ದೆಹಲಿ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಕಪಿಲ್ ಮಿಶ್ರಾ ನೇಮಕ

ದೆಹಲಿಯಲ್ಲಿ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಗಳನ್ನು ಟೀಕಿಸುವುದು ಮತ್ತು ನಗರದಲ್ಲಿ "ಮಿನಿ-ಪಾಕಿಸ್ತಾನ" ಎಂದು ಉಲ್ಲೇಖಿಸುವುದು ಅತ್ಯಂತ ಆಕ್ಷೇಪಾರ್ಹ ಮತ್ತು ಕೋಮು ಭಾವನೆಗಳಿಗೆ ಧಕ್ಕೆ ಎಂದು ಕಪಿಲ್ ಮಿಶ್ರಾ ಅವರ ಟ್ವೀಟ್ ಅನ್ನು ತೆಗೆದುಹಾಕಲು ಚುನಾವಣಾ ಆಯೋಗವು 2020 ರಲ್ಲಿ ಟ್ವಿಟರ್‌ಗೆ ಕೇಳಿಕೊಂಡಿತ್ತು.

ದೆಹಲಿ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಕಪಿಲ್ ಮಿಶ್ರಾ ನೇಮಕ
ಕಪಿಲ್ ಮಿಶ್ರಾ
Follow us
|

Updated on: Aug 05, 2023 | 4:13 PM

ದೆಹಲಿ ಆಗಸ್ಟ್ 05: ಕೋಮುವಾದಿ ಮತ್ತು ಪ್ರಚೋದನಾಕಾರಿ ಟ್ವೀಟ್‌ಗಳಿಗೆ ಹೆಸರುವಾಸಿಯಾಗಿರುವ ಬಿಜೆಪಿಯ (BJP) ವಿವಾದಿತ ನಾಯಕ ಕಪಿಲ್ ಮಿಶ್ರಾ (Kapil Mishra) ಅವರನ್ನು ದೆಹಲಿ (Delhi) ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮಿಶ್ರಾ ಅವರನ್ನು ನೇಮಕ ಮಾಡಿರುವ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ (Virendra Sachdeva) ಅವರು, ಈ ವಾರದ ಆರಂಭದಲ್ಲಿ ಘೋಷಿಸಲಾದ ಪಕ್ಷದ ಹೊಸ ಪದಾಧಿಕಾರಿಗಳ ಪಟ್ಟಿಯಲ್ಲಿ ಅವರ ಹೆಸರು ಇದೆ. ಆದರೆ ಕೆಲವು ಕಾರಣಗಳಿಂದ ಅದನ್ನು ಘೋಷಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ದೆಹಲಿಯ ರಸ್ತೆಗಳನ್ನು ತೆರವುಗೊಳಿಸಲು ದೆಹಲಿ ಪೊಲೀಸರಿಗೆ ಆದೇಶ ನೀಡಿದ್ದಕ್ಕಾಗಿ 2020 ರಲ್ಲಿ ಮಿಶ್ರಾ ಟೀಕೆಗೆ ಗುರಿಯಾಗಿದ್ದರು. ಈಶಾನ್ಯ ದೆಹಲಿ ಗಲಭೆಯಲ್ಲಿ 50 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದು, ನೂರಾರು ಜನರು ಗಾಯಗೊಂಡ ಸಂದರ್ಭದಲ್ಲಿ ಈ ಭಾಷಣವನ್ನು ಮಾಡಲಾಗಿತ್ತು. ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ವಿರುದ್ಧ ಪ್ರತಿಭಟನಾಕಾರರು ಮತ್ತು   ಅದನ್ನು ಬೆಂಬಲಿಸುವ ಗುಂಪಿನ ನಡುವೆ ಘರ್ಷಣೆಗಳು ಭುಗಿಲೆದ್ದ ನಂತರ ವಕೀಲರ ಗುಂಪು ಮಿಶ್ರಾ ಅವರ “ಪ್ರಚೋದನಕಾರಿ ಟ್ವೀಟ್‌ಗಳಿಗಾಗಿ” ಪೊಲೀಸ್ ದೂರು ದಾಖಲಿಸಿದೆ.

ದೆಹಲಿ ಪೊಲೀಸರಿಗೆ ಮೂರು ದಿನಗಳ ಆಜ್ಞೆ, ಜಾಫ್ರಾಬಾದ್ ಮತ್ತು ಚಾಂದ್ ಬಾಗ್‌ನಲ್ಲಿನ ರಸ್ತೆಗಳನ್ನು ತೆರವುಗೊಳಿಸಿ. ಇದಾದ ನಂತರ, ನಮ್ಮಲ್ಲಿ ಹೇಳಲು ಬರಬೇಡಿ. ನಾವು ನಿಮ್ಮ ಮಾತನ್ನು ಕೇಳುವುದಿಲ್ಲ. ಮೂರೇ ಮೂರು ದಿನಗಳು” ಎಂದು ವಿಡಿಯೊ ಟ್ವೀಟ್ ಮಾಡಿದ ಮಿಶ್ರಾ ಆದೇಶ ಹೊರಡಿಸಿದ್ದರು.

ದೆಹಲಿಯಲ್ಲಿ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಗಳನ್ನು ಟೀಕಿಸುವುದು ಮತ್ತು ನಗರದಲ್ಲಿ “ಮಿನಿ-ಪಾಕಿಸ್ತಾನ” ಎಂದು ಉಲ್ಲೇಖಿಸುವುದು ಅತ್ಯಂತ ಆಕ್ಷೇಪಾರ್ಹ ಮತ್ತು ಕೋಮು ಭಾವನೆಗಳಿಗೆ ಧಕ್ಕೆ ಎಂದು ಕಪಿಲ್ ಮಿಶ್ರಾ ಅವರ ಟ್ವೀಟ್ ಅನ್ನು ತೆಗೆದುಹಾಕಲು ಚುನಾವಣಾ ಆಯೋಗವು 2020 ರಲ್ಲಿ ಟ್ವಿಟರ್‌ಗೆ ಕೇಳಿಕೊಂಡಿತ್ತು.

ಇದನ್ನೂ ಓದಿ: ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಜರಾತ್ ಬಿಜೆಪಿ ನಾಯಕ ಪ್ರದೀಪ್‌ಸಿಂಗ್ ವಘೇಲಾ

12 ನೇ ತರಗತಿಯ ಇತಿಹಾಸ ಪಠ್ಯಪುಸ್ತಕಗಳಿಂದ ಮೊಘಲ್ ಸಾಮ್ರಾಜ್ಯದ ಕೆಲವು ಅಧ್ಯಾಯಗಳನ್ನು ಅಳಿಸುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ನಿರ್ಧಾರವನ್ನು ಮಿಶ್ರಾ ಏಪ್ರಿಲ್‌ನಲ್ಲಿ ಶ್ಲಾಘಿಸಿದ್ದರು. ‘ಕಳ್ಳರನ್ನು’ ಮೊಘಲ್ ದೊರೆಗಳು ಎಂದು ಕರೆಯಲಾಗುತ್ತಿದೆ ಎಂದು ಆರೋಪಿಸಿದ ಅವರು, ಈ ಉಪಕ್ರಮವು ‘ಸತ್ಯ’ದ ಮೇಲೆ ಬೆಳಕು ಚೆಲ್ಲುತ್ತದೆ ಎಂದು ಹೇಳಿದರು. ಎಎಪಿ ಸರ್ಕಾರದ ಮಾಜಿ ಸಚಿವ ಕಪಿಲ್ ಮಿಶ್ರಾ, ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರೊಂದಿಗಿನ ಭಿನ್ನಾಭಿಪ್ರಾಯಗಳು ಬಹಿರಂಗವಾದ ನಂತರ ಆಗಸ್ಟ್ 2019 ರಲ್ಲಿ ದೆಹಲಿ ಬಿಜೆಪಿಗೆ ಸೇರಿದರು.

ಹಿಂದುತ್ವ ಸಿದ್ಧಾಂತದ ಕುರಿತು ಪ್ರಚೋದನಕಾರಿ ಭಾಷಣಗಳಿಗೆ ಹೆಸರುವಾಸಿಯಾಗಿರುವ ಮಿಶ್ರಾ ಅವರು ದೆಹಲಿ ಬಿಜೆಪಿ ಸೇರಿದಾಗಿನಿಂದ ಅವರಿಗೆ ಯಾವುದೇ ಸಾಂಸ್ಥಿಕ ಜವಾಬ್ದಾರಿಯನ್ನು ನೀಡಲಾಗಿಲ್ಲ. ಇವರು 2020 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮಾಡೆಲ್ ಟೌನ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದು, ಎಎಪಿಯ ಅಖಿಲೇಶ್ ಪತಿ ತ್ರಿಪಾಠಿ ವಿರುದ್ಧ ಸೋತಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?