Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus Third Wave: ಸೆಪ್ಟೆಂಬರ್​-ಅಕ್ಟೋಬರ್​ ವೇಳೆಗೆ ಕೊರೊನಾ ಮೂರನೇ ಅಲೆ ಉತ್ತುಂಗಕ್ಕೆ ತಲುಪಲಿದೆ – ಐಐಟಿ ಅಧ್ಯಯನ

Covid 19 Third Wave: ಎರಡನೇ ಅಲೆಯ ಆಧಾರದ ಮೇಲೆ ಮೂರು ಸಾಧ್ಯತೆಗಳನ್ನು ಲೆಕ್ಕ ಹಾಕಲಾಗಿದೆ. ಸದ್ಯ ನಮ್ಮ ಅಂದಾಜಿನ ಪ್ರಕಾರ ದೇಶದಲ್ಲಿ ಜುಲೈ 15ರ ಸುಮಾರಿಗೆ ಸಂಪೂರ್ಣ ಅನ್​ಲಾಕ್​ ಆಗಬಹುದು. ಅದರನ್ವಯ ಮೂರನೇ ಅಲೆ ಸಾಧ್ಯತೆಗಳು ಹೀಗಿವೆ ಎಂದು ತಜ್ಞರು ವಿವರಿಸಿದ್ದಾರೆ.

Coronavirus Third Wave: ಸೆಪ್ಟೆಂಬರ್​-ಅಕ್ಟೋಬರ್​ ವೇಳೆಗೆ ಕೊರೊನಾ ಮೂರನೇ ಅಲೆ ಉತ್ತುಂಗಕ್ಕೆ ತಲುಪಲಿದೆ - ಐಐಟಿ ಅಧ್ಯಯನ
ಸಾಂಕೇತಿಕ ಚಿತ್ರ
Follow us
TV9 Web
| Updated By: Skanda

Updated on:Jun 21, 2021 | 5:09 PM

ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ಅನಿರೀಕ್ಷಿತವಾಗಿ ಅವಾಂತರ ಸೃಷ್ಟಿಸಿ ಈಗ ಇಳಿಕೆಯತ್ತ ಸಾಗುತ್ತಿದೆ. ಮೊದಲ ಅಲೆಗಿಂತಲೂ ಹೆಚ್ಚು ಅಡ್ಡ ಪರಿಣಾಮ ಬೀರಿರುವ ಕೊರೊನಾ ಎರಡನೇ ಅಲೆ ಸಾಕಷ್ಟು ಸಾವು-ನೋವುಗಳನ್ನು ಉಂಟುಮಾಡಿ ಇಡೀ ದೇಶವನ್ನೇ ನಲುಗಿಸಿದೆ. ಆದರೆ, ಇದರ ಆಘಾತವನ್ನು ಅರಗಿಸಿಕೊಳ್ಳುವ ಮುನ್ನವೇ ತಜ್ಞರು ಕೊರೊನಾ ಮೂರನೇ ಅಲೆಯ ಸಾಧ್ಯತೆಗಳನ್ನು ತೆರೆದಿಟ್ಟಿದ್ದಾರೆ. ಇಂದು (ಜೂನ್ 21) ಕಾನ್ಪುರದ ಐಐಟಿ ಪ್ರಕಟಿಸಿದ ಅಧ್ಯಯನದಲ್ಲಿ ಸೆಪ್ಟೆಂಬರ್​-ಅಕ್ಟೋಬರ್ ವೇಳೆಯಲ್ಲಿ ಕೊವಿಡ್​ 19 ಮೂರನೇ ಅಲೆ ಉಚ್ಛ್ರಾಯ ಸ್ಥಿತಿಗೆ ತಲುಪಲಿದೆ ಎಂಬ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ. ಈ ಬಗ್ಗೆ ಅಧ್ಯಯನ ಮಾಡಿರುವ ಪ್ರೊ. ರಾಜೇಶ್ ರಂಜನ್ ಹಾಗೂ ಮಹೇಂದ್ರ ವರ್ಮ ಸದರಿ ವಿಚಾರದ ಕುರಿತಾದ ಮಾಹಿತಿ ನೀಡಿದ್ದಾರೆ.

ಕೊರೊನಾ ಎರಡನೇ ಅಲೆಯ ಹೊಡೆತ ಅನುಭವಿಸಿರುವ ಆಡಳಿತ ವರ್ಗ ಹಾಗೂ ಸಾರ್ವಜನಿಕರಲ್ಲಿ ಮೂರನೇ ಅಲೆ ಬಗ್ಗೆ ಸಹಜವಾಗಿಯೇ ಆತಂಕ ಸೃಷ್ಟಿಯಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನಾವು ವೈಜ್ಞಾನಿಕವಾಗಿ ಅಧ್ಯಯನ ನಡೆಸಿದ್ದೇವೆ. ಎರಡನೇ ಅಲೆಯ ಆಧಾರದ ಮೇಲೆ ಮೂರು ಸಾಧ್ಯತೆಗಳನ್ನು ಲೆಕ್ಕ ಹಾಕಲಾಗಿದೆ. ಸದ್ಯ ನಮ್ಮ ಅಂದಾಜಿನ ಪ್ರಕಾರ ದೇಶದಲ್ಲಿ ಜುಲೈ 15ರ ಸುಮಾರಿಗೆ ಸಂಪೂರ್ಣ ಅನ್​ಲಾಕ್​ ಆಗಬಹುದು. ಅದರನ್ವಯ ಮೂರನೇ ಅಲೆ ಸಾಧ್ಯತೆಗಳು ಹೀಗಿವೆ ಎಂದು ಅದನ್ನು ವಿವರಿಸಿದ್ದಾರೆ.

ಸಾಧ್ಯತೆ 1: ಸಹಜತೆಯತ್ತ ಮರಳಿದರೆ – ಮೂರನೇ ಅಲೆ ಅಕ್ಟೋಬರ್​ ತಿಂಗಳಲ್ಲಿ ಉಚ್ಛ್ರಾಯ ಸ್ಥಿತಿಗೆ ತಲುಪಲಿದೆ. ಆದರೆ, ಆ ಹಂತದಲ್ಲಿ ಅದು ಉಂಟುಮಾಡುವ ಪರಿಣಾಮಗಳು ಎರಡನೇ ಅಲೆಗಿಂತ ಕೊಂಚ ಕಡಿಮೆ ಇರಲಿದೆ.

ಸಾಧ್ಯತೆ 2: ಸಹಜ ಪರಿಸ್ಥಿತಿ ಇದ್ದು ವೈರಸ್​ ರೂಪಾಂತರಗೊಂಡರೆ – ಮೂರನೇ ಅಲೆ ಉತ್ತುಂಗಕ್ಕೆ ತಲುಪುವಾಗ ಹೆಚ್ಚು ಗಂಭೀರ ಪರಿಸ್ಥಿತಿ ನಿರ್ಮಾಣವಾಗಬಹುದು. ಇದು ಎರಡನೇ ಅಲೆಗಿಂತಲೂ ಅಧಿಕ ಪರಿಣಾಮ ಬೀರುವ ಸಾಧ್ಯತೆಯಿದ್ದು, ಸೆಪ್ಟೆಂಬರ್​ನಲ್ಲೇ ಇದು ಉಂಟಾಗುವ ಸಾಧ್ಯತೆಯಿದೆ.

ಸಾಧ್ಯತೆ 3: ಕಠಿಣ ನಿಯಮಾವಳಿಗಳ ಪಾಲನೆಯಾದರೆ – ಮೂರನೇ ಅಲೆ ಉತ್ತುಂಗಕ್ಕೆ ತಲುಪುವ ಸಮಯ ವಿಳಂಬಗೊಳ್ಳಲಿದೆ. ಅಂದರೆ, ಕಠಿಣ ಸಾಮಾಜಿಕ ಅಂತರ ಹಾಗೂ ನಿಯಮ ಪಾಲನೆ ಮಾಡಿದಲ್ಲಿ ಅಕ್ಟೋಬರ್ ಅಂತ್ಯದ ಸುಮಾರಿಗೆ ಮೂರನೇ ಅಲೆಯ ತೀವ್ರತೆ ಕಾಣಿಸಬಹುದು. ಆದರೆ, ಅದು ಎರಡನೇ ಅಲೆಗಿಂತಲೂ ಕಡಿಮೆ ಪ್ರಮಾಣದಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ.

ಈ ಮೂರು ಸಾಧ್ಯತೆಗಳನ್ನು ಐಐಟಿ ಅಧ್ಯಯನಕಾರರು ತೆರೆದಿಟ್ಟಿದ್ದು, ಮೂರನೇ ಅಲೆ ಉಂಟಾಗುವುದಂತೂ ಸ್ಪಷ್ಟವಾಗಿದೆ. ಇದರಲ್ಲಿ ಇನ್ನೊಂದು ಗಮನಾರ್ಹ ಅಂಶವೆಂದರೆ ಸಾಧ್ಯತೆಗಳ ಪಟ್ಟಿಯಲ್ಲಿ ಲಸಿಕೆಯನ್ನು ಕೈ ಬಿಡಲಾಗಿದ್ದು, ಒಂದು ವೇಳೆ ಲಸಿಕೆ ವಿತರಣೆಯು ಇನ್ನಷ್ಟು ವೇಗ ಪಡೆದು ಎಲ್ಲರನ್ನೂ ತಲುಪಿದಲ್ಲಿ ಮೂರನೇ ಅಲೆ ಪ್ರಭಾವ ಗಣನೀಯವಾಗಿ ತಗ್ಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.

ಮೇಲ್ಕಾಣಿಸಿದ ಅಧ್ಯಯನಗಳ ಅಂಶಗಳ ಪೈಕಿ ಕೊರೊನಾ ವೈರಾಣು ರೂಪಾಂತರಗೊಂಡರೆ ಗಂಭೀರ ಪರಿಣಾಮ ಉಂಟಾಗಲಿದೆ ಎನ್ನುವುದು ಚಿಂತಿಸಲೇಬೇಕಾದ ವಿಷಯವಾಗಿದೆ. ಈಗಾಗಲೇ ಡೆಲ್ಟಾ, ಡೆಲ್ಟಾ ಪ್ಲಸ್ ಪ್ರಬೇಧಗಳು ಬಲಗೊಂಡಿವೆ ಎಂದು ಹೇಳಲಾಗಿರುವುದರಿಂದ ಇದಕ್ಕಿಂತಲೂ ಬಲಾಢ್ಯ ರೂಪಾಂತರಿ ವೈರಾಣು ಬಂದರೆ ನಿರ್ವಹಣೆ ಕಷ್ಟವಾಗಬಹುದು. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಅನ್​ಲಾಕ್​ ಆದರೂ ಕೊರೊನಾ ನಿಯಮಾವಳಿಗಳನ್ನು ಪಾಲಿಸುವುದು ಹಾಗೂ ಲಸಿಕೆ ತೆಗೆದುಕೊಳ್ಳುವುದು ಈ ಎರಡು ಅಂಶಗಳಿಗೆ ಜನರು ಪ್ರಾಧಾನ್ಯತೆ ನೀಡಲೇಬೇಕಾದ ಅನಿವಾರ್ಯತೆ ಇದೆ.

ಇದನ್ನೂ ಓದಿ: Covid-19 ಕೊವಿಡ್ ಮೂರನೇ ಅಲೆ ಎದುರಿಸಲು ಭಾರತ ಹೇಗೆ ಸಿದ್ಧತೆ ನಡೆಸಬಹುದು? 

ಕೊರೊನಾ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಪರಿಣಾಮ ಬೀರುತ್ತದೆ ಎಂಬುದಕ್ಕೆ ಸಾಕಷ್ಟು ಪುರಾವೆಗಳಿಲ್ಲ: ಡಾ.ರಣದೀಪ್​ ಗುಲೇರಿಯಾ

Published On - 5:07 pm, Mon, 21 June 21

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ