AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಕ್ಕಿಜ್ವರದ ಬಗ್ಗೆ ಭಯಬೇಡ: ಕೇಂದ್ರ ಸಚಿವ ಗಿರಿರಾಜ್ ಸಿಂಗ್

ಕೆಲವು ಪ್ರದೇಶಗಳಲ್ಲಿ ವಲಸೆ ಹಕ್ಕಿಗಳು ಮತ್ತು ಕಾಡಿನ ಹಕ್ಕಿಗಳಿಂದಾಗಿಯೇ ಹಕ್ಕಿ ಜ್ವರ ಬಂದಿದೆ ಎಂದು ವರದಿಯಾಗಿದೆ. ಸೇವಿಸುವ ಮುನ್ನ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ. ಭಯಪಡುವಂಥದ್ದೇನಿಲ್ಲ ಎಂದು ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಹಕ್ಕಿಜ್ವರದ ಬಗ್ಗೆ ಭಯಬೇಡ: ಕೇಂದ್ರ ಸಚಿವ ಗಿರಿರಾಜ್ ಸಿಂಗ್
ಗಿರಿರಾಜ್ ಸಿಂಗ್
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 06, 2021 | 5:59 PM

Share

ನವದೆಹಲಿ: ಹಕ್ಕಿಜ್ವರದ ಬಗ್ಗೆ ಭಯ ಬೇಡ ಎಂದು ಕೇಂದ್ರ ಪಶುಸಂಗೋಪನಾ ಇಲಾಖೆಯ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಹಕ್ಕಿ ಜ್ವರ ಅಥವಾ ಏವಿಯನ್ ಇನ್​ಫ್ಲುಯೆಂಜಾ ಬಗ್ಗೆ ಭೀತಿ ಹರಡಿದೆ. ಈ ಬಗ್ಗೆ ಭಯಬೇಡ. ಮೊಟ್ಟೆ ಮತ್ತು ಮಾಂಸಗಳನ್ನು ಚೆನ್ನಾಗಿ ಬೇಯಿಸಿ ತಿನ್ನಿ ಎಂದಿದ್ದಾರೆ.

ಕೆಲವು ಪ್ರದೇಶಗಳಲ್ಲಿ ವಲಸೆ ಹಕ್ಕಿಗಳು ಮತ್ತು ಕಾಡಿನ ಹಕ್ಕಿಗಳಿಂದಾಗಿಯೇ ಹಕ್ಕಿ ಜ್ವರ ಬಂದಿದೆ ಎಂದು ವರದಿಯಾಗಿದೆ. ಸೇವಿಸುವ ಮುನ್ನ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ. ಭಯಪಡುವಂತದ್ದೇನಿಲ್ಲ. ಎಲ್ಲ ರೀತಿಯ ಸಹಾಯಗಳನ್ನು ಮಾಡುತ್ತೇವೆ ಮತ್ತು ರಾಜ್ಯಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.

ಹಿಮಾಚಲ ಪ್ರದೇಶ, ಮದ್ಯಪ್ರದೇಶ, ಕೇರಳ ಮತ್ತು ರಾಜಸ್ಥಾನದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು 12 ಮೂಲಕೇಂದ್ರಗಳನ್ನು ಗುರುತಿಸಲಾಗಿದೆ. ಕಳೆದ 10 ದಿನಗಳಲ್ಲಿ ಭಾರತದಾದ್ಯಂತ ಲಕ್ಷಗಟ್ಟಲೆ ಹಕ್ಕಿಗಳು ಸತ್ತಿವೆ. ಇವುಗಳಲ್ಲಿ ಬಹುತೇಕ ಹಕ್ಕಿಗಳು ವಲಸೆ ಹಕ್ಕಿಗಳಾಗಿವೆ ಎಂದಿದ್ದಾರೆ ಸಿಂಗ್.

ಹಕ್ಕಿ ಜ್ವರ ಇರುವ ರಾಜ್ಯಗಳಲ್ಲಿ ಹಕ್ಕಿಗಳನ್ನು ಕೊಲ್ಲುವ, ಹಕ್ಕಿಗಳು ಮತ್ತು ಅವುಗಳ ಮಾರಾಟವನ್ನು ನಿಯಂತ್ರಿಸುವ ಕಾರ್ಯ ಆರಂಭವಾಗಿದೆ. ಗಡಿಭಾಗದ ಜಿಲ್ಲೆಗಳಲ್ಲಿ ಹತ್ತಿರದ ರಾಜ್ಯದಿಂದ ಸೋಂಕು ತಗಲದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಸೋಂಕು ಹರಡುವಿಕೆ ನಿಯಂತ್ರಿಸು ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ದೆಹಲಿಯಲ್ಲಿ ಕಂಟ್ರೋಲ್ ರೂಂ ಆರಂಭಿಸಿದೆ.

ಹೆಚ್ಚಾಯ್ತು ಹಕ್ಕಿಜ್ವರ ಆತಂಕ.. ಮೈಸೂರು-ಕೇರಳ ಗಡಿಯಲ್ಲಿ DC ಸಿಂಧೂರಿಯಿಂದ ಕಟ್ಟೆಚ್ಚರದ ಆದೇಶ

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್