AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲೇ ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಶಿರಚ್ಛೇದ

ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್​ ಖಾನ್​ರನ್ನು ಜೈಲಿನಲ್ಲೇ ಸಹ ಕೈದಿಗಳು ಶಿರಚ್ಛೇದ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಭಾನುವಾರ (ಜೂನ್ 2) ಈ ಕೊಲೆ ಮಾಡಿದ್ದಾರೆ.

ಜೈಲಿನಲ್ಲೇ ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಶಿರಚ್ಛೇದ
ನಯನಾ ರಾಜೀವ್
|

Updated on:Jun 03, 2024 | 9:21 AM

Share

1993ರ ಮುಂಬೈ ಬಾಂಬ್ ಸ್ಫೋಟ(Bomb Blast)ದ ಆರೋಪಿ ಮೊಹಮ್ಮದ್ ಅಲಿ ಖಾನ್​ರನ್ನು ಕೊಲ್ಲಾಪುರ ಜೈಲಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪೊಲೀಸರ ಪ್ರಕಾರ, ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಭಾನುವಾರ (ಜೂನ್ 2) ಈ ಕೊಲೆ ಮಾಡಿದ್ದಾರೆ. ಈ ಆರೋಪಿಗಳು ಮೊಹಮ್ಮದ್ ಅಲಿ ಖಾನ್ ಅವರ ಶಿರಚ್ಛೇದ ಮಾಡಿದ್ದು, ನಂತರ ಆತ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

1993ರ ಮುಂಬೈ ಸ್ಫೋಟದ ನಾಲ್ವರು ಅಪರಾಧಿಗಳನ್ನು ಕೊಲ್ಲಾಪುರ ಜೈಲಿನಲ್ಲಿ ಇರಿಸಲಾಗಿದ್ದು, ಒಬ್ಬ ಅಪರಾಧಿಯ ಹೆಸರು ಮೊಹಮ್ಮದ್ ಅಲಿ ಖಾನ್. ಇನ್ನೊಂದು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳನ್ನು ಮೊಹಮ್ಮದ್ ಅಲಿ ಖಾನ್ ಎಂಬುವವರ ಬ್ಯಾರಕ್‌ನಲ್ಲಿ ಇರಿಸಲಾಗಿತ್ತು.

ಕೊಲೆ ಮಾಡಿದ ಆರೋಪಿಗಳ ಹೆಸರು ಪ್ರತೀಕ್ ಪಾಟೀಲ್, ದೀಪಕ್ ಖೋಟ್, ಸಂದೀಪ್ ಚವ್ಹಾಣ್, ರಿತುರಾಜ್ ಇನಾಮದಾರ್ ಮತ್ತು ಸೌರಭ್ ಸಿದ್ಧ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮುಂಬೈ ಸರಣಿ ಸ್ಫೋಟದ ಆರೋಪಿ, ದಾವೂದ್ ಇಬ್ರಾಹಿಂ ಆಪ್ತ ಅಬು ಬಕರ್​ ಯುಎಇಯಲ್ಲಿ ಬಂಧನ; ಶೀಘ್ರವೇ ಭಾರತಕ್ಕೆ ಕರೆತಂದು ವಿಚಾರಣೆ

ಜೈಲು ಇಲಾಖೆಯ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಸ್ವಾತಿ ಸಾಠೆ ಪ್ರಕಾರ, ಮೃತ ಮೊಹಮ್ಮದ್ ಅಲಿ ಖಾನ್ ಸೇರಿದಂತೆ ಈ ಎಲ್ಲಾ ಆರೋಪಿಗಳು ಒಂದೇ ಬ್ಯಾರಕ್‌ನಲ್ಲಿ ಇದ್ದರು. ಇದರಿಂದಾಗಿ ಅವರ ನಡುವೆ ಏನಾದರೂ ಜಗಳವಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಕೊಲ್ಲಾಪುರ ಜೈಲಿನಲ್ಲಿರುವ ಮುಂಬೈ ಸ್ಫೋಟದ ಇತರ ಆರೋಪಿಗಳ ಭದ್ರತೆಯನ್ನು ಜೈಲು ಇಲಾಖೆ ಹೆಚ್ಚಿಸಿದೆ. ಜೈಲಿನೊಳಗೆ ನಡೆದ ಈ ಹತ್ಯೆಗೆ ಪ್ರಮುಖ ಕಾರಣ ಏನು ಎಂಬ ಬಗ್ಗೆ ತನಿಖೆ ಆರಂಭಿಸಲಾಗಿದೆ.ಮುಂಬೈ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೊಹಮ್ಮದ್ ಅಲಿ ಖಾನ್ ಅಲಿಯಾಸ್ ಮುನ್ನಾ ಅಲಿಯಾಸ್ ಮನೋಜ್ ಕುಮಾರ್ ಭನ್ವರ್‌ಲಾಲ್ ಗುಪ್ತಾ ಕೋಲ್ಹಾಪುರ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ. ಐವರು ಆರೋಪಿಗಳ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾರ್ಚ್ 12, 1993 ರಂದು, ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ನ 28 ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಸಂಭವಿಸಿದ ಬೃಹತ್ ಸ್ಫೋಟದಲ್ಲಿ 50 ಜನರು ಸಾವನ್ನಪ್ಪಿದರು. ಅರ್ಧ ಗಂಟೆಯ ನಂತರ, ಕಾರಿನಲ್ಲಿ ಎರಡನೇ ಸ್ಫೋಟ ಸಂಭವಿಸಿತು ಮತ್ತು ನಂತರ ಒಂದರ ನಂತರ ಒಂದರಂತೆ ಸರಣಿ ಸ್ಫೋಟಗಳು ಪ್ರಾರಂಭವಾದವು. ಎರಡು ಗಂಟೆಗಳಲ್ಲಿ ಮುಂಬೈನ 12 ಸ್ಥಳಗಳಲ್ಲಿ 13 ಸ್ಫೋಟಗಳು ಸಂಭವಿಸಿವೆ. ಈ ಸರಣಿ ಸ್ಫೋಟಗಳಲ್ಲಿ 257 ಜನರು ಸಾವನ್ನಪ್ಪಿದ್ದರು ಮತ್ತು 713 ಜನರು ಗಾಯಗೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:10 am, Mon, 3 June 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ