AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corbevax: ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ನೀಡಲು ಭಾರತ ಸರ್ಕಾರ ಅನುಮತಿ

18 ವರ್ಷ ಮೇಲ್ಪಟ್ಟವರು ಮತ್ತು ಎರಡು ಡೋಸ್ ಕೊವಿಡ್ ಲಸಿಕೆ ಪಡೆದವರು ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದು.

Corbevax: ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ನೀಡಲು ಭಾರತ ಸರ್ಕಾರ ಅನುಮತಿ
Corbevax ಲಸಿಕೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 10, 2022 | 12:17 PM

Share

ಬೆಂಗಳೂರು: ಕೊವ್ಯಾಕ್ಸಿನ್ (Covaxin) ಅಥವಾ ಕೊವಿಶೀಲ್ಡ್​ (Covishield) ಕೊವಿಡ್ ನಿರೋಧಕ ಲಸಿಕೆ (Corona Vaccine) ಪಡೆದವರಿಗೆ ಬೂಸ್ಟರ್​ ಲಸಿಕೆಯಾಗಿ ‘ಬಯಲಾಜಿಕಲ್ ಇ’ ಕಂಪನಿಯ ಕೊರ್ಬೆವ್ಯಾಕ್ಸ್ (Corbevax) ನೀಡಲು ಭಾರತ ಸರ್ಕಾರ ಅನುಮತಿ ನೀಡಿದೆ. 18 ವರ್ಷ ದಾಟಿರುವ, ಈಗಾಗಲೇ ಮೊದಲ ಎರಡು ಲಸಿಕೆ ಪಡೆದವರು ಬೂಸ್ಟರ್ ಲಸಿಕೆಯಾಗಿ ಕೊರ್ಬೆವ್ಯಾಕ್ಸ್ ತೆಗೆದುಕೊಳ್ಳಬಹುದು ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ.

18 ವರ್ಷ ಮೇಲ್ಪಟ್ಟವರು ಮತ್ತು ಎರಡು ಡೋಸ್ ಕೊವಿಡ್ ಲಸಿಕೆ ಪಡೆದವರು ಕೊರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದು. ಮೊದಲ ಎರಡು ಡೋಸ್​ ಪಡೆದುಕೊಂಡ ಕಂಪನಿಗೆ ಹೊರತಾದ ಮತ್ತೊಂದು ಕಂಪನಿಯ ಬೂಸ್ಟರ್ ಡೋಸ್ ನೀಡಲು ಅವಕಾಶ ನೀಡಿರುವುದು ಭಾರತದಲ್ಲಿ ಇದೇ ಮೊದಲು.

ರಾಷ್ಟ್ರೀಯ ತಾಂತ್ರಿಕ ಲಸಿಕಾಕರಣ ಸಲಹಾ ಮಂಡಳಿ (National Technical Advisory Group on Immunisation – NTAGI) ನೀಡಿರುವ ಶಿಫಾರಸು ಆಧರಿಸಿ ಕೇಂದ್ರ ಆರೋಗ್ಯ ಸಚಿವಾಲಯವು ಈ ನಿರ್ಧಾರ ತೆಗೆದುಕೊಂಡಿದೆ. ‘18 ವರ್ಷ ಮೇಲ್ಪಟ್ಟವರು ಕೊವಿಡ್ ಲಸಿಕೆ ತೆಗೆದುಕೊಂಡು 6 ತಿಂಗಳು ಅಥವಾ 26 ವಾರವಾದ ನಂತರ ಬೂಸ್ಟರ್ ಡೋಸ್ ಆಗಿ ಕೊರ್ಬೆವ್ಯಾಕ್ಸ್ ಲಸಿಕೆ ತೆಗೆದುಕೊಳ್ಳಬಹುದು’ ಎಂದು ಮೂಲಗಳು ಹೇಳಿವೆ.

ಕಳೆದ ಜೂನ್ 4ರಂದು ಬಯಲಾಜಿಕಲ್-ಇ ಕಂಪನಿಯ ಕೊರ್ಬೆವ್ಯಾಕ್ಸ್​ ಲಸಿಕೆಯನ್ನು ತುರ್ತು ಸಂದರ್ಭಗಳಲ್ಲಿ ಬಳಸಲು ಡಿಸಿಜಿಐ (Drugs Controller General of India – DCGI) ಅನುಮೋದನೆ ಸಿಕ್ಕಿತ್ತು. ಹೈದರಾಬಾದ್ ಮೂಲಕ ಔಷಧ ಮತ್ತು ಲಸಿಕಾ ತಯಾರಿಕೆ ಕಂಪನಿ ಬಯಾಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆಯು ಕೊವಿಡ್ ಸೋಂಕಿನ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವುದು ಕ್ಲಿನಿಕಲ್ ಟ್ರಯಲ್ಸ್ ವೇಳೆ ಸಾಬೀತಾಗಿತ್ತು.

Published On - 11:36 am, Wed, 10 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ