AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corbevax: ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ನೀಡಲು ಭಾರತ ಸರ್ಕಾರ ಅನುಮತಿ

18 ವರ್ಷ ಮೇಲ್ಪಟ್ಟವರು ಮತ್ತು ಎರಡು ಡೋಸ್ ಕೊವಿಡ್ ಲಸಿಕೆ ಪಡೆದವರು ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದು.

Corbevax: ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ನೀಡಲು ಭಾರತ ಸರ್ಕಾರ ಅನುಮತಿ
Corbevax ಲಸಿಕೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 10, 2022 | 12:17 PM

Share

ಬೆಂಗಳೂರು: ಕೊವ್ಯಾಕ್ಸಿನ್ (Covaxin) ಅಥವಾ ಕೊವಿಶೀಲ್ಡ್​ (Covishield) ಕೊವಿಡ್ ನಿರೋಧಕ ಲಸಿಕೆ (Corona Vaccine) ಪಡೆದವರಿಗೆ ಬೂಸ್ಟರ್​ ಲಸಿಕೆಯಾಗಿ ‘ಬಯಲಾಜಿಕಲ್ ಇ’ ಕಂಪನಿಯ ಕೊರ್ಬೆವ್ಯಾಕ್ಸ್ (Corbevax) ನೀಡಲು ಭಾರತ ಸರ್ಕಾರ ಅನುಮತಿ ನೀಡಿದೆ. 18 ವರ್ಷ ದಾಟಿರುವ, ಈಗಾಗಲೇ ಮೊದಲ ಎರಡು ಲಸಿಕೆ ಪಡೆದವರು ಬೂಸ್ಟರ್ ಲಸಿಕೆಯಾಗಿ ಕೊರ್ಬೆವ್ಯಾಕ್ಸ್ ತೆಗೆದುಕೊಳ್ಳಬಹುದು ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ.

18 ವರ್ಷ ಮೇಲ್ಪಟ್ಟವರು ಮತ್ತು ಎರಡು ಡೋಸ್ ಕೊವಿಡ್ ಲಸಿಕೆ ಪಡೆದವರು ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದು. ಮೊದಲ ಎರಡು ಡೋಸ್​ ಪಡೆದುಕೊಂಡ ಕಂಪನಿಗೆ ಹೊರತಾದ ಮತ್ತೊಂದು ಕಂಪನಿಯ ಬೂಸ್ಟರ್ ಡೋಸ್ ನೀಡಲು ಅವಕಾಶ ನೀಡಿರುವುದು ಭಾರತದಲ್ಲಿ ಇದೇ ಮೊದಲು.

ರಾಷ್ಟ್ರೀಯ ತಾಂತ್ರಿಕ ಲಸಿಕಾಕರಣ ಸಲಹಾ ಮಂಡಳಿ (National Technical Advisory Group on Immunisation – NTAGI) ನೀಡಿರುವ ಶಿಫಾರಸು ಆಧರಿಸಿ ಕೇಂದ್ರ ಆರೋಗ್ಯ ಸಚಿವಾಲಯವು ಈ ನಿರ್ಧಾರ ತೆಗೆದುಕೊಂಡಿದೆ. ‘18 ವರ್ಷ ಮೇಲ್ಪಟ್ಟವರು ಕೊವಿಡ್ ಲಸಿಕೆ ತೆಗೆದುಕೊಂಡು 6 ತಿಂಗಳು ಅಥವಾ 26 ವಾರವಾದ ನಂತರ ಬೂಸ್ಟರ್ ಡೋಸ್ ಆಗಿ ಕೊರ್ಬೆವ್ಯಾಕ್ಸ್ ಲಸಿಕೆ ತೆಗೆದುಕೊಳ್ಳಬಹುದು’ ಎಂದು ಮೂಲಗಳು ಹೇಳಿವೆ.

ಕಳೆದ ಜೂನ್ 4ರಂದು ಬಯಲಾಜಿಕಲ್-ಇ ಕಂಪನಿಯ ಕೊರ್ಬೆವ್ಯಾಕ್ಸ್​ ಲಸಿಕೆಯನ್ನು ತುರ್ತು ಸಂದರ್ಭಗಳಲ್ಲಿ ಬಳಸಲು ಡಿಸಿಜಿಐ (Drugs Controller General of India – DCGI) ಅನುಮೋದನೆ ಸಿಕ್ಕಿತ್ತು. ಹೈದರಾಬಾದ್ ಮೂಲಕ ಔಷಧ ಮತ್ತು ಲಸಿಕಾ ತಯಾರಿಕೆ ಕಂಪನಿ ಬಯಾಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆಯು ಕೊವಿಡ್ ಸೋಂಕಿನ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವುದು ಕ್ಲಿನಿಕಲ್ ಟ್ರಯಲ್ಸ್ ವೇಳೆ ಸಾಬೀತಾಗಿತ್ತು.

Published On - 11:36 am, Wed, 10 August 22

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್