AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದಂತಹ ಸೂರತ್‌ ಆಭರಣ ಉದ್ಯಮದ ಮೇಲೆ ಕೊರೊನಾ ಕಾರ್ಮೋಡ

ಸೂರತ್: ಕೊರೊನಾ ವೈರಸ್ ಅಪ್ಪಳಿಸಿದ್ದೇ ಬಂತು, ಜಗತ್ತಿನ ದೈನಂದಿನ ಚಟುವಟಿಕೆಯೇ ಅಲ್ಲೋಲ ಕಲ್ಲೋಲವಾಗಿದೆ. ದಿನಗೂಲಿಗಳಿಂದ ಹಿಡಿದು ದೊಡ್ಡ ವ್ಯಾಪಾರಿಗಳು, ಖಾಸಗಿಯಿಂದ ಹಿಡಿದು ಸರ್ಕಾರಿ ನೌಕರರ ಜೀವನವೇ ಏರುಪೇರಾಗಿದೆ. ಹೌದು ಕೊರೊನಾ ಮಹಾಮಾರಿ ಯಾವಾಗ ಪೂರ್ವದಿಂದ ದಾಳಿ ಮಾಡಿತೋ, ಜಗತ್ತಿನ ಚಿತ್ರಣವೇ ಬದಲಾಗಿದೆ. ಇದರ ಘೋರ ಪರಿಣಾಮ ದೇಶದ ಚಿನ್ನ ಮತ್ತು ವಜ್ರಗಳ ವ್ಯಾಪಾರ ರಾಜಧಾನಿಯಂದೇ ಖ್ಯಾತಿಯಾಗಿರುವ ಸೂರತ್ ಮೇಲೂ ಬೀರಿದೆ. ಯಾವಾಗ ದೇಶಾದ್ಯಂತ ಕೊರೊನಾ ವೈರಸ್ ಹಬ್ಬದಂತೆ ತಪ್ಪಿಸಲು ಲಾಕ್ಡೌನ್ ಘೋಷಿಸಲಾಯಿತೋ, ಇಡಿ ಜನಜೀವನವೇ ಅಸ್ತವ್ಯಸ್ತವಾಗಿದೆ. ವ್ಯಾಪಾರ […]

ಚಿನ್ನದಂತಹ ಸೂರತ್‌ ಆಭರಣ ಉದ್ಯಮದ ಮೇಲೆ ಕೊರೊನಾ ಕಾರ್ಮೋಡ
Guru
| Edited By: |

Updated on:Jul 11, 2020 | 2:25 PM

Share

ಸೂರತ್: ಕೊರೊನಾ ವೈರಸ್ ಅಪ್ಪಳಿಸಿದ್ದೇ ಬಂತು, ಜಗತ್ತಿನ ದೈನಂದಿನ ಚಟುವಟಿಕೆಯೇ ಅಲ್ಲೋಲ ಕಲ್ಲೋಲವಾಗಿದೆ. ದಿನಗೂಲಿಗಳಿಂದ ಹಿಡಿದು ದೊಡ್ಡ ವ್ಯಾಪಾರಿಗಳು, ಖಾಸಗಿಯಿಂದ ಹಿಡಿದು ಸರ್ಕಾರಿ ನೌಕರರ ಜೀವನವೇ ಏರುಪೇರಾಗಿದೆ.

ಹೌದು ಕೊರೊನಾ ಮಹಾಮಾರಿ ಯಾವಾಗ ಪೂರ್ವದಿಂದ ದಾಳಿ ಮಾಡಿತೋ, ಜಗತ್ತಿನ ಚಿತ್ರಣವೇ ಬದಲಾಗಿದೆ. ಇದರ ಘೋರ ಪರಿಣಾಮ ದೇಶದ ಚಿನ್ನ ಮತ್ತು ವಜ್ರಗಳ ವ್ಯಾಪಾರ ರಾಜಧಾನಿಯಂದೇ ಖ್ಯಾತಿಯಾಗಿರುವ ಸೂರತ್ ಮೇಲೂ ಬೀರಿದೆ. ಯಾವಾಗ ದೇಶಾದ್ಯಂತ ಕೊರೊನಾ ವೈರಸ್ ಹಬ್ಬದಂತೆ ತಪ್ಪಿಸಲು ಲಾಕ್ಡೌನ್ ಘೋಷಿಸಲಾಯಿತೋ, ಇಡಿ ಜನಜೀವನವೇ ಅಸ್ತವ್ಯಸ್ತವಾಗಿದೆ. ವ್ಯಾಪಾರ ವಹಿವಾಟು ಬಂದ್ ಆಗಿದೆ. ಬೇರೆ ದಾರಿ ಕಾಣದೇ ಬಂಗಾರ ಮತ್ತು ವಜ್ರಗಳ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದ ಪರಿಣತ ಕಾರ್ಮಿಕರು ಕೆಲಸವಿಲ್ಲದೇ ನಿರುದ್ಯೋಗಿಗಳಾಗಿದ್ದಾರೆ. ಪರಿಣಾಮ ಅವರು ತಮ್ಮ ಊರುಗಳಿಗೆ ಹಿಂದಿರುಗಿದ್ದಾರೆ.

ಇದರ ಪರಿಣಾಮ ಈಗ ಸೂರತ್​ನ ಇಡೀ ಚಿನ್ನ ಮತ್ತು ವಜ್ರಗಳ ವಹಿವಾಟಿನ ಮೇಲೆ ಆಗಿದೆ. ಚಿನ್ನದ ಅಂಗಡಿಗಳಲ್ಲಿ ಕೆಲಸ ಮಾಡಲು ಕಾರ್ಮಿಕರಿಲ್ಲದೇ ಸಾಕಷ್ಟು ಕೆಲಸ ಹಾಗೇ ಉಳಿದಿದೆ. ಆಭರಣಗಳ ಕೆತ್ತನೆ ಕೆಲಸ ಮಾಡುವವರೇ ಇಲ್ಲದಂತಾಗಿದೆ. ಲಾಕ್ಡೌನ್ ಓಪನ್ ಮಾಡಿದ್ದರೂ, ವ್ಯಾಪಾರ ಮೊದಲಿನಂತೆ ನಡೆಯುತ್ತಿಲ್ಲ. ಹಾಗೇನೇ ಚಿನ್ನ ಕೊಳ್ಳುವವರ ಸಂಖ್ಯೆಯೂ ಮೊದಲಿನಂತಿಲ್ಲ.

ಈ ಬಗ್ಗೆ ಮಾತನಾಡಿರುವ ಸೂರತ್​ನ ಚಿನ್ನದ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ವಿಜಯ್ ಮಂಗೂಖಿಯಾ, ಲಾಕ್ಡೌನ್ ನಂತರ ಸುಮಾರು ಶೇ.70 ರಷ್ಟು ಕಾರ್ಮಿಕರು ತಮ್ಮ ಊರುಗಳಿಗೆ ಹಿಂದಿರುಗಿದ್ದಾರೆ. ಇದುವರೆಗೂ ವಾಪಸ್ ಬಂದಿಲ್ಲ. ಹೀಗಾಗಿ ಕಾರ್ಮಿಕರ ಕೊರತೆಯಿಂದಾಗಿ ಅವಶ್ಯವಿದ್ದಷ್ಟು ಆಭರಣಗಳ ಉತ್ಪಾದನೆ ಹೊರಬರುತ್ತಿಲ್ಲ. ಜೊತೆಗೆ ಆಭರಣಗಳಿಗೆ ಬೇಡಿಕೆಯೂ ಕಡಿಮೆಯಾಗಿದೆ. ಪರಿಣಾಮ ಉದ್ಯಮ ನಷ್ಟ ಎದುರಿಸುತ್ತಿದೆ ಎಂದು ಅವಲತ್ತು ಕೊಂಡಿದ್ದಾರೆ.

Published On - 11:47 am, Sat, 11 July 20

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ