AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corbevax: ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ನೀಡಲು ಭಾರತ ಸರ್ಕಾರ ಅನುಮತಿ

18 ವರ್ಷ ಮೇಲ್ಪಟ್ಟವರು ಮತ್ತು ಎರಡು ಡೋಸ್ ಕೊವಿಡ್ ಲಸಿಕೆ ಪಡೆದವರು ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದು.

Corbevax: ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ನೀಡಲು ಭಾರತ ಸರ್ಕಾರ ಅನುಮತಿ
Corbevax ಲಸಿಕೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 10, 2022 | 12:17 PM

Share

ಬೆಂಗಳೂರು: ಕೊವ್ಯಾಕ್ಸಿನ್ (Covaxin) ಅಥವಾ ಕೊವಿಶೀಲ್ಡ್​ (Covishield) ಕೊವಿಡ್ ನಿರೋಧಕ ಲಸಿಕೆ (Corona Vaccine) ಪಡೆದವರಿಗೆ ಬೂಸ್ಟರ್​ ಲಸಿಕೆಯಾಗಿ ‘ಬಯಲಾಜಿಕಲ್ ಇ’ ಕಂಪನಿಯ ಕೊರ್ಬೆವ್ಯಾಕ್ಸ್ (Corbevax) ನೀಡಲು ಭಾರತ ಸರ್ಕಾರ ಅನುಮತಿ ನೀಡಿದೆ. 18 ವರ್ಷ ದಾಟಿರುವ, ಈಗಾಗಲೇ ಮೊದಲ ಎರಡು ಲಸಿಕೆ ಪಡೆದವರು ಬೂಸ್ಟರ್ ಲಸಿಕೆಯಾಗಿ ಕೊರ್ಬೆವ್ಯಾಕ್ಸ್ ತೆಗೆದುಕೊಳ್ಳಬಹುದು ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ.

18 ವರ್ಷ ಮೇಲ್ಪಟ್ಟವರು ಮತ್ತು ಎರಡು ಡೋಸ್ ಕೊವಿಡ್ ಲಸಿಕೆ ಪಡೆದವರು ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದು. ಮೊದಲ ಎರಡು ಡೋಸ್​ ಪಡೆದುಕೊಂಡ ಕಂಪನಿಗೆ ಹೊರತಾದ ಮತ್ತೊಂದು ಕಂಪನಿಯ ಬೂಸ್ಟರ್ ಡೋಸ್ ನೀಡಲು ಅವಕಾಶ ನೀಡಿರುವುದು ಭಾರತದಲ್ಲಿ ಇದೇ ಮೊದಲು.

ರಾಷ್ಟ್ರೀಯ ತಾಂತ್ರಿಕ ಲಸಿಕಾಕರಣ ಸಲಹಾ ಮಂಡಳಿ (National Technical Advisory Group on Immunisation – NTAGI) ನೀಡಿರುವ ಶಿಫಾರಸು ಆಧರಿಸಿ ಕೇಂದ್ರ ಆರೋಗ್ಯ ಸಚಿವಾಲಯವು ಈ ನಿರ್ಧಾರ ತೆಗೆದುಕೊಂಡಿದೆ. ‘18 ವರ್ಷ ಮೇಲ್ಪಟ್ಟವರು ಕೊವಿಡ್ ಲಸಿಕೆ ತೆಗೆದುಕೊಂಡು 6 ತಿಂಗಳು ಅಥವಾ 26 ವಾರವಾದ ನಂತರ ಬೂಸ್ಟರ್ ಡೋಸ್ ಆಗಿ ಕೊರ್ಬೆವ್ಯಾಕ್ಸ್ ಲಸಿಕೆ ತೆಗೆದುಕೊಳ್ಳಬಹುದು’ ಎಂದು ಮೂಲಗಳು ಹೇಳಿವೆ.

ಕಳೆದ ಜೂನ್ 4ರಂದು ಬಯಲಾಜಿಕಲ್-ಇ ಕಂಪನಿಯ ಕೊರ್ಬೆವ್ಯಾಕ್ಸ್​ ಲಸಿಕೆಯನ್ನು ತುರ್ತು ಸಂದರ್ಭಗಳಲ್ಲಿ ಬಳಸಲು ಡಿಸಿಜಿಐ (Drugs Controller General of India – DCGI) ಅನುಮೋದನೆ ಸಿಕ್ಕಿತ್ತು. ಹೈದರಾಬಾದ್ ಮೂಲಕ ಔಷಧ ಮತ್ತು ಲಸಿಕಾ ತಯಾರಿಕೆ ಕಂಪನಿ ಬಯಾಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆಯು ಕೊವಿಡ್ ಸೋಂಕಿನ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವುದು ಕ್ಲಿನಿಕಲ್ ಟ್ರಯಲ್ಸ್ ವೇಳೆ ಸಾಬೀತಾಗಿತ್ತು.

Published On - 11:36 am, Wed, 10 August 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ