AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corbevax: ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ನೀಡಲು ಭಾರತ ಸರ್ಕಾರ ಅನುಮತಿ

18 ವರ್ಷ ಮೇಲ್ಪಟ್ಟವರು ಮತ್ತು ಎರಡು ಡೋಸ್ ಕೊವಿಡ್ ಲಸಿಕೆ ಪಡೆದವರು ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದು.

Corbevax: ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ನೀಡಲು ಭಾರತ ಸರ್ಕಾರ ಅನುಮತಿ
Corbevax ಲಸಿಕೆ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 10, 2022 | 12:17 PM

ಬೆಂಗಳೂರು: ಕೊವ್ಯಾಕ್ಸಿನ್ (Covaxin) ಅಥವಾ ಕೊವಿಶೀಲ್ಡ್​ (Covishield) ಕೊವಿಡ್ ನಿರೋಧಕ ಲಸಿಕೆ (Corona Vaccine) ಪಡೆದವರಿಗೆ ಬೂಸ್ಟರ್​ ಲಸಿಕೆಯಾಗಿ ‘ಬಯಲಾಜಿಕಲ್ ಇ’ ಕಂಪನಿಯ ಕೊರ್ಬೆವ್ಯಾಕ್ಸ್ (Corbevax) ನೀಡಲು ಭಾರತ ಸರ್ಕಾರ ಅನುಮತಿ ನೀಡಿದೆ. 18 ವರ್ಷ ದಾಟಿರುವ, ಈಗಾಗಲೇ ಮೊದಲ ಎರಡು ಲಸಿಕೆ ಪಡೆದವರು ಬೂಸ್ಟರ್ ಲಸಿಕೆಯಾಗಿ ಕೊರ್ಬೆವ್ಯಾಕ್ಸ್ ತೆಗೆದುಕೊಳ್ಳಬಹುದು ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ.

18 ವರ್ಷ ಮೇಲ್ಪಟ್ಟವರು ಮತ್ತು ಎರಡು ಡೋಸ್ ಕೊವಿಡ್ ಲಸಿಕೆ ಪಡೆದವರು ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದು. ಮೊದಲ ಎರಡು ಡೋಸ್​ ಪಡೆದುಕೊಂಡ ಕಂಪನಿಗೆ ಹೊರತಾದ ಮತ್ತೊಂದು ಕಂಪನಿಯ ಬೂಸ್ಟರ್ ಡೋಸ್ ನೀಡಲು ಅವಕಾಶ ನೀಡಿರುವುದು ಭಾರತದಲ್ಲಿ ಇದೇ ಮೊದಲು.

ರಾಷ್ಟ್ರೀಯ ತಾಂತ್ರಿಕ ಲಸಿಕಾಕರಣ ಸಲಹಾ ಮಂಡಳಿ (National Technical Advisory Group on Immunisation – NTAGI) ನೀಡಿರುವ ಶಿಫಾರಸು ಆಧರಿಸಿ ಕೇಂದ್ರ ಆರೋಗ್ಯ ಸಚಿವಾಲಯವು ಈ ನಿರ್ಧಾರ ತೆಗೆದುಕೊಂಡಿದೆ. ‘18 ವರ್ಷ ಮೇಲ್ಪಟ್ಟವರು ಕೊವಿಡ್ ಲಸಿಕೆ ತೆಗೆದುಕೊಂಡು 6 ತಿಂಗಳು ಅಥವಾ 26 ವಾರವಾದ ನಂತರ ಬೂಸ್ಟರ್ ಡೋಸ್ ಆಗಿ ಕೊರ್ಬೆವ್ಯಾಕ್ಸ್ ಲಸಿಕೆ ತೆಗೆದುಕೊಳ್ಳಬಹುದು’ ಎಂದು ಮೂಲಗಳು ಹೇಳಿವೆ.

ಕಳೆದ ಜೂನ್ 4ರಂದು ಬಯಲಾಜಿಕಲ್-ಇ ಕಂಪನಿಯ ಕೊರ್ಬೆವ್ಯಾಕ್ಸ್​ ಲಸಿಕೆಯನ್ನು ತುರ್ತು ಸಂದರ್ಭಗಳಲ್ಲಿ ಬಳಸಲು ಡಿಸಿಜಿಐ (Drugs Controller General of India – DCGI) ಅನುಮೋದನೆ ಸಿಕ್ಕಿತ್ತು. ಹೈದರಾಬಾದ್ ಮೂಲಕ ಔಷಧ ಮತ್ತು ಲಸಿಕಾ ತಯಾರಿಕೆ ಕಂಪನಿ ಬಯಾಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆಯು ಕೊವಿಡ್ ಸೋಂಕಿನ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವುದು ಕ್ಲಿನಿಕಲ್ ಟ್ರಯಲ್ಸ್ ವೇಳೆ ಸಾಬೀತಾಗಿತ್ತು.

Published On - 11:36 am, Wed, 10 August 22

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ