AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corbevax: ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ನೀಡಲು ಭಾರತ ಸರ್ಕಾರ ಅನುಮತಿ

18 ವರ್ಷ ಮೇಲ್ಪಟ್ಟವರು ಮತ್ತು ಎರಡು ಡೋಸ್ ಕೊವಿಡ್ ಲಸಿಕೆ ಪಡೆದವರು ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದು.

Corbevax: ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ನೀಡಲು ಭಾರತ ಸರ್ಕಾರ ಅನುಮತಿ
Corbevax ಲಸಿಕೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 10, 2022 | 12:17 PM

Share

ಬೆಂಗಳೂರು: ಕೊವ್ಯಾಕ್ಸಿನ್ (Covaxin) ಅಥವಾ ಕೊವಿಶೀಲ್ಡ್​ (Covishield) ಕೊವಿಡ್ ನಿರೋಧಕ ಲಸಿಕೆ (Corona Vaccine) ಪಡೆದವರಿಗೆ ಬೂಸ್ಟರ್​ ಲಸಿಕೆಯಾಗಿ ‘ಬಯಲಾಜಿಕಲ್ ಇ’ ಕಂಪನಿಯ ಕೊರ್ಬೆವ್ಯಾಕ್ಸ್ (Corbevax) ನೀಡಲು ಭಾರತ ಸರ್ಕಾರ ಅನುಮತಿ ನೀಡಿದೆ. 18 ವರ್ಷ ದಾಟಿರುವ, ಈಗಾಗಲೇ ಮೊದಲ ಎರಡು ಲಸಿಕೆ ಪಡೆದವರು ಬೂಸ್ಟರ್ ಲಸಿಕೆಯಾಗಿ ಕೊರ್ಬೆವ್ಯಾಕ್ಸ್ ತೆಗೆದುಕೊಳ್ಳಬಹುದು ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ.

18 ವರ್ಷ ಮೇಲ್ಪಟ್ಟವರು ಮತ್ತು ಎರಡು ಡೋಸ್ ಕೊವಿಡ್ ಲಸಿಕೆ ಪಡೆದವರು ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದು. ಮೊದಲ ಎರಡು ಡೋಸ್​ ಪಡೆದುಕೊಂಡ ಕಂಪನಿಗೆ ಹೊರತಾದ ಮತ್ತೊಂದು ಕಂಪನಿಯ ಬೂಸ್ಟರ್ ಡೋಸ್ ನೀಡಲು ಅವಕಾಶ ನೀಡಿರುವುದು ಭಾರತದಲ್ಲಿ ಇದೇ ಮೊದಲು.

ರಾಷ್ಟ್ರೀಯ ತಾಂತ್ರಿಕ ಲಸಿಕಾಕರಣ ಸಲಹಾ ಮಂಡಳಿ (National Technical Advisory Group on Immunisation – NTAGI) ನೀಡಿರುವ ಶಿಫಾರಸು ಆಧರಿಸಿ ಕೇಂದ್ರ ಆರೋಗ್ಯ ಸಚಿವಾಲಯವು ಈ ನಿರ್ಧಾರ ತೆಗೆದುಕೊಂಡಿದೆ. ‘18 ವರ್ಷ ಮೇಲ್ಪಟ್ಟವರು ಕೊವಿಡ್ ಲಸಿಕೆ ತೆಗೆದುಕೊಂಡು 6 ತಿಂಗಳು ಅಥವಾ 26 ವಾರವಾದ ನಂತರ ಬೂಸ್ಟರ್ ಡೋಸ್ ಆಗಿ ಕೊರ್ಬೆವ್ಯಾಕ್ಸ್ ಲಸಿಕೆ ತೆಗೆದುಕೊಳ್ಳಬಹುದು’ ಎಂದು ಮೂಲಗಳು ಹೇಳಿವೆ.

ಕಳೆದ ಜೂನ್ 4ರಂದು ಬಯಲಾಜಿಕಲ್-ಇ ಕಂಪನಿಯ ಕೊರ್ಬೆವ್ಯಾಕ್ಸ್​ ಲಸಿಕೆಯನ್ನು ತುರ್ತು ಸಂದರ್ಭಗಳಲ್ಲಿ ಬಳಸಲು ಡಿಸಿಜಿಐ (Drugs Controller General of India – DCGI) ಅನುಮೋದನೆ ಸಿಕ್ಕಿತ್ತು. ಹೈದರಾಬಾದ್ ಮೂಲಕ ಔಷಧ ಮತ್ತು ಲಸಿಕಾ ತಯಾರಿಕೆ ಕಂಪನಿ ಬಯಾಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆಯು ಕೊವಿಡ್ ಸೋಂಕಿನ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವುದು ಕ್ಲಿನಿಕಲ್ ಟ್ರಯಲ್ಸ್ ವೇಳೆ ಸಾಬೀತಾಗಿತ್ತು.

Published On - 11:36 am, Wed, 10 August 22

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ