AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ಮೃತ ದೇಹವನ್ನ ಆಟೋದಲ್ಲೇ ತೆಗೆದುಕೊಂಡು ಹೋದರು

ತೆಲಂಗಾಣ: ಕಿಲ್ಲರ್ ಕೊರೊನಾ ವಿಶ್ವದೆಲ್ಲೆಡೆ ಹಬ್ಬಿ ಮರಣ ಮೃದಂಗ ಬಾರಿಸುತ್ತಿದೆ. ಇದರ ಜೊತೆಗೆ ನೆರೆ ರಾಜ್ಯ ಆಂಧ್ರ ಪ್ರದೇಶದಲ್ಲಿ ಮನಮಿಡಿಯುವ ದೃಶ್ಯ ಕಂಡು ಬಂದಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ನಿಜಾಮಾಬಾದ್ ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ ಕರೆದೊಯ್ಯದ ಘಟನೆ ನಡೆದಿದೆ. ನಿಜಾಮಾಬಾದ್ ಆಸ್ಪತ್ರೆ ಕೊರೊನಾದಿಂದ ಬಲಿಯಾದ 50 ವರ್ಷದ ವ್ಯಕ್ತಿಯ ಶವವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಹಾಗೂ ಯಾವುದೇ ಆಂಬುಲೆನ್ಸ್ ವ್ಯವಸ್ಥೆಯಾಗಲಿ ಅಥವಾ ಸಿಬ್ಬಂದಿಯ ವ್ಯವಸ್ಥೆಯನ್ನು ಆಸ್ಪತ್ರೆ ಮಂಡಳಿ […]

ಸೋಂಕಿತನ ಮೃತ ದೇಹವನ್ನ ಆಟೋದಲ್ಲೇ ತೆಗೆದುಕೊಂಡು ಹೋದರು
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 12, 2020 | 1:03 PM

Share

ತೆಲಂಗಾಣ: ಕಿಲ್ಲರ್ ಕೊರೊನಾ ವಿಶ್ವದೆಲ್ಲೆಡೆ ಹಬ್ಬಿ ಮರಣ ಮೃದಂಗ ಬಾರಿಸುತ್ತಿದೆ. ಇದರ ಜೊತೆಗೆ ನೆರೆ ರಾಜ್ಯ ಆಂಧ್ರ ಪ್ರದೇಶದಲ್ಲಿ ಮನಮಿಡಿಯುವ ದೃಶ್ಯ ಕಂಡು ಬಂದಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ನಿಜಾಮಾಬಾದ್ ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ ಕರೆದೊಯ್ಯದ ಘಟನೆ ನಡೆದಿದೆ.

ನಿಜಾಮಾಬಾದ್ ಆಸ್ಪತ್ರೆ ಕೊರೊನಾದಿಂದ ಬಲಿಯಾದ 50 ವರ್ಷದ ವ್ಯಕ್ತಿಯ ಶವವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಹಾಗೂ ಯಾವುದೇ ಆಂಬುಲೆನ್ಸ್ ವ್ಯವಸ್ಥೆಯಾಗಲಿ ಅಥವಾ ಸಿಬ್ಬಂದಿಯ ವ್ಯವಸ್ಥೆಯನ್ನು ಆಸ್ಪತ್ರೆ ಮಂಡಳಿ ಮಾಡಿಲ್ಲ. ಈ ಬಗ್ಗೆ ಮಂಡಳಿಗೆ ಪ್ರಶ್ನಿಸಿದಾಗ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ನಮ್ಮ ಆಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದವರು.

ಅವರು ತುಂಬಾ ಬೇಡಿಕೊಂಡಿದ್ದರಿಂದ ದೇಹವನ್ನು ಹಸ್ತಾಂತರಿಸಲಾಯಿತು. ನಂತರ ಅವರು ಆಂಬುಲೆನ್ಸ್​ಗೆ ಕಾಯದೆ ಆಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿಯ ಜೊತೆ ಮೃತದೇಹವನ್ನು ಆಟೋ ಮೂಲಕ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಆಸ್ಪತ್ರೆ ವ್ಯವಸ್ಥಾಪಕ ಡಾ.ನಾಗೇಶ್ವರರಾವ್ ಹೇಳಿದ್ರು. ಮೃತ ಕೊರೊನಾ ಸೋಂಕಿತ ವ್ಯಕ್ತಿ ಜೂನ್ 27ರಂದು ನಿಜಾಮಾಬಾದ್ ಆಸ್ಪತ್ರೆಗೆ ದಾಖಲಾಗಿದ್ದ.

Published On - 7:55 am, Sun, 12 July 20

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ