AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corbevax: ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ನೀಡಲು ಭಾರತ ಸರ್ಕಾರ ಅನುಮತಿ

18 ವರ್ಷ ಮೇಲ್ಪಟ್ಟವರು ಮತ್ತು ಎರಡು ಡೋಸ್ ಕೊವಿಡ್ ಲಸಿಕೆ ಪಡೆದವರು ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದು.

Corbevax: ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ನೀಡಲು ಭಾರತ ಸರ್ಕಾರ ಅನುಮತಿ
Corbevax ಲಸಿಕೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 10, 2022 | 12:17 PM

Share

ಬೆಂಗಳೂರು: ಕೊವ್ಯಾಕ್ಸಿನ್ (Covaxin) ಅಥವಾ ಕೊವಿಶೀಲ್ಡ್​ (Covishield) ಕೊವಿಡ್ ನಿರೋಧಕ ಲಸಿಕೆ (Corona Vaccine) ಪಡೆದವರಿಗೆ ಬೂಸ್ಟರ್​ ಲಸಿಕೆಯಾಗಿ ‘ಬಯಲಾಜಿಕಲ್ ಇ’ ಕಂಪನಿಯ ಕೊರ್ಬೆವ್ಯಾಕ್ಸ್ (Corbevax) ನೀಡಲು ಭಾರತ ಸರ್ಕಾರ ಅನುಮತಿ ನೀಡಿದೆ. 18 ವರ್ಷ ದಾಟಿರುವ, ಈಗಾಗಲೇ ಮೊದಲ ಎರಡು ಲಸಿಕೆ ಪಡೆದವರು ಬೂಸ್ಟರ್ ಲಸಿಕೆಯಾಗಿ ಕೊರ್ಬೆವ್ಯಾಕ್ಸ್ ತೆಗೆದುಕೊಳ್ಳಬಹುದು ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ.

18 ವರ್ಷ ಮೇಲ್ಪಟ್ಟವರು ಮತ್ತು ಎರಡು ಡೋಸ್ ಕೊವಿಡ್ ಲಸಿಕೆ ಪಡೆದವರು ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದು. ಮೊದಲ ಎರಡು ಡೋಸ್​ ಪಡೆದುಕೊಂಡ ಕಂಪನಿಗೆ ಹೊರತಾದ ಮತ್ತೊಂದು ಕಂಪನಿಯ ಬೂಸ್ಟರ್ ಡೋಸ್ ನೀಡಲು ಅವಕಾಶ ನೀಡಿರುವುದು ಭಾರತದಲ್ಲಿ ಇದೇ ಮೊದಲು.

ರಾಷ್ಟ್ರೀಯ ತಾಂತ್ರಿಕ ಲಸಿಕಾಕರಣ ಸಲಹಾ ಮಂಡಳಿ (National Technical Advisory Group on Immunisation – NTAGI) ನೀಡಿರುವ ಶಿಫಾರಸು ಆಧರಿಸಿ ಕೇಂದ್ರ ಆರೋಗ್ಯ ಸಚಿವಾಲಯವು ಈ ನಿರ್ಧಾರ ತೆಗೆದುಕೊಂಡಿದೆ. ‘18 ವರ್ಷ ಮೇಲ್ಪಟ್ಟವರು ಕೊವಿಡ್ ಲಸಿಕೆ ತೆಗೆದುಕೊಂಡು 6 ತಿಂಗಳು ಅಥವಾ 26 ವಾರವಾದ ನಂತರ ಬೂಸ್ಟರ್ ಡೋಸ್ ಆಗಿ ಕೊರ್ಬೆವ್ಯಾಕ್ಸ್ ಲಸಿಕೆ ತೆಗೆದುಕೊಳ್ಳಬಹುದು’ ಎಂದು ಮೂಲಗಳು ಹೇಳಿವೆ.

ಕಳೆದ ಜೂನ್ 4ರಂದು ಬಯಲಾಜಿಕಲ್-ಇ ಕಂಪನಿಯ ಕೊರ್ಬೆವ್ಯಾಕ್ಸ್​ ಲಸಿಕೆಯನ್ನು ತುರ್ತು ಸಂದರ್ಭಗಳಲ್ಲಿ ಬಳಸಲು ಡಿಸಿಜಿಐ (Drugs Controller General of India – DCGI) ಅನುಮೋದನೆ ಸಿಕ್ಕಿತ್ತು. ಹೈದರಾಬಾದ್ ಮೂಲಕ ಔಷಧ ಮತ್ತು ಲಸಿಕಾ ತಯಾರಿಕೆ ಕಂಪನಿ ಬಯಾಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆಯು ಕೊವಿಡ್ ಸೋಂಕಿನ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವುದು ಕ್ಲಿನಿಕಲ್ ಟ್ರಯಲ್ಸ್ ವೇಳೆ ಸಾಬೀತಾಗಿತ್ತು.

Published On - 11:36 am, Wed, 10 August 22

Follow Us
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ