AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Digital India Bill: ಡಿಜಿಟಲ್ ನಾಗರಿಕರಿಗೆ ಹಾನಿಯಾಗದಂತೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​​ನ್ನು ನಿಯಂತ್ರಿಸುತ್ತೇವೆ: ರಾಜೀವ್ ಚಂದ್ರಶೇಖರ್

ಡಿಜಿಟಲ್ ನಾಗರಿಕರಿಗೆ ಹಾನಿಯಾಗದಂತೆ ಸರ್ಕಾರವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ( ಕೃತಕ ಬುದ್ಧಿಮತ್ತೆಯನ್ನು) ನಿಯಂತ್ರಿಸುತ್ತದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.

Digital India Bill: ಡಿಜಿಟಲ್ ನಾಗರಿಕರಿಗೆ ಹಾನಿಯಾಗದಂತೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​​ನ್ನು ನಿಯಂತ್ರಿಸುತ್ತೇವೆ: ರಾಜೀವ್ ಚಂದ್ರಶೇಖರ್
ರಾಜೀವ್ ಚಂದ್ರಶೇಖರ್
ಅಕ್ಷಯ್​ ಪಲ್ಲಮಜಲು​​
|

Updated on:Jun 09, 2023 | 2:28 PM

Share

ದೆಹಲಿ: ಡಿಜಿಟಲ್ ನಾಗರಿಕರಿಗೆ ಹಾನಿಯಾಗದಂತೆ ಸರ್ಕಾರವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ( ಕೃತಕ ಬುದ್ಧಿಮತ್ತೆಯನ್ನು) ನಿಯಂತ್ರಿಸುತ್ತದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು. ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ 9 ವರ್ಷಗಳಲ್ಲಿ ಡಿಜಿಟಲೀಕರಣದ ವಿಷಯದಲ್ಲಿ ಭಾರತ ಎಷ್ಟು ದೂರ ಸಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ  ಹೇಳಿದರು. ಸಾಮಾಜಿಕ ಜಾಲತಾಣದಲ್ಲಿ ವಿಷತ್ವ ಮತ್ತು ಅಪರಾಧ ವಿಚಾರಗಳು ಗಣನೀಯವಾಗಿ ಹೆಚ್ಚಿದೆ. ಡಿಜಿಟಲ್ ನಾಗರಿಕರಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು. 85 ಕೋಟಿ ಭಾರತೀಯರು ಸಾಮಾಜಿಕ ಜಾಲತಾಣವನ್ನು ಬಳಸುತ್ತಾರೆ, ಇದು 2025 ರ ವೇಳೆಗೆ 120 ಕೋಟಿಗಳಷ್ಟು ತಲುಪುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಡಾಕ್ಸಿಂಗ್‌ನಂತಹ ಅಪರಾಧಗಳು (ದುರುದ್ದೇಶಪೂರಿತ ಉದ್ದೇಶದಿಂದ ಮತ್ತು ಅವರ ಒಪ್ಪಿಗೆಯಿಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಮತ್ತು ವ್ಯಕ್ತಿಗಳ ವಿವರಗಳನ್ನು ಪೋಸ್ಟ್ ಮಾಡುವುದು) ಹೆಚ್ಚುತ್ತಿದೆ, ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿದೆ. ಈ ಕುರಿತು ಕೇಂದ್ರವು ರಾಜ್ಯ ಸರ್ಕಾರಗಳೊಂದಿಗೆ ಕಟ್ಟುನಿಟ್ಟಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಸಚಿವರು ಹೇಳಿದರು. ಅದಕ್ಕೆ ಬೇಕಾದ ಕಾನೂನು ಕ್ರಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡಬೇಕಿದೆ ಎಂದು ಹೇಳಿದೆ.

ಇದನ್ನೂ ಓದಿ: Bill Gates: ಭಾರತದ ಪ್ರವಾಸದ ಬಗ್ಗೆ ಮೆಚ್ಚುಗೆಯ ಮಹಾಪೂರವನ್ನೇ ಸುರಿಸಿದ ವಿಶ್ವದ ಶ್ರೀಮಂತ ವ್ಯಕ್ತಿ ಬಿಲ್​ಗೇಟ್ಸ್​

ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನದ ರಾಜ್ಯ ಸಚಿವ ಚಂದ್ರಶೇಖರ್, ಡಿಜಿಟಲ್ ಇಂಡಿಯಾ ಬಿಲ್ ಕುರಿತು ಮಧ್ಯಸ್ಥಗಾರರ ಜೊತೆ ಸಮಾಲೋಚನೆ ಈ ತಿಂಗಳು ಪ್ರಾರಂಭವಾಗಲಿದೆ ಎಂದು ಹೇಳಿದರು. ಹೊಸ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಯನ್ನು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಹೇಳಿದ್ದಾರೆ.

Published On - 2:21 pm, Fri, 9 June 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!