AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Digital India Bill: ಡಿಜಿಟಲ್ ನಾಗರಿಕರಿಗೆ ಹಾನಿಯಾಗದಂತೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​​ನ್ನು ನಿಯಂತ್ರಿಸುತ್ತೇವೆ: ರಾಜೀವ್ ಚಂದ್ರಶೇಖರ್

ಡಿಜಿಟಲ್ ನಾಗರಿಕರಿಗೆ ಹಾನಿಯಾಗದಂತೆ ಸರ್ಕಾರವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ( ಕೃತಕ ಬುದ್ಧಿಮತ್ತೆಯನ್ನು) ನಿಯಂತ್ರಿಸುತ್ತದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.

Digital India Bill: ಡಿಜಿಟಲ್ ನಾಗರಿಕರಿಗೆ ಹಾನಿಯಾಗದಂತೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​​ನ್ನು ನಿಯಂತ್ರಿಸುತ್ತೇವೆ: ರಾಜೀವ್ ಚಂದ್ರಶೇಖರ್
ರಾಜೀವ್ ಚಂದ್ರಶೇಖರ್
ಅಕ್ಷಯ್​ ಪಲ್ಲಮಜಲು​​
|

Updated on:Jun 09, 2023 | 2:28 PM

Share

ದೆಹಲಿ: ಡಿಜಿಟಲ್ ನಾಗರಿಕರಿಗೆ ಹಾನಿಯಾಗದಂತೆ ಸರ್ಕಾರವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ( ಕೃತಕ ಬುದ್ಧಿಮತ್ತೆಯನ್ನು) ನಿಯಂತ್ರಿಸುತ್ತದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು. ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ 9 ವರ್ಷಗಳಲ್ಲಿ ಡಿಜಿಟಲೀಕರಣದ ವಿಷಯದಲ್ಲಿ ಭಾರತ ಎಷ್ಟು ದೂರ ಸಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ  ಹೇಳಿದರು. ಸಾಮಾಜಿಕ ಜಾಲತಾಣದಲ್ಲಿ ವಿಷತ್ವ ಮತ್ತು ಅಪರಾಧ ವಿಚಾರಗಳು ಗಣನೀಯವಾಗಿ ಹೆಚ್ಚಿದೆ. ಡಿಜಿಟಲ್ ನಾಗರಿಕರಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು. 85 ಕೋಟಿ ಭಾರತೀಯರು ಸಾಮಾಜಿಕ ಜಾಲತಾಣವನ್ನು ಬಳಸುತ್ತಾರೆ, ಇದು 2025 ರ ವೇಳೆಗೆ 120 ಕೋಟಿಗಳಷ್ಟು ತಲುಪುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಡಾಕ್ಸಿಂಗ್‌ನಂತಹ ಅಪರಾಧಗಳು (ದುರುದ್ದೇಶಪೂರಿತ ಉದ್ದೇಶದಿಂದ ಮತ್ತು ಅವರ ಒಪ್ಪಿಗೆಯಿಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಮತ್ತು ವ್ಯಕ್ತಿಗಳ ವಿವರಗಳನ್ನು ಪೋಸ್ಟ್ ಮಾಡುವುದು) ಹೆಚ್ಚುತ್ತಿದೆ, ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿದೆ. ಈ ಕುರಿತು ಕೇಂದ್ರವು ರಾಜ್ಯ ಸರ್ಕಾರಗಳೊಂದಿಗೆ ಕಟ್ಟುನಿಟ್ಟಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಸಚಿವರು ಹೇಳಿದರು. ಅದಕ್ಕೆ ಬೇಕಾದ ಕಾನೂನು ಕ್ರಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡಬೇಕಿದೆ ಎಂದು ಹೇಳಿದೆ.

ಇದನ್ನೂ ಓದಿ: Bill Gates: ಭಾರತದ ಪ್ರವಾಸದ ಬಗ್ಗೆ ಮೆಚ್ಚುಗೆಯ ಮಹಾಪೂರವನ್ನೇ ಸುರಿಸಿದ ವಿಶ್ವದ ಶ್ರೀಮಂತ ವ್ಯಕ್ತಿ ಬಿಲ್​ಗೇಟ್ಸ್​

ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನದ ರಾಜ್ಯ ಸಚಿವ ಚಂದ್ರಶೇಖರ್, ಡಿಜಿಟಲ್ ಇಂಡಿಯಾ ಬಿಲ್ ಕುರಿತು ಮಧ್ಯಸ್ಥಗಾರರ ಜೊತೆ ಸಮಾಲೋಚನೆ ಈ ತಿಂಗಳು ಪ್ರಾರಂಭವಾಗಲಿದೆ ಎಂದು ಹೇಳಿದರು. ಹೊಸ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಯನ್ನು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಹೇಳಿದ್ದಾರೆ.

Published On - 2:21 pm, Fri, 9 June 23

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!