AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದಂತಹ ಸೂರತ್‌ ಆಭರಣ ಉದ್ಯಮದ ಮೇಲೆ ಕೊರೊನಾ ಕಾರ್ಮೋಡ

ಸೂರತ್: ಕೊರೊನಾ ವೈರಸ್ ಅಪ್ಪಳಿಸಿದ್ದೇ ಬಂತು, ಜಗತ್ತಿನ ದೈನಂದಿನ ಚಟುವಟಿಕೆಯೇ ಅಲ್ಲೋಲ ಕಲ್ಲೋಲವಾಗಿದೆ. ದಿನಗೂಲಿಗಳಿಂದ ಹಿಡಿದು ದೊಡ್ಡ ವ್ಯಾಪಾರಿಗಳು, ಖಾಸಗಿಯಿಂದ ಹಿಡಿದು ಸರ್ಕಾರಿ ನೌಕರರ ಜೀವನವೇ ಏರುಪೇರಾಗಿದೆ. ಹೌದು ಕೊರೊನಾ ಮಹಾಮಾರಿ ಯಾವಾಗ ಪೂರ್ವದಿಂದ ದಾಳಿ ಮಾಡಿತೋ, ಜಗತ್ತಿನ ಚಿತ್ರಣವೇ ಬದಲಾಗಿದೆ. ಇದರ ಘೋರ ಪರಿಣಾಮ ದೇಶದ ಚಿನ್ನ ಮತ್ತು ವಜ್ರಗಳ ವ್ಯಾಪಾರ ರಾಜಧಾನಿಯಂದೇ ಖ್ಯಾತಿಯಾಗಿರುವ ಸೂರತ್ ಮೇಲೂ ಬೀರಿದೆ. ಯಾವಾಗ ದೇಶಾದ್ಯಂತ ಕೊರೊನಾ ವೈರಸ್ ಹಬ್ಬದಂತೆ ತಪ್ಪಿಸಲು ಲಾಕ್ಡೌನ್ ಘೋಷಿಸಲಾಯಿತೋ, ಇಡಿ ಜನಜೀವನವೇ ಅಸ್ತವ್ಯಸ್ತವಾಗಿದೆ. ವ್ಯಾಪಾರ […]

ಚಿನ್ನದಂತಹ ಸೂರತ್‌ ಆಭರಣ ಉದ್ಯಮದ ಮೇಲೆ ಕೊರೊನಾ ಕಾರ್ಮೋಡ
Guru
| Edited By: |

Updated on:Jul 11, 2020 | 2:25 PM

Share

ಸೂರತ್: ಕೊರೊನಾ ವೈರಸ್ ಅಪ್ಪಳಿಸಿದ್ದೇ ಬಂತು, ಜಗತ್ತಿನ ದೈನಂದಿನ ಚಟುವಟಿಕೆಯೇ ಅಲ್ಲೋಲ ಕಲ್ಲೋಲವಾಗಿದೆ. ದಿನಗೂಲಿಗಳಿಂದ ಹಿಡಿದು ದೊಡ್ಡ ವ್ಯಾಪಾರಿಗಳು, ಖಾಸಗಿಯಿಂದ ಹಿಡಿದು ಸರ್ಕಾರಿ ನೌಕರರ ಜೀವನವೇ ಏರುಪೇರಾಗಿದೆ.

ಹೌದು ಕೊರೊನಾ ಮಹಾಮಾರಿ ಯಾವಾಗ ಪೂರ್ವದಿಂದ ದಾಳಿ ಮಾಡಿತೋ, ಜಗತ್ತಿನ ಚಿತ್ರಣವೇ ಬದಲಾಗಿದೆ. ಇದರ ಘೋರ ಪರಿಣಾಮ ದೇಶದ ಚಿನ್ನ ಮತ್ತು ವಜ್ರಗಳ ವ್ಯಾಪಾರ ರಾಜಧಾನಿಯಂದೇ ಖ್ಯಾತಿಯಾಗಿರುವ ಸೂರತ್ ಮೇಲೂ ಬೀರಿದೆ. ಯಾವಾಗ ದೇಶಾದ್ಯಂತ ಕೊರೊನಾ ವೈರಸ್ ಹಬ್ಬದಂತೆ ತಪ್ಪಿಸಲು ಲಾಕ್ಡೌನ್ ಘೋಷಿಸಲಾಯಿತೋ, ಇಡಿ ಜನಜೀವನವೇ ಅಸ್ತವ್ಯಸ್ತವಾಗಿದೆ. ವ್ಯಾಪಾರ ವಹಿವಾಟು ಬಂದ್ ಆಗಿದೆ. ಬೇರೆ ದಾರಿ ಕಾಣದೇ ಬಂಗಾರ ಮತ್ತು ವಜ್ರಗಳ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದ ಪರಿಣತ ಕಾರ್ಮಿಕರು ಕೆಲಸವಿಲ್ಲದೇ ನಿರುದ್ಯೋಗಿಗಳಾಗಿದ್ದಾರೆ. ಪರಿಣಾಮ ಅವರು ತಮ್ಮ ಊರುಗಳಿಗೆ ಹಿಂದಿರುಗಿದ್ದಾರೆ.

ಇದರ ಪರಿಣಾಮ ಈಗ ಸೂರತ್​ನ ಇಡೀ ಚಿನ್ನ ಮತ್ತು ವಜ್ರಗಳ ವಹಿವಾಟಿನ ಮೇಲೆ ಆಗಿದೆ. ಚಿನ್ನದ ಅಂಗಡಿಗಳಲ್ಲಿ ಕೆಲಸ ಮಾಡಲು ಕಾರ್ಮಿಕರಿಲ್ಲದೇ ಸಾಕಷ್ಟು ಕೆಲಸ ಹಾಗೇ ಉಳಿದಿದೆ. ಆಭರಣಗಳ ಕೆತ್ತನೆ ಕೆಲಸ ಮಾಡುವವರೇ ಇಲ್ಲದಂತಾಗಿದೆ. ಲಾಕ್ಡೌನ್ ಓಪನ್ ಮಾಡಿದ್ದರೂ, ವ್ಯಾಪಾರ ಮೊದಲಿನಂತೆ ನಡೆಯುತ್ತಿಲ್ಲ. ಹಾಗೇನೇ ಚಿನ್ನ ಕೊಳ್ಳುವವರ ಸಂಖ್ಯೆಯೂ ಮೊದಲಿನಂತಿಲ್ಲ.

ಈ ಬಗ್ಗೆ ಮಾತನಾಡಿರುವ ಸೂರತ್​ನ ಚಿನ್ನದ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ವಿಜಯ್ ಮಂಗೂಖಿಯಾ, ಲಾಕ್ಡೌನ್ ನಂತರ ಸುಮಾರು ಶೇ.70 ರಷ್ಟು ಕಾರ್ಮಿಕರು ತಮ್ಮ ಊರುಗಳಿಗೆ ಹಿಂದಿರುಗಿದ್ದಾರೆ. ಇದುವರೆಗೂ ವಾಪಸ್ ಬಂದಿಲ್ಲ. ಹೀಗಾಗಿ ಕಾರ್ಮಿಕರ ಕೊರತೆಯಿಂದಾಗಿ ಅವಶ್ಯವಿದ್ದಷ್ಟು ಆಭರಣಗಳ ಉತ್ಪಾದನೆ ಹೊರಬರುತ್ತಿಲ್ಲ. ಜೊತೆಗೆ ಆಭರಣಗಳಿಗೆ ಬೇಡಿಕೆಯೂ ಕಡಿಮೆಯಾಗಿದೆ. ಪರಿಣಾಮ ಉದ್ಯಮ ನಷ್ಟ ಎದುರಿಸುತ್ತಿದೆ ಎಂದು ಅವಲತ್ತು ಕೊಂಡಿದ್ದಾರೆ.

Published On - 11:47 am, Sat, 11 July 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ