AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಡಿಗೆ ಪೆಟ್ರೋಲ್​ ಅಥವಾ ಡೀಸಲ್​ ತುಂಬಿಸಿಕೊಳ್ಳೋಕೆ ಈ ಬಂಕ್​ಗಳಿಗೆ ಹೋಗಿದ್ರಾ?

ಹೈದರಾಬಾದ್​: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪೆಟ್ರೋಲ್ ಮತ್ತು ಡೀಸೆಲ್‌ ಇಂಧನವನ್ನು ತುಂಬಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ತನಿಖೆ ಕೈಗೆತ್ತಿಕೊಂಡ ಬಳಿಕ ರೋಚಕ ಮಾಹಿತಿಯೊಂದು ಹೊರಬಿದ್ದಿದೆ. ಎರಡು ರಾಜ್ಯದ ಸುಮಾರು 33 ಪೆಟ್ರೋಲ್​ ಬಂಕ್​ಗಳಲ್ಲಿ ವಾಹನಗಳಿಗೆ ಕಡಿಮೆ ಇಂಧನ ತುಂಬಿಸಲು ಮೆಷಿನ್​ನಲ್ಲಿ ಎಲೆಕ್ಟ್ರಾನಿಕ್ ಚಿಪ್ ಅಳವಡಿಸಿ ಗ್ರಾಹಕರನ್ನು ವಂಚಿಸುತ್ತಿದ್ದರು ಎಂದು ಪೊಲೀಸರಿಗೆ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇದೀಗ ಅಂತರರಾಜ್ಯ ಗ್ಯಾಂಗ್ ಒಂದನ್ನು ಬಂಧಿಸಿದ್ದಾರೆ. ಮುಖ್ಯ ಆರೋಪಿಗಳಾದ ಬಾಷಾ, […]

ಗಾಡಿಗೆ ಪೆಟ್ರೋಲ್​ ಅಥವಾ ಡೀಸಲ್​ ತುಂಬಿಸಿಕೊಳ್ಳೋಕೆ ಈ ಬಂಕ್​ಗಳಿಗೆ ಹೋಗಿದ್ರಾ?
ಸಾಧು ಶ್ರೀನಾಥ್​
|

Updated on:Sep 06, 2020 | 7:19 PM

Share

ಹೈದರಾಬಾದ್​: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪೆಟ್ರೋಲ್ ಮತ್ತು ಡೀಸೆಲ್‌ ಇಂಧನವನ್ನು ತುಂಬಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ತನಿಖೆ ಕೈಗೆತ್ತಿಕೊಂಡ ಬಳಿಕ ರೋಚಕ ಮಾಹಿತಿಯೊಂದು ಹೊರಬಿದ್ದಿದೆ.

ಎರಡು ರಾಜ್ಯದ ಸುಮಾರು 33 ಪೆಟ್ರೋಲ್​ ಬಂಕ್​ಗಳಲ್ಲಿ ವಾಹನಗಳಿಗೆ ಕಡಿಮೆ ಇಂಧನ ತುಂಬಿಸಲು ಮೆಷಿನ್​ನಲ್ಲಿ ಎಲೆಕ್ಟ್ರಾನಿಕ್ ಚಿಪ್ ಅಳವಡಿಸಿ ಗ್ರಾಹಕರನ್ನು ವಂಚಿಸುತ್ತಿದ್ದರು ಎಂದು ಪೊಲೀಸರಿಗೆ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇದೀಗ ಅಂತರರಾಜ್ಯ ಗ್ಯಾಂಗ್ ಒಂದನ್ನು ಬಂಧಿಸಿದ್ದಾರೆ. ಮುಖ್ಯ ಆರೋಪಿಗಳಾದ ಬಾಷಾ, ಬಾಬ್ಜಿ ಬಾಬಾ, ಮದಸುಗುರಿ ಶಂಕರ್ ಮತ್ತು ಐ ಮಲ್ಲೇಶ್ವರ ರಾವ್ ಎಲ್ಲರೂ ಆಂಧ್ರಪ್ರದೇಶದ ಎಲೂರು ಪಟ್ಟಣದವರಾಗಿದ್ದಾರೆ.

ಬಂಧಿತರು ಪ್ರತಿ 1,000 ಲೀಟರ್​ ಇಂಧನಕ್ಕೆ ಮೆಷಿನ್​ನಿಂದ ಕೇವಲ 970 ಲೀಟರ್ ಇಂಧನ ಮಾತ್ರ ಹೊರಬರುವ ಹಾಗೆ ಎಲೆಕ್ಟ್ರಾನಿಕ್ ಚಿಪ್ ಅಳವಡಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ ಇಂಧನ ಕೇಂದ್ರಗಳಲ್ಲಿ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಹಾಗೂ ಎಸ್ಸಾರ್ ಪೆಟ್ರೋಲ್​ ಬಂಕ್​ಗಳು ಸಹ ಇದೆ.

ಸೈಬರಾಬಾದ್ ಪೊಲೀಸ್ ಆಯುಕ್ತ ವಿ.ಸಿ. ಸಜ್ಜನಾರ್ ಗ್ಯಾಂಗ್ ಬಂಧನದ ಕಳೆದ ಶನಿವಾರ ಸುದ್ದಿಗೋಷ್ಠಿ ನಡೆಸಿದರು. ಮ್ಯಾನಿಪ್ಯುಲೇಟೆಡ್ ಸಾಫ್ಟ್‌ವೇರ್‌ನೊಂದಿಗೆ ಪ್ರೋಗ್ರಾಮ್ ಮಾಡಲಾದ ಇಂಟಿಗ್ರೇಟೆಡ್ ಚಿಪ್ಸ್ (ಐಸಿ) ಗಳನ್ನು ಇಂಧನ ಕೇಂದ್ರದ ಮಾಲೀಕರ ಸಹಕಾರದೊಂದಿಗೆ ಈ ಗ್ಯಾಂಗ್​ ಅಳವಡಿಸುತ್ತಿತ್ತು ಎಂಬ ಮಾಹಿತಿ ಸಹ ನೀಡಿದ್ದಾರೆ.

ಇದಲ್ಲದೆ, ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಸಾಥ್ ನೀಡಿದ 9 ಪೆಟ್ರೋಲ್​ ಬಂಕ್​ ಮಾಲೀಕರನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಇತರ ಐದು ಮಾಲೀಕರು ಸದ್ಯ ಪರಾರಿಯಾಗಿದ್ದಾರಂತೆ. ಜೊತೆಗೆ, ಮುಂಬೈನ ಇಬ್ಬರು ಎಲೆಕ್ಟ್ರಾನಿಕ್ ಚಿಪ್ ಪೂರೈಕೆದಾರರಾದ ಜೋಸೆಫ್ ಮತ್ತು ಶಿಬು ಥಾಮಸ್ ಕೂಡ ಪರಾರಿಯಾಗಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.

Published On - 7:16 pm, Sun, 6 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್