AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೋ ಹೇಳಿದ ಎಂದು ಮಾರ್ಕೆಟ್​​ನಲ್ಲಿ ಅಪ್ರಾಪ್ತನಿಗೆ ಒದ್ದು, ಕಪಾಳಕ್ಕೆ ಹೊಡೆದ ಪೊಲೀಸ್​; ಮರುಕ್ಷಣವೇ ಅಮಾನತು

ಅಪ್ರಾಪ್ತನಿಗೆ ಹೊಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಪೊಲೀಸ್​ ಅಧಿಕಾರಿ ವಿರುದ್ಧ ದೂರು ದಾಖಲಾಗಿತ್ತು. ಇದು ಅನುಚಿತ ವರ್ತನೆ ಎಂದು ಪರಿಗಣಿಸಿದ ಪೊಲೀಸ್​ ಉಪ ಆಯುಕ್ತರು ಶಕ್ತಿಸಿಂಹ್​ ಪರ್ವರನ್ನು ಅಮಾನತು ಮಾಡಿದ್ದಾರೆ.

ಏನೋ ಹೇಳಿದ ಎಂದು ಮಾರ್ಕೆಟ್​​ನಲ್ಲಿ ಅಪ್ರಾಪ್ತನಿಗೆ ಒದ್ದು, ಕಪಾಳಕ್ಕೆ ಹೊಡೆದ ಪೊಲೀಸ್​; ಮರುಕ್ಷಣವೇ ಅಮಾನತು
ಮಾರ್ಕೆಟ್​​ನಲ್ಲಿ ಅಪ್ರಾಪ್ತನಿಗೆ ಹೊಡೆದ ಪೊಲೀಸ್​
TV9 Web
| Edited By: |

Updated on: Apr 04, 2022 | 9:48 AM

Share

ಗುಜರಾತ್​​ನ ವಡೋದರಾ (Gujarat) ಮಾರುಕಟ್ಟೆಯಲ್ಲಿ ಪೊಲೀಸ್​ ಸಿಬ್ಬಂದಿಯೊಬ್ಬ 13 ವರ್ಷದ ಬಾಲಕನಿಗೆ ಬೆನ್ನಿಗೆ ಒದ್ದು, ಕಪಾಳಕ್ಕೆ ಹೊಡೆದಿದ್ದಾರೆ. ಎರಡು ಮೂರು ಸಲ ಬಾಲಕನ ಮೇಲೆ ಕೈ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಪೊಲೀಸ್​ ಅಧಿಕಾರಿ ಅಮಾನತುಗೊಂಡಿದ್ದಾರೆ.  ಇದು ವಡೋದರಾದ ನಂದೇಸಾರಿ ಮಾರುಕಟ್ಟಯಲ್ಲಿ ಶನಿವಾರ ರಾತ್ರಿ ಸುಮಾರು 8.45ರ ಹೊತ್ತಿಗೆ ನಡೆದ ಘಟನೆ.  ಪೊಲೀಸ್​ ಸಿಬ್ಬಂದಿಯನ್ನು ಶಕ್ತಿಸಿಂಹ್​ ಪರ್ವಾ ಎಂದು ಗುರುತಿಸಲಾಗಿದ್ದು, ಇವರು ಛನ್ನಿ ಪೊಲೀಸ್​ ಠಾಣೆಯ ಕಂಟ್ರೋಲ್​ ರೂಂನಲ್ಲಿ ಕರ್ತವ್ಯದಲ್ಲಿದ್ದಾರೆ.

ಪೊಲೀಸ್ ಅಧಿಕಾರಿ ಶಕ್ತಿಸಿಂಹ್​ ಪರ್ವ ತಮ್ಮ ವಾಹನದಲ್ಲಿ  ಇನ್ನೊಂದು ಪೊಲೀಸ್ ಸ್ಟೇಶನ್​ಗೆ ಹೋಗಿ ವಾಪಸ್​ ಬರುತ್ತಿದ್ದರು. ಮಾರುಕಟ್ಟೆ ಬಳಿ ಬರುತ್ತಿದ್ದಾಗ ಈ ಹುಡುಗ ಏನೋ ಹೇಳುತ್ತಿದ್ದ. ತನ್ನನ್ನು ನೋಡಿಯೇ ಆತ ಅದೇನೋ ತಮಾಷೆ ಮಾಡುತ್ತಿದ್ದಾನೆ ಎಂದು ಭಾವಿಸಿದ ಶಕ್ತಿಸಿಂಹ್​ ಪರ್ವ, ವಾಹನದಿಂದ ಇಳಿದುಬಂದರು. ಪೊಲೀಸ್​​​ ಅಧಿಕಾರಿಯನ್ನು ನೋಡಿ ಬಾಲಕ ಓಡಿ ಹೋಗಿ ಅದ್ಯಾವುದೋ ಅಂಗಡಿಯಲ್ಲಿ ಸೇರಿಕೊಂಡಿದ್ದ. ಆದರೆ ಬೆನ್ನಟ್ಟಿ ಹೋದ ಪರ್ವ ಅವನನ್ನು ಅಲ್ಲಿಂದ ಹೊರಗೆ ಒದೆಯುತ್ತಲೇ ಕರೆದುಕೊಂಡು ಬಂದಿದ್ದಾರೆ. ಅಷ್ಟೇ ಅಲ್ಲ, ಕಪಾಳಕ್ಕೆ ಎರಡು ಏಟು ಹೊಡೆದಿದ್ದಾರೆ. ಬಳಿಯೇ ಅಲ್ಲಿದ್ದ ಕೆಲವರು ಬಂದು ಪೊಲೀಸ್ ಬಳಿ ವಿಚಾರಿಸಿದ್ದಾರೆ. ಇವೆಲ್ಲವೂ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಅಪ್ರಾಪ್ತನಿಗೆ ಹೊಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಪೊಲೀಸ್​ ಅಧಿಕಾರಿ ವಿರುದ್ಧ ದೂರು ದಾಖಲಾಗಿತ್ತು. ಇದು ಅನುಚಿತ ವರ್ತನೆ ಎಂದು ಪರಿಗಣಿಸಿದ ಪೊಲೀಸ್​ ಉಪ ಆಯುಕ್ತರು ಶಕ್ತಿಸಿಂಹ್​ ಪರ್ವರನ್ನು ಅಮಾನತು ಮಾಡಿದ್ದಾರೆ. ಇಂಥ ಅನುಚಿತ ವರ್ತನೆಯನ್ನು ಯಾರೇ ತೋರಿಸಿದರೂ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಕ್ತಿಸಿಂಹ ಪರ್ವನನ್ನು ಅಮಾನತು ಮಾಡಲಾಗಿದ್ದು, ವಿಚಾರಣೆ ನಡೆಸಲಾಗುತ್ತದೆ. ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: IPL 2022: ಪಾಯಿಂಟ್ ಟೇಬಲ್​ನಲ್ಲಿ ಯಾರು ಟಾಪರ್?: ಆರೆಂಜ್-ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಯಾರಿದ್ದಾರೆ?

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ