AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train Accident: ಒಡಿಶಾ ರೈಲು ದುರಂತ; ಮೃತರ ಸಂಖ್ಯೆ 288ಕ್ಕೆ, ಬುಧವಾರದಿಂದ ಸಂಚಾರ ಆರಂಭಿಸಲಿದೆ ಕೋರಮಂಡಲ್ ಎಕ್ಸ್‌ಪ್ರೆಸ್

ರೈಲು ದುರಂತದ ಐದು ದಿನಗಳ ನಂತರ ಕೋರಮಂಡಲ್ ಎಕ್ಸ್‌ಪ್ರೆಸ್ ತನ್ನ ಪ್ರಯಾಣವನ್ನು ಜೂನ್ 7 ರಂದು ಪುನರಾರಂಭಿಸಲಿದೆ. ರೈಲು ಬುಧವಾರ ಮಧ್ಯಾಹ್ನ 3:30 ಕ್ಕೆ ಶಾಲಿಮಾರ್‌ನಿಂದ ಚೆನ್ನೈಗೆ ಹೊರಡುವ ಸಾಧ್ಯತೆಯಿದೆ.

Odisha Train Accident: ಒಡಿಶಾ ರೈಲು ದುರಂತ; ಮೃತರ ಸಂಖ್ಯೆ 288ಕ್ಕೆ, ಬುಧವಾರದಿಂದ ಸಂಚಾರ ಆರಂಭಿಸಲಿದೆ ಕೋರಮಂಡಲ್ ಎಕ್ಸ್‌ಪ್ರೆಸ್
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jun 06, 2023 | 10:35 PM

Share

ಭುವನೇಶ್ವರ: ಒಡಿಶಾದ ಬಾಲಸೋರ್​ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 288 ಕ್ಕೆ ಏರಿಕೆಯಾಗಿದೆ ಎಂದು ಒಡಿಶಾ ಸರ್ಕಾರ ಮಂಗಳವಾರ ತಿಳಿಸಿದೆ. ಹಲವಾರು ಮೃತದೇಹಗಳನ್ನು ಪರಿಶೀಲಿಸಿ ಅವರ ಸಂಬಂಧಿಕರಿಗೆ ಹಸ್ತಾಂತರಿಸಿದ ನಂತರ ಇದೀಗ ಸಾವಿನ ಸಂಖ್ಯೆ ಹೆಚ್ಚಿರುವುದು ತಿಳಿದುಬಂದಿದೆ. ಹೌರಾ-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ (Coromandel Express), ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಒಳಗೊಂಡ ಸರಣಿ ಅಪಘಾತದಲ್ಲಿ ಸಾವನ್ನಪ್ಪಿದ 288 ಮಂದಿಯ ಪೈಕಿ 205 ಮೃತದೇಹಗಳನ್ನು ಇದುವರೆಗೆ ಗುರುತಿಸಲಾಗಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ತಿಳಿಸಿದ್ದಾರೆ.

83 ಅಪರಿಚಿತ ಶವಗಳನ್ನು ಗುರುತಿಸಲು ಬಾಕಿ ಇದ್ದು, ಭುವನೇಶ್ವರದ ಏಮ್ಸ್ ಮತ್ತು ಇತರ ಆಸ್ಪತ್ರೆಗಳಲ್ಲಿ ಇರಿಸಲಾಗಿದೆ. ಸರ್ಕಾರ ಬಿಡುಗಡೆ ಮಾಡಿದ ಸಹಾಯವಾಣಿ ಸಂಖ್ಯೆಗಳಲ್ಲಿ ನಾವು ಅನೇಕ ಪ್ರಶ್ನೆಗಳನ್ನು ಸ್ವೀಕರಿಸಿದ್ದೇವೆ. ಎಲ್ಲಾ ದೇಹಗಳನ್ನು ಗುರುತಿಸಲಾಗುವುದು. ಈ ಬಗ್ಗೆ ನಾವು ಆಶಾವಾದಿಗಳಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

ಬುಧವಾರದಿಂದ ಕೋರಮಂಡಲ್ ಎಕ್ಸ್​ಪ್ರೆಸ್ ಸಂಚಾರ ಪುನರಾರಂಭ

ರೈಲು ದುರಂತದ ಐದು ದಿನಗಳ ನಂತರ ಕೋರಮಂಡಲ್ ಎಕ್ಸ್‌ಪ್ರೆಸ್ ತನ್ನ ಪ್ರಯಾಣವನ್ನು ಜೂನ್ 7 ರಂದು ಪುನರಾರಂಭಿಸಲಿದೆ. ರೈಲು ಬುಧವಾರ ಮಧ್ಯಾಹ್ನ 3:30 ಕ್ಕೆ ಶಾಲಿಮಾರ್‌ನಿಂದ ಚೆನ್ನೈಗೆ ಹೊರಡುವ ಸಾಧ್ಯತೆಯಿದೆ.

ಆಗ್ನೇಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಆದಿತ್ಯ ಚೌಧರಿ ಪ್ರಕಾರ, ರೈಲು ಹಿಂದಿನ ಮಾರ್ಗದಲ್ಲೇ ಸಂಚರಿಸಲಿದೆ ಎಂದು ಅವರು ಹೇಳಿದ್ದರೆ.

ಇದನ್ನೂ ಓದಿ: Odisha Train Accident: ಒಡಿಶಾ ಭೀಕರ ರೈಲು ದುರಂತ ಸಂಭವಿಸಿದ್ದು ಹೇಗೆ? ಪ್ರತ್ಯಕ್ಷದರ್ಶಿಗಳು ಹೇಳೋದೇನು?

ಅಪಘಾತಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದ 39 ಮೃತರ ಕುಟುಂಬಗಳಿಗೆ ಪರಿಹಾರ ಪಾವತಿಗಾಗಿ 1.95 ಕೋಟಿ ರೂ. ಘೋಷಿಸಿದ್ದಾರೆ.

ಈ ಮಧ್ಯೆ, ರೈಲು ದುರಂತದ ಸ್ಥಳಕ್ಕೆ ಭೇಟಿ ನೀಡಿರುವ ಸಿಬಿಐ, ಈಗಾಗಲೇ ತನಿಖಾ ಪ್ರಕ್ರಿಯೆ ಆರಂಭಿಸಿದೆ.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು