AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಡಿಗೆ ಪೆಟ್ರೋಲ್​ ಅಥವಾ ಡೀಸಲ್​ ತುಂಬಿಸಿಕೊಳ್ಳೋಕೆ ಈ ಬಂಕ್​ಗಳಿಗೆ ಹೋಗಿದ್ರಾ?

ಹೈದರಾಬಾದ್​: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪೆಟ್ರೋಲ್ ಮತ್ತು ಡೀಸೆಲ್‌ ಇಂಧನವನ್ನು ತುಂಬಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ತನಿಖೆ ಕೈಗೆತ್ತಿಕೊಂಡ ಬಳಿಕ ರೋಚಕ ಮಾಹಿತಿಯೊಂದು ಹೊರಬಿದ್ದಿದೆ. ಎರಡು ರಾಜ್ಯದ ಸುಮಾರು 33 ಪೆಟ್ರೋಲ್​ ಬಂಕ್​ಗಳಲ್ಲಿ ವಾಹನಗಳಿಗೆ ಕಡಿಮೆ ಇಂಧನ ತುಂಬಿಸಲು ಮೆಷಿನ್​ನಲ್ಲಿ ಎಲೆಕ್ಟ್ರಾನಿಕ್ ಚಿಪ್ ಅಳವಡಿಸಿ ಗ್ರಾಹಕರನ್ನು ವಂಚಿಸುತ್ತಿದ್ದರು ಎಂದು ಪೊಲೀಸರಿಗೆ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇದೀಗ ಅಂತರರಾಜ್ಯ ಗ್ಯಾಂಗ್ ಒಂದನ್ನು ಬಂಧಿಸಿದ್ದಾರೆ. ಮುಖ್ಯ ಆರೋಪಿಗಳಾದ ಬಾಷಾ, […]

ಗಾಡಿಗೆ ಪೆಟ್ರೋಲ್​ ಅಥವಾ ಡೀಸಲ್​ ತುಂಬಿಸಿಕೊಳ್ಳೋಕೆ ಈ ಬಂಕ್​ಗಳಿಗೆ ಹೋಗಿದ್ರಾ?
ಸಾಧು ಶ್ರೀನಾಥ್​
|

Updated on:Sep 06, 2020 | 7:19 PM

Share

ಹೈದರಾಬಾದ್​: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪೆಟ್ರೋಲ್ ಮತ್ತು ಡೀಸೆಲ್‌ ಇಂಧನವನ್ನು ತುಂಬಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ತನಿಖೆ ಕೈಗೆತ್ತಿಕೊಂಡ ಬಳಿಕ ರೋಚಕ ಮಾಹಿತಿಯೊಂದು ಹೊರಬಿದ್ದಿದೆ.

ಎರಡು ರಾಜ್ಯದ ಸುಮಾರು 33 ಪೆಟ್ರೋಲ್​ ಬಂಕ್​ಗಳಲ್ಲಿ ವಾಹನಗಳಿಗೆ ಕಡಿಮೆ ಇಂಧನ ತುಂಬಿಸಲು ಮೆಷಿನ್​ನಲ್ಲಿ ಎಲೆಕ್ಟ್ರಾನಿಕ್ ಚಿಪ್ ಅಳವಡಿಸಿ ಗ್ರಾಹಕರನ್ನು ವಂಚಿಸುತ್ತಿದ್ದರು ಎಂದು ಪೊಲೀಸರಿಗೆ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇದೀಗ ಅಂತರರಾಜ್ಯ ಗ್ಯಾಂಗ್ ಒಂದನ್ನು ಬಂಧಿಸಿದ್ದಾರೆ. ಮುಖ್ಯ ಆರೋಪಿಗಳಾದ ಬಾಷಾ, ಬಾಬ್ಜಿ ಬಾಬಾ, ಮದಸುಗುರಿ ಶಂಕರ್ ಮತ್ತು ಐ ಮಲ್ಲೇಶ್ವರ ರಾವ್ ಎಲ್ಲರೂ ಆಂಧ್ರಪ್ರದೇಶದ ಎಲೂರು ಪಟ್ಟಣದವರಾಗಿದ್ದಾರೆ.

ಬಂಧಿತರು ಪ್ರತಿ 1,000 ಲೀಟರ್​ ಇಂಧನಕ್ಕೆ ಮೆಷಿನ್​ನಿಂದ ಕೇವಲ 970 ಲೀಟರ್ ಇಂಧನ ಮಾತ್ರ ಹೊರಬರುವ ಹಾಗೆ ಎಲೆಕ್ಟ್ರಾನಿಕ್ ಚಿಪ್ ಅಳವಡಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ ಇಂಧನ ಕೇಂದ್ರಗಳಲ್ಲಿ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಹಾಗೂ ಎಸ್ಸಾರ್ ಪೆಟ್ರೋಲ್​ ಬಂಕ್​ಗಳು ಸಹ ಇದೆ.

ಸೈಬರಾಬಾದ್ ಪೊಲೀಸ್ ಆಯುಕ್ತ ವಿ.ಸಿ. ಸಜ್ಜನಾರ್ ಗ್ಯಾಂಗ್ ಬಂಧನದ ಕಳೆದ ಶನಿವಾರ ಸುದ್ದಿಗೋಷ್ಠಿ ನಡೆಸಿದರು. ಮ್ಯಾನಿಪ್ಯುಲೇಟೆಡ್ ಸಾಫ್ಟ್‌ವೇರ್‌ನೊಂದಿಗೆ ಪ್ರೋಗ್ರಾಮ್ ಮಾಡಲಾದ ಇಂಟಿಗ್ರೇಟೆಡ್ ಚಿಪ್ಸ್ (ಐಸಿ) ಗಳನ್ನು ಇಂಧನ ಕೇಂದ್ರದ ಮಾಲೀಕರ ಸಹಕಾರದೊಂದಿಗೆ ಈ ಗ್ಯಾಂಗ್​ ಅಳವಡಿಸುತ್ತಿತ್ತು ಎಂಬ ಮಾಹಿತಿ ಸಹ ನೀಡಿದ್ದಾರೆ.

ಇದಲ್ಲದೆ, ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಸಾಥ್ ನೀಡಿದ 9 ಪೆಟ್ರೋಲ್​ ಬಂಕ್​ ಮಾಲೀಕರನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಇತರ ಐದು ಮಾಲೀಕರು ಸದ್ಯ ಪರಾರಿಯಾಗಿದ್ದಾರಂತೆ. ಜೊತೆಗೆ, ಮುಂಬೈನ ಇಬ್ಬರು ಎಲೆಕ್ಟ್ರಾನಿಕ್ ಚಿಪ್ ಪೂರೈಕೆದಾರರಾದ ಜೋಸೆಫ್ ಮತ್ತು ಶಿಬು ಥಾಮಸ್ ಕೂಡ ಪರಾರಿಯಾಗಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.

Published On - 7:16 pm, Sun, 6 September 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?