ನಿಮ್ಮ ಆರೋಪಕ್ಕೆ ಸಾಕ್ಷ್ಯನೀಡಿ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:26 pm, Sun, 12 February 23

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ