AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜಿ ವಿಚಾರಣೆ ವೇಳೆ ಏನನ್ನೋ ಕುಡಿದ ಪೊಲೀಸ್ ಅಧಿಕಾರಿ; ವಿಚಿತ್ರ ಶಿಕ್ಷೆ ನೀಡಿದ ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ !

ಸ್ವಲ್ಪ ದಿನಗಳ ಹಿಂದೆ ಹೀಗೆ ಅರ್ಜಿಯೊಂದರ ವಿಚಾರಣೆ ವೇಳೆ ವಕೀಲರೊಬ್ಬರು ಸಮೋಸಾ ತಿಂದಿದ್ದರು. ಆಗ ಅವರಿಗೆ ನಾನು, ನೀವು ಸಮೋಸಾ ತಿನ್ನುವುದಕ್ಕೆ ನಮ್ಮಿಂದ ಏನೂ ಅಡ್ಡಿಯಿಲ್ಲ. ಆದರೆ ನಮ್ಮೆದುರಿಗೆ ನೀವು ತಿನ್ನುವಂತಿಲ್ಲ ಎಂದು ಹೇಳಿದ್ದಾಗಿ ಮುಖ್ಯ ನ್ಯಾಯಮೂರ್ತಿ ತಿಳಿಸಿದ್ದಾರೆ.

ಅರ್ಜಿ ವಿಚಾರಣೆ ವೇಳೆ ಏನನ್ನೋ ಕುಡಿದ ಪೊಲೀಸ್ ಅಧಿಕಾರಿ; ವಿಚಿತ್ರ ಶಿಕ್ಷೆ ನೀಡಿದ ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ !
ಗುಜರಾತ್​ ಹೈಕೋರ್ಟ್​
TV9 Web
| Edited By: |

Updated on:Feb 16, 2022 | 12:09 PM

Share

ಗುಜರಾತ್​ ಹೈಕೋರ್ಟ್ (Gujarat High Court)​​  ಯಾವುದೋ ಒಂದು ಅರ್ಜಿಯನ್ನು ವರ್ಚ್ಯುವಲ್​ ಆಗಿ ವಿಚಾರಣೆ ನಡೆಸುತ್ತಿತ್ತು. ವಾದ-ಪ್ರತಿವಾದಗಳನ್ನು ನ್ಯಾಯಾಧೀಶರು, ಹಾಜರಿದ್ದ ವಕೀಲರು,  ಪೊಲೀಸರೆಲ್ಲ ಆಲಿಸುತ್ತಿದ್ದರು. ಆದರೆ ಇದೇ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಬಾಯಾರಿಕೆ ಆಯಿತೆಂದು ಒಂದೆರಡು ಗುಟುಕು ತಂಪು ಪಾನೀಯ (Cold Drink) ಸೇವಿಸಿದರು. ಆದರೆ ಹಾಗೇ ತಂಪು ಪಾನೀಯ ಕುಡಿದಿದ್ದೇ ಅವರಿಗೆ ಪೀಕಲಾಟ ತಂದಿಟ್ಟಿತು. ಪೊಲೀಸ್ ಅಧಿಕಾರಿ ತಂಪು ಪಾನೀಯ ಸೇವನೆ ಮಾಡಿದ್ದನ್ನು ನೋಡಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್​ ಆ ಅಧಿಕಾರಿಗೆ ಒಂದು ವಿಚಿತ್ರ ಸೂಚನೆ ನೀಡಿದ್ದಾರೆ. ವರ್ಚ್ಯುವಲ್​ ಅರ್ಜಿ ವಿಚಾರಣೆ ವೇಳೆ ಕೋಲ್ಡ್​ ಡ್ರಿಂಕ್ಸ್​ ಸೇವಿಸಿದ ನೀವು, ನಮ್ಮ ಕೋರ್ಟ್​ನ ವಕೀಲರಿಗೆ (ಬಾರ್​ ಅಸೋಸಿಯೇಶನ್​ ಸಿಬ್ಬಂದಿ) 100 ಕ್ಯಾನ್​​ಗಳಷ್ಟು ತಂಪು ಪಾನೀಯ ವಿತರಿಸಿ ಎಂದು ಹೇಳಿದ್ದಾರೆ.

ವಿಚಾರಣೆ ವರ್ಚ್ಯುವಲ್ ಆಗಿ ನಡೆಯುತ್ತಿರಲಿ, ಭೌತಿಕವಾಗಿಯೇ ಆಗುತ್ತಿರಲಿ ಅಲ್ಲಿ ಶಿಸ್ತಿರಬೇಕು. ನೀವು ವಿಚಾರಣೆ ಮಧ್ಯೆ ತಂಪು ಪಾನೀಯದಂತೆ ಕಾಣುವ ಏನನ್ನೋ ಸೇವಿಸಿದ್ದೀರಿ. ಇದು ಸರಿಯಾದ ವರ್ತನೆಯಲ್ಲ, ಹೀಗಾಗಿ ಒಂದೋ ಶಿಸ್ತು ಕ್ರಮ ಎದುರಿಸಬೇಕು ಇಲ್ಲವೇ, ನಮ್ಮ ಹೈಕೋರ್ಟ್​ನ 100 ವಕೀಲರಿಗೆ ಕೋಲ್ಡ್​ ಡ್ರಿಂಕ್​ ವಿತರಿಸಬೇಕು ಎಂದು ಪೊಲೀಸ್ ಅಧಿಕಾರಿಗೆ ಹೇಳಿದ ನ್ಯಾಯಮೂರ್ತಿ ಅರವಿಂದ್ ಕುಮಾರ್, ಕೆಲವೇ ದಿನಗಳ ಹಿಂದೆ ವರ್ಚ್ಯುವಲ್​ ವಿಚಾರಣೆವೇಳೆ ವಕೀಲರೊಬ್ಬರು ಸಮೋಸಾ ತಿನ್ನುವ ಮೂಲಕ ಅಶಿಸ್ತು ಪ್ರದರ್ಶನ ಮಾಡಿದ್ದರು. ಅವರಿಗೂ ತರಾಟೆಗೆ ತೆಗೆದುಕೊಂಡಿದ್ದೆ ಎಂದು ಹೇಳಿದರು.

ಸ್ವಲ್ಪ ದಿನಗಳ ಹಿಂದೆ ಹೀಗೆ ಅರ್ಜಿಯೊಂದರ ವಿಚಾರಣೆ ವೇಳೆ ವಕೀಲರೊಬ್ಬರು ಸಮೋಸಾ ತಿಂದಿದ್ದರು. ಆಗ ಅವರಿಗೆ ನಾನು, ನೀವು ಸಮೋಸಾ ತಿನ್ನುವುದಕ್ಕೆ ನಮ್ಮಿಂದ ಏನೂ ಅಡ್ಡಿಯಿಲ್ಲ. ಆದರೆ ನಮ್ಮೆದುರಿಗೆ ನೀವು ತಿನ್ನುವಂತಿಲ್ಲ. ಒಂದೋ ಎಲ್ಲರಿಗೂ ಕೊಟ್ಟು ತಿನ್ನಬೇಕು ಇಲ್ಲವೇ ನೀವೂ ತಿನ್ನಬಾರದು ಎಂದು ಹೇಳಿದ್ದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ. ಅಷ್ಟೇ ಅಲ್ಲ, ಈಗ ತಂಪು ಪಾನೀಯ ಕುಡಿದ ಪೊಲೀಸ್ ಅಧಿಕಾರಿ ಎ.ಎಂ.ರಾಥೋಡ್​​ಗೂ ಅದನ್ನೇ ಹೇಳಿದ್ದಾರೆ. 100 ಕ್ಯಾನ್​​ ತಂಪು ಪಾನೀಯ ವಿತರಿಸಲು ಸೂಚಿಸಿದ್ದಾರೆ.

ಟ್ರಾಫಿಕ್​ ಜಂಕ್ಷನ್​​ನಲ್ಲಿ ಪೊಲೀಸ್​ ಅಧಿಕಾರಿ ಎ.ಎಂ.ರಾಥೋಡ್​ ಮತ್ತು ಇತರ ಪೊಲೀಸ್ ಅಧಿಕಾರಿಗಳು ಇಬ್ಬರು ಮಹಿಳೆಯರಿಗೆ ಥಳಿಸಿದ್ದಾರೆ ಎಂಬ ಆರೋಪ ಅರ್ಜಿಗೆ ಸಂಬಂಧಪಟ್ಟಂತೆ ಇವರು ಕೋರ್ಟ್​​ನ ವರ್ಚ್ಯುವಲ್​ ವಿಚಾರಣೆಗೆ ಹಾಜರಾಗಿದ್ದರು. ಇನ್ನು ಈ ಪ್ರಕರಣವನ್ನು ಡಿಸಿಪಿ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಿ, ಇನ್ನು 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರೂ ಸೂಚಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನಿವಾಸಕ್ಕೆ ನುಗ್ಗಲು ಯತ್ನಿಸಿದ ವ್ಯಕ್ತಿ ಪೊಲೀಸರ ವಶಕ್ಕೆ

Published On - 11:24 am, Wed, 16 February 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?