Corbevax: ಭಾರತಕ್ಕೆ ಇಂದೇ ಕಾರ್ಬ್​ವ್ಯಾಕ್ಸ್ ಪೂರೈಕೆ ಸಾಧ್ಯತೆ; ಸದ್ಯದಲ್ಲೇ ಕಡಿಮೆ ಬೆಲೆಯ ಕೊವಿಡ್ ಲಸಿಕೆ ಲಭ್ಯ

Covid-19 Vaccine: ಹೈದರಾಬಾದ್​ನ ಬಯಾಲಾಜಿಕಲ್ ಇ ಕಂಪನಿಯ ಕಾರ್ಬ್​ವ್ಯಾಕ್ಸ್​ ಈಗಾಗಲೇ ಭಾರತದಲ್ಲಿ ಲಭ್ಯವಿರುವ ಕೊವ್ಯಾಕ್ಸಿನ್, ಕೋವಿಶೀಲ್ಡ್​, ಸ್ಪುಟ್ನಿಕ್-ವಿ ಲಸಿಕೆಗಳಿಗಿಂತಲೂ ಅತ್ಯಂತ ಕಡಿಮೆ ದರದ ಕೊವಿಡ್ ಲಸಿಕೆಯಾಗಿದೆ.

Corbevax: ಭಾರತಕ್ಕೆ ಇಂದೇ ಕಾರ್ಬ್​ವ್ಯಾಕ್ಸ್ ಪೂರೈಕೆ ಸಾಧ್ಯತೆ; ಸದ್ಯದಲ್ಲೇ ಕಡಿಮೆ ಬೆಲೆಯ ಕೊವಿಡ್ ಲಸಿಕೆ ಲಭ್ಯ
ಕಾರ್ಬ್​ವ್ಯಾಕ್ಸ್​ ಲಸಿಕೆ
Follow us
| Edited By: Sushma Chakre

Updated on:Feb 15, 2022 | 12:00 PM

ನವದೆಹಲಿ: ಡ್ರಗ್ಸ್ ಕಂಟ್ರೋಲ್ ಜನರಲ್ ಆಫ್ ಇಂಡಿಯಾ (DCGI) ಸೋಮವಾರ ಬಯೋಲಾಜಿಕಲ್ ಇ (Biological E) ಕೋವಿಡ್ ಲಸಿಕೆಯಾಗಿರುವ ಕಾರ್ಬ್​ವ್ಯಾಕ್ಸ್ (Corbevax) ತುರ್ತು ಬಳಕೆಗೆ ಅನುಮತಿ ನೀಡಿದೆ. ಕೆಲವು ಷರತ್ತುಗಳನ್ನು ವಿಧಿಸಿ 12ರಿಂದ 18 ವರ್ಷ ವಯಸ್ಸಿನವರಿಗೆ ಕಾರ್ಬ್​ವ್ಯಾಕ್ಸ್ ಕೊವಿಡ್ ಲಸಿಕೆಯನ್ನು ಶಿಫಾರಸು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರಕ್ಕೆ ಮೊದಲ ಹಂತದಲ್ಲಿ ಇಂದೇ ಕಾರ್ಬ್​ವ್ಯಾಕ್ಸ್ ಲಸಿಕೆಗಳು ಪೂರೈಕೆಯಾಗುವ ಸಾಧ್ಯತೆಯಿದೆ. ಈ ಕಾರ್ಬ್​ವ್ಯಾಕ್ಸ್​ ಲಸಿಕೆ ಬೇರೆಲ್ಲ ಕೊವಿಡ್ ಲಸಿಕೆಗಳಿಗಿಂತ ಬಹಳ ಕಡಿಮೆ ದರದಲ್ಲಿ ಲಭ್ಯವಾಗುವುದರಿಂದ ಹೆಚ್ಚು ನಿರೀಕ್ಷೆ ಮೂಡಿಸಿದೆ. 

ಹೈದರಾಬಾದ್​ನ ಬಯಾಲಾಜಿಕಲ್ ಇ ಕಂಪನಿಯ ಕಾರ್ಬ್​ವ್ಯಾಕ್ಸ್​ ಈಗಾಗಲೇ ಭಾರತದಲ್ಲಿ ಲಭ್ಯವಿರುವ ಕೊವ್ಯಾಕ್ಸಿನ್, ಕೋವಿಶೀಲ್ಡ್​, ಸ್ಪುಟ್ನಿಕ್-ವಿ ಲಸಿಕೆಗಳಿಗಿಂತಲೂ ಅತ್ಯಂತ ಕಡಿಮೆ ದರದ ಕೊವಿಡ್ ಲಸಿಕೆಯಾಗಿದೆ. ಕಾರ್ಬ್​ವ್ಯಾಕ್ಸ್​ ಲಸಿಕೆಯ 1 ಡೋಸ್​ಗೆ ತೆರಿಗೆಗಳನ್ನು ಹೊರತುಪಡಿಸಿ 145 ರೂ. ತಗುಲುತ್ತದೆ. ಬಯಾಲಾಜಿಕಲ್ ಇ ಕಂಪನಿ ಈಗಾಗಲೇ 250 ಮಿಲಿಯನ್ ಕಾರ್ಬ್​ವ್ಯಾಕ್ಸ್​ ಲಸಿಕೆಗಳನ್ನು ಉತ್ಪಾದನೆ ಮಾಡಿದೆ. ಉಳಿದ ಡೋಸ್‌ಗಳನ್ನು ಕೆಲವೇ ವಾರಗಳಲ್ಲಿ ಉತ್ಪಾದಿಸುವ ಗುರಿಯನ್ನು ಹೊಂದಿದೆ. ಭಾರತದ ಕೊವಿಡ್ ಲಸಿಕಾ ಅಭಿಯಾನದಲ್ಲಿ ಕಾರ್ಬ್​ವ್ಯಾಕ್ಸ್​ ಲಸಿಕೆಯ ಹೆಸರನ್ನು ಸೇರಿಸಿಲ್ಲ.

ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಈಗಾಗಲೇ ಕಾರ್ಬೆವ್ಯಾಕ್ಸ್ ಲಸಿಕೆಯನ್ನು ಅನುಮೋದಿಸಿದೆ. ಇದು ಕೋವಿಡ್-19 ವಿರುದ್ಧ ಭಾರತದಲ್ಲಿ ಮೊದಲು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ RBD ಪ್ರೋಟೀನ್ ಉಪ-ಘಟಕದ ಕೊವಿಡ್ ಲಸಿಕೆಯಾಗಿದೆ. ಕಳೆದ ವರ್ಷ, ಈ ಕೊವಿಡ್ ಲಸಿಕೆಯ ಡೋಸ್‌ಗಳನ್ನು ಖರೀದಿಸಲು ಹೈದರಾಬಾದ್ ಮೂಲದ ಕಂಪನಿಗೆ ಕೇಂದ್ರ ಸರ್ಕಾರವು 1,500 ಕೋಟಿ ರೂ. ಮುಂಗಡ ಹಣ ಪಾವತಿ ಮಾಡಿದೆ.

ಕಾರ್ಬ್​ವ್ಯಾಕ್ಸ್​ ಲಸಿಕೆಯ 300 ಮಿಲಿಯನ್ ಡೋಸ್‌ಗಳ ಮೊದಲ ಪೂರೈಕೆ ಇಂದಿನಿಂದಲೇ ಪ್ರಾರಂಭವಾಗಲಿದೆ ಎಂದು ವರದಿಯೊಂದು ತಿಳಿಸಿದೆ. ಕಾರ್ಬ್​ವ್ಯಾಕ್ಸ್ ಲಸಿಕೆಯನ್ನು 28 ದಿನಗಳ ಅಂತರದಲ್ಲಿ ಎರಡು ಡೋಸ್‌ಗಳೊಂದಿಗೆ ಇಂಟ್ರಾಮಸ್ಕುಲರ್ ರೂಟ್ ಮೂಲಕ ನೀಡಲಾಗುತ್ತದೆ.

ಇದನ್ನೂ ಓದಿ: ಒಂದು ಡೋಸ್​ ಲಸಿಕೆಗೆ ಕೇವಲ 200 ರೂಪಾಯಿ; ಭರವಸೆ ಮೂಡಿಸಿದ ಕಾರ್ಬ್​ವ್ಯಾಕ್ಸ್​ ಲಸಿಕೆಯತ್ತ ಸರ್ಕಾರದ ಗಮನ

Sputnik Vaccine: ಭಾರತದಲ್ಲಿ ಸ್ಪುಟ್ನಿಕ್ ಸಿಂಗಲ್ ಡೋಸ್ ಕೊವಿಡ್ ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ

Published On - 11:59 am, Tue, 15 February 22

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ