AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಗಡಿಯಲ್ಲಿ ಕ್ರೈಸ್ತ ಮಿಷನರಿಗಳಿಂದ ಬಲವಂತದ ಮತಾಂತರ; ಅಕಲ್ ತಖ್ತ್ ಜತೇದಾರ್ ಆರೋಪ

ಕ್ರಿಶ್ಚಿಯನ್ ಮಿಷನರಿಗಳು ಕಳೆದ ಕೆಲವು ವರ್ಷಗಳಿಂದ ಬಲವಂತದ ಮತಾಂತರಕ್ಕಾಗಿ ಗಡಿ ಪ್ರದೇಶದಲ್ಲಿ ಪ್ರಚಾರವನ್ನು ನಡೆಸುತ್ತಿದ್ದಾರೆ. ಪಂಜಾಬ್ ಗಡಿಯಲ್ಲಿ ಮುಗ್ಧ ಜನರನ್ನು ವಂಚಿಸಲಾಗುತ್ತಿದೆ ಎಂದು ಅಕಲ್ ತಖ್ತ್ ಜತೇದಾರ್ ಗಿಯಾನಿ ಹರಪ್ರೀತ್ ಸಿಂಗ್ ಹೇಳಿದ್ದಾರೆ.

ಪಂಜಾಬ್ ಗಡಿಯಲ್ಲಿ ಕ್ರೈಸ್ತ ಮಿಷನರಿಗಳಿಂದ ಬಲವಂತದ ಮತಾಂತರ; ಅಕಲ್ ತಖ್ತ್ ಜತೇದಾರ್ ಆರೋಪ
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Oct 13, 2021 | 10:02 AM

Share

ನವದೆಹಲಿ: ಕ್ರಿಶ್ಚಿಯನ್ ಮಿಷನರಿಗಳು ಪಂಜಾಬ್‌ನ ಗಡಿ ಪ್ರದೇಶಗಳಲ್ಲಿ ಬಲವಂತದ ಮತಾಂತರಕ್ಕಾಗಿ ಅಭಿಯಾನ ನಡೆಸಲಾಗುತ್ತಿದೆ. ಶಿರೋಮಣಿ ಗುರುದ್ವಾರಾ ಪರ್ಬಂಧಕ್ ಸಮಿತಿಯು (SGPC) ಇದಕ್ಕೆ ಪ್ರತಿಯಾಗಿ ಅಭಿಯಾನವನ್ನು ಆರಂಭಿಸಿದೆ ಎಂದು ಅಕಲ್ ತಖ್ತ್ ಜತೇದಾರ್ ಗಿಯಾನಿ ಹರಪ್ರೀತ್ ಸಿಂಗ್ ಹೇಳಿದ್ದಾರೆ.

ಕ್ರಿಶ್ಚಿಯನ್ ಮಿಷನರಿಗಳು ಕಳೆದ ಕೆಲವು ವರ್ಷಗಳಿಂದ ಬಲವಂತದ ಮತಾಂತರಕ್ಕಾಗಿ ಗಡಿ ಪ್ರದೇಶದಲ್ಲಿ ಪ್ರಚಾರವನ್ನು ನಡೆಸುತ್ತಿದ್ದಾರೆ. ಪಂಜಾಬ್ ಗಡಿಯಲ್ಲಿ ಮುಗ್ಧ ಜನರನ್ನು ವಂಚಿಸಲಾಗುತ್ತಿದೆ ಮತ್ತು ಮತಾಂತರಕ್ಕೆ ಆಮಿಷ ಒಡ್ಡಲಾಗುತ್ತಿದೆ. ಇಂತಹ ಅನೇಕ ವರದಿಗಳನ್ನು ನಾವು ಸ್ವೀಕರಿಸಿದ್ದೇವೆ ಎಂದು ಸಿಖ್ ಸಮುದಾಯದ ಅತ್ಯುನ್ನತ ತಾತ್ಕಾಲಿಕ ಸ್ಥಾನದ ಮುಖ್ಯ ಅರ್ಚಕರಾಗಿರುವ ಅಕಲ್ ತಖ್ತ್ ಜತೇದಾರ್ ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಶಿರೋಮಣಿ ಗುರುದ್ವಾರಾ ಪರ್ಬಂಧಕ್ ಸಮಿತಿಯು ಬಲವಂತದ ಮತಾಂತರವನ್ನು ಎದುರಿಸಲು ‘ಘರ್ ಘರ್ ಅಂದರ್ ಧರ್ಮಶಾಲ್’ ಅಭಿಯಾನವನ್ನು ಆರಂಭಿಸಿದೆ. ಇದು ಸಿಖ್ ಧರ್ಮದ ಮೇಲೆ ಅಪಾಯಕಾರಿ ದಾಳಿಯಾಗಿದೆ. ಈ ಅಭಿಯಾನದ ಅಡಿಯಲ್ಲಿ ಸಿಖ್ ಬೋಧಕರು ತಮ್ಮ ಧರ್ಮದ ಕುರಿತು ಪ್ರಚಾರ ಮಾಡಲು ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದಾರೆ. ಧರ್ಮವು ಆಧ್ಯಾತ್ಮಿಕತೆಯ ವಿಷಯವಾಗಿದೆ. ಬಲವಂತದ ಮತಾಂತರ ಅಥವಾ ಯಾರನ್ನಾದರೂ ಆಮಿಷವೊಡ್ಡುವುದನ್ನು ಎಂದಿಗೂ ಸಮರ್ಥನೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಬಲವಂತದ ಮತಾಂತರದ ವಿರುದ್ಧದ ಅಭಿಯಾನವನ್ನು ಬಲಪಡಿಸುವಲ್ಲಿ ಎಲ್ಲಾ ಸಿಖ್ಖರು ಎಸ್‌ಜಿಪಿಸಿಯನ್ನು ಬೆಂಬಲಿಸಬೇಕು. ನಾವೆಲ್ಲರೂ ಒಂದಾಗಿ ಈ ಸವಾಲನ್ನು ಎದುರಿಸಬೇಕು ಎಂದು ಜತೇದಾರ್ ಗಿಯಾನಿ ಹರ್​ಪ್ರೀತ್ ಸಿಂಗ್ ಹೇಳಿದ್ದಾರೆ.

ಇಂತಹ ಮತಾಂತರದ ಹಿಂದೆ ಹಲವು ಕಾರಣಗಳಿವೆ. ಹಳ್ಳಿಗಳಲ್ಲಿ ದಲಿತರು ಎದುರಿಸುತ್ತಿರುವ ತಾರತಮ್ಯ ಇದಕ್ಕೆ ಮುಖ್ಯ ಕಾರಣ. ದಲಿತರಲ್ಲಿ ಅನಕ್ಷರತೆ ಮತ್ತು ಬಡತನವೂ ಇದೆ. ಇದನ್ನೇ ಗುರಿಯಾಗಿಸಿಕೊಂಡು ಅವರನ್ನು ಮತಾಂತರಕ್ಕೆ ಒಳಪಡಿಸಲಾಗುತ್ತಿದೆ. ಮಿಷನರಿಗಳಿಂದ ದಲಿತರ ಮನವೊಲಿಸಲು ಅವರ ಮನೆಗಳಿಗೆ ತೆರಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲೇಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಧಾರವಾಡ: ಮತಾಂತರಕ್ಕೆ ಯತ್ನ ಆರೋಪ; ಮನೆ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ

ಮತಾಂತರ ಆರೋಪಿಸಿ ರೂರ್ಕಿ ಚರ್ಚ್ ಮೇಲೆ ದಾಳಿ: 200 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ ಉತ್ತರಾಖಂಡ್ ಪೊಲೀಸರು

Published On - 9:54 am, Wed, 13 October 21

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು