AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೋ ಹೇಳಿದ ಎಂದು ಮಾರ್ಕೆಟ್​​ನಲ್ಲಿ ಅಪ್ರಾಪ್ತನಿಗೆ ಒದ್ದು, ಕಪಾಳಕ್ಕೆ ಹೊಡೆದ ಪೊಲೀಸ್​; ಮರುಕ್ಷಣವೇ ಅಮಾನತು

ಅಪ್ರಾಪ್ತನಿಗೆ ಹೊಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಪೊಲೀಸ್​ ಅಧಿಕಾರಿ ವಿರುದ್ಧ ದೂರು ದಾಖಲಾಗಿತ್ತು. ಇದು ಅನುಚಿತ ವರ್ತನೆ ಎಂದು ಪರಿಗಣಿಸಿದ ಪೊಲೀಸ್​ ಉಪ ಆಯುಕ್ತರು ಶಕ್ತಿಸಿಂಹ್​ ಪರ್ವರನ್ನು ಅಮಾನತು ಮಾಡಿದ್ದಾರೆ.

ಏನೋ ಹೇಳಿದ ಎಂದು ಮಾರ್ಕೆಟ್​​ನಲ್ಲಿ ಅಪ್ರಾಪ್ತನಿಗೆ ಒದ್ದು, ಕಪಾಳಕ್ಕೆ ಹೊಡೆದ ಪೊಲೀಸ್​; ಮರುಕ್ಷಣವೇ ಅಮಾನತು
ಮಾರ್ಕೆಟ್​​ನಲ್ಲಿ ಅಪ್ರಾಪ್ತನಿಗೆ ಹೊಡೆದ ಪೊಲೀಸ್​
TV9 Web
| Edited By: |

Updated on: Apr 04, 2022 | 9:48 AM

Share

ಗುಜರಾತ್​​ನ ವಡೋದರಾ (Gujarat) ಮಾರುಕಟ್ಟೆಯಲ್ಲಿ ಪೊಲೀಸ್​ ಸಿಬ್ಬಂದಿಯೊಬ್ಬ 13 ವರ್ಷದ ಬಾಲಕನಿಗೆ ಬೆನ್ನಿಗೆ ಒದ್ದು, ಕಪಾಳಕ್ಕೆ ಹೊಡೆದಿದ್ದಾರೆ. ಎರಡು ಮೂರು ಸಲ ಬಾಲಕನ ಮೇಲೆ ಕೈ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಪೊಲೀಸ್​ ಅಧಿಕಾರಿ ಅಮಾನತುಗೊಂಡಿದ್ದಾರೆ.  ಇದು ವಡೋದರಾದ ನಂದೇಸಾರಿ ಮಾರುಕಟ್ಟಯಲ್ಲಿ ಶನಿವಾರ ರಾತ್ರಿ ಸುಮಾರು 8.45ರ ಹೊತ್ತಿಗೆ ನಡೆದ ಘಟನೆ.  ಪೊಲೀಸ್​ ಸಿಬ್ಬಂದಿಯನ್ನು ಶಕ್ತಿಸಿಂಹ್​ ಪರ್ವಾ ಎಂದು ಗುರುತಿಸಲಾಗಿದ್ದು, ಇವರು ಛನ್ನಿ ಪೊಲೀಸ್​ ಠಾಣೆಯ ಕಂಟ್ರೋಲ್​ ರೂಂನಲ್ಲಿ ಕರ್ತವ್ಯದಲ್ಲಿದ್ದಾರೆ.

ಪೊಲೀಸ್ ಅಧಿಕಾರಿ ಶಕ್ತಿಸಿಂಹ್​ ಪರ್ವ ತಮ್ಮ ವಾಹನದಲ್ಲಿ  ಇನ್ನೊಂದು ಪೊಲೀಸ್ ಸ್ಟೇಶನ್​ಗೆ ಹೋಗಿ ವಾಪಸ್​ ಬರುತ್ತಿದ್ದರು. ಮಾರುಕಟ್ಟೆ ಬಳಿ ಬರುತ್ತಿದ್ದಾಗ ಈ ಹುಡುಗ ಏನೋ ಹೇಳುತ್ತಿದ್ದ. ತನ್ನನ್ನು ನೋಡಿಯೇ ಆತ ಅದೇನೋ ತಮಾಷೆ ಮಾಡುತ್ತಿದ್ದಾನೆ ಎಂದು ಭಾವಿಸಿದ ಶಕ್ತಿಸಿಂಹ್​ ಪರ್ವ, ವಾಹನದಿಂದ ಇಳಿದುಬಂದರು. ಪೊಲೀಸ್​​​ ಅಧಿಕಾರಿಯನ್ನು ನೋಡಿ ಬಾಲಕ ಓಡಿ ಹೋಗಿ ಅದ್ಯಾವುದೋ ಅಂಗಡಿಯಲ್ಲಿ ಸೇರಿಕೊಂಡಿದ್ದ. ಆದರೆ ಬೆನ್ನಟ್ಟಿ ಹೋದ ಪರ್ವ ಅವನನ್ನು ಅಲ್ಲಿಂದ ಹೊರಗೆ ಒದೆಯುತ್ತಲೇ ಕರೆದುಕೊಂಡು ಬಂದಿದ್ದಾರೆ. ಅಷ್ಟೇ ಅಲ್ಲ, ಕಪಾಳಕ್ಕೆ ಎರಡು ಏಟು ಹೊಡೆದಿದ್ದಾರೆ. ಬಳಿಯೇ ಅಲ್ಲಿದ್ದ ಕೆಲವರು ಬಂದು ಪೊಲೀಸ್ ಬಳಿ ವಿಚಾರಿಸಿದ್ದಾರೆ. ಇವೆಲ್ಲವೂ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಅಪ್ರಾಪ್ತನಿಗೆ ಹೊಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಪೊಲೀಸ್​ ಅಧಿಕಾರಿ ವಿರುದ್ಧ ದೂರು ದಾಖಲಾಗಿತ್ತು. ಇದು ಅನುಚಿತ ವರ್ತನೆ ಎಂದು ಪರಿಗಣಿಸಿದ ಪೊಲೀಸ್​ ಉಪ ಆಯುಕ್ತರು ಶಕ್ತಿಸಿಂಹ್​ ಪರ್ವರನ್ನು ಅಮಾನತು ಮಾಡಿದ್ದಾರೆ. ಇಂಥ ಅನುಚಿತ ವರ್ತನೆಯನ್ನು ಯಾರೇ ತೋರಿಸಿದರೂ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಕ್ತಿಸಿಂಹ ಪರ್ವನನ್ನು ಅಮಾನತು ಮಾಡಲಾಗಿದ್ದು, ವಿಚಾರಣೆ ನಡೆಸಲಾಗುತ್ತದೆ. ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: IPL 2022: ಪಾಯಿಂಟ್ ಟೇಬಲ್​ನಲ್ಲಿ ಯಾರು ಟಾಪರ್?: ಆರೆಂಜ್-ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಯಾರಿದ್ದಾರೆ?

Follow Us
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ