Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಮೃತಪಡುವವರ ಡೆತ್​ ಸರ್ಟಿಫಿಕೇಟ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಇರಲಿ: ನವಾಬ್​ ಮಲ್ಲಿಕ್​

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಏರುತ್ತಿದೆ. ಮರಣ ಪ್ರಮಾಣವೂ ಅಧಿಕವಾಗಿದೆ. ಚಿತಾಗಾರಗಳಲ್ಲಿ ಶವಗಳು ತುಂಬಿರುವ ವಿಡಿಯೋಗಳು ತುಂಬ ವೈರಲ್​ ಆಗುತ್ತಿದೆ. ಪರಿಸ್ಥಿತಿ ಹೀಗೆ ಇದ್ದರೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನವಾಬ್​ ಮಲ್ಲಿಕ್ ಆರೋಪಿಸಿದರು.

ಕೊವಿಡ್​ನಿಂದ ಮೃತಪಡುವವರ ಡೆತ್​ ಸರ್ಟಿಫಿಕೇಟ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಇರಲಿ: ನವಾಬ್​ ಮಲ್ಲಿಕ್​
ನವಾಬ್ ಮಲ್ಲಿಕ್​
Follow us
Lakshmi Hegde
|

Updated on: Apr 17, 2021 | 4:02 PM

ಮುಂಬೈ: ಪ್ರಧಾನಿ ನರೇಂದ್ರ ಮೋದಿಯವರಿಗೆ ಕೊರೊನಾ ಲಸಿಕೆಯ ಹೆಗ್ಗಳಿಕೆ ಬೇಕು ಎಂದಾದರೆ, ಕೊರೊನಾದಿಂದ ಉಂಟಾಗುತ್ತಿರುವ ಸಾವಿನ ಹೊಣೆಯನ್ನೂ ಅವರು ಹೊರಬೇಕು ಎಂದು ಮಹಾರಾಷ್ಟ್ರ ಸಚಿವ, ಎನ್​ಸಿಪಿ ಮುಖಂಡ ನವಾಬ್​ ಮಲ್ಲಿಕ್ ಹೇಳಿದ್ದಾರೆ. ದೇಶದಲ್ಲಿ ದಿನೇದಿನೆ ಕೊರೊನಾ ಸೋಂಕಿತರು, ಕೊರೊನಾದಿಂದ ಸಾಯುವವರ ಸಂಖ್ಯೆ ಏರುತ್ತಿದೆ. ಲಸಿಕೆ ಅಭಿಯಾನ ವೇಗವಾಗಿ ನಡೆಯುತ್ತಿದ್ದರೂ ಕೊರೊನಾ ಪ್ರಸರಣ ತಗ್ಗುತ್ತಿಲ್ಲ. ಇದೇ ಕಾರಣವನ್ನಿಟ್ಟುಕೊಂಡು ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ನವಾಬ್ ಮಲಿಕ್​, ದೇಶದಲ್ಲಿ ಇಂದು ನಿರ್ಮಿತವಾಗಿರುವ ಪರಿಸ್ಥಿತಿಗೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದಿದ್ದಾರೆ.

ಕೊರೊನಾ ಲಸಿಕೆ ಹಾಕಿಸಿಕೊಂಡವರಿಗೆ ನೀಡುವ ಸರ್ಟಿಫಿಕೇಟ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹಾಕಲಾಗುತ್ತಿದೆ. ಹಾಗೇ ಕೊರೊನಾದಿಂದ ಮೃತಪಟ್ಟವರಿಗೆ ನೀಡುವ ಮರಣ ಪ್ರಮಾಣಪತ್ರ (ಡೆತ್​ ಸರ್ಟಿಫಿಕೇಟ್​)ದಲ್ಲೂ ಪ್ರಧಾನಿ ಫೋಟೋ ಇರಬೇಕು. ಲಸಿಕೆಯ ಹೆಗ್ಗಳಿಕೆ ಅವರಿಗೆ ಬೇಕು ಎಂದಾದ ಮೇಲೆ, ಕೊರೊನಾದಿಂದ ಆಗುತ್ತಿರುವ ಸಾವಿಗೂ ಮೋದಿಯವರೇ ಹೊಣೆ. ಹಾಗಾಗಿ ಮರಣ ಪ್ರಮಾಣ ಪತ್ರದಲ್ಲಿ ನರೇಂದ್ರ ಮೋದಿಯವರ ಫೋಟೋ ಇರಲಿ ಎಂದು ವ್ಯಂಗ್ಯವಾಡಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಏರುತ್ತಿದೆ. ಮರಣ ಪ್ರಮಾಣವೂ ಅಧಿಕವಾಗಿದೆ. ಚಿತಾಗಾರಗಳಲ್ಲಿ ಶವಗಳು ತುಂಬಿರುವ ವಿಡಿಯೋಗಳು ಸಿಕ್ಕಾಪಟೆ ವೈರಲ್​ ಆಗುತ್ತಿವೆ. ಕೊರೊನಾ ತಪಾಸಣೆ, ಚಿಕಿತ್ಸೆಗಾಗಿ ಜನರು ಸಾಲುಗಟ್ಟಿ ನಿಲ್ಲುವಂತಾಗಿದೆ. ಇಷ್ಟೆಲ್ಲ ಆದರೂ ನರೇಂದ್ರ ಮೋದಿ ಹಾಗೂ ಅವರ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಇದೆಲ್ಲದರ ಬಗ್ಗೆ ಕೇಂದ್ರ ಸರ್ಕಾರ ಉತ್ತರ ನೀಡಬೇಕು ಎಂದು ನವಾಬ್​ ಮಲ್ಲಿಕ್ ಹೇಳಿದ್ದಾರೆ.

ಇದನ್ನೂ ಓದಿ: ಹೇಳದೇ ಕೇಳದೇ ಅಂಬರೀಶ್ ಮನೆಗೆ ಬಂದಿದ್ದ ನಟ ವಿವೇಕ್; ವಿಶೇಷ ಘಟನೆ ನೆನಪಿಸಿಕೊಂಡ ಸುಮಲತಾ

ನರೇಂದ್ರ ಮೋದಿ ಗಡ್ಡ ಬಿಟ್ಟರೆ ರವೀಂದ್ರನಾಥ್​ ಠಾಗೋರ್​ ಆಗುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ