AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಇಂದಿನಿಂದ ಹೊಸ ಹಂತದ ಲಸಿಕೆ ಅಭಿಯಾನ; 15-18 ವರ್ಷದವರಿಗೆ ಕೊವ್ಯಾಕ್ಸಿನ್ ವ್ಯಾಕ್ಸಿನ್​​ ನೀಡಿಕೆ ಪ್ರಾರಂಭ

ಸದ್ಯ ದೇಶಾದ್ಯಂತ ಇರುವ ಕೊವಿಡ್​ 19 ಲಸಿಕಾ ಕೇಂದ್ರಗಳಲ್ಲಿಯೇ ಇಂದಿನಿಂದ 15-18ವರ್ಷದವರೆಗಿನವರಿಗೆ ಕೂಡ ಕೊರೊನಾ ಲಸಿಕೆ ನೀಡಲಾಗುತ್ತದೆ. ಆದರೆ ಮಕ್ಕಳಿಗಾಗಿ ಪ್ರತ್ಯೇಕ ಕೇಂದ್ರವನ್ನೂ ನಿರ್ಮಿಸಿಕೊಳ್ಳಬಹುದು ಎಂದೂ ಕೇಂದ್ರ ಸರ್ಕಾರ ತಿಳಿಸಿದೆ.

ದೇಶದಲ್ಲಿ ಇಂದಿನಿಂದ ಹೊಸ ಹಂತದ ಲಸಿಕೆ ಅಭಿಯಾನ; 15-18 ವರ್ಷದವರಿಗೆ ಕೊವ್ಯಾಕ್ಸಿನ್ ವ್ಯಾಕ್ಸಿನ್​​ ನೀಡಿಕೆ ಪ್ರಾರಂಭ
ಕೊವ್ಯಾಕ್ಸಿನ್​
TV9 Web
| Edited By: |

Updated on:Jan 03, 2022 | 7:47 AM

Share

ದೇಶದಲ್ಲಿ ಇಂದು ಮತ್ತೊಂದು ಹಂತದ ಕೊವಿಡ್​ 19 ಲಸಿಕೆ ಅಭಿಯಾನ ಶುರುವಾಗುತ್ತಿದೆ. 15-18ವರ್ಷದವರಿಗೆ ಇಂದಿನಿಂದ ಕೊವ್ಯಾಕ್ಸಿನ್​​ ಲಸಿಕೆ (Covaxin Vaccine) ನೀಡಲು ದೇಶಾದ್ಯಂತ ಸಿದ್ಧತೆಗಳು ನಡೆದಿವೆ. ಜ.1ರಿಂದಲೇ ಕೊವಿನ್​ ಪೋರ್ಟಲ್​​ನಲ್ಲಿ ನೋಂದಣಿ ಮಾಡಿಕೊಳ್ಳುವ ಅವಕಾಶ ನೀಡಲಾಗಿತ್ತು. ಹೀಗಾಗಿ ಭಾನುವಾರ ಸಂಜೆ ಹೊತ್ತಿಗೆ ಕೊವಿಡ್​ 19 ಲಸಿಕೆಗಾಗಿ ಕೊವಿನ್​ ಆ್ಯಪ್(CoWin Portal)​​ನಲ್ಲಿ 6.35 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಈ ವಯಸ್ಸಿನವರಿಗೆ ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಲಸಿಕೆ ಮಾತ್ರ ನೀಡಲಾಗುತ್ತದೆ. ಯಾಕೆಂದರೆ 15-18 ವಯಸ್ಸಿನವರಿಗೆ ತುರ್ತು ಬಳಕೆಗೆ ಕೊವ್ಯಾಕ್ಸಿನ್​ ಬಿಟ್ಟು ಇನ್ಯಾವುದೇ ಲಸಿಕೆಗೂ ಅನುಮೋದನೆ ಸಿಕ್ಕಿಲ್ಲ. ಇಂದಿನಿಂದ ಶುರುವಾಗುತ್ತಿರುವ ಹೊಸ ಹಂತದ ಲಸಿಕಾ ಅಭಿಯಾನಕ್ಕಾಗಿ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ, ಅಲ್ಲಿನ ಜನಸಂಖ್ಯೆ ಆಧಾರದ ಮೇಲೆ ಹೆಚ್ಚುವರಿಯಾಗಿ ಕೊವ್ಯಾಕ್ಸಿನ್​ ಲಸಿಕೆ ಕಳಿಸಿಕೊಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.   

15-18 ವರ್ಷದವರಿಗಿನ ಎಲ್ಲರೂ ಕೊವಿಡ್​ 19 ಲಸಿಕೆಯನ್ನು ಈ ಹಂತದಲ್ಲಿ ಪಡೆಯಬಹುದು. 15 ವರ್ಷವಾಗಿದೆಯಾ ಎಂಬ ಬಗ್ಗೆ ಯಾವುದೇ ಗೊಂದಲ ಬೇಡ. 2007ನೇ ಇಸ್ವಿಯಲ್ಲಿ ಜನಿಸಿದ ಎಲ್ಲರೂ ಕೊರೊನಾ ಲಸಿಕೆಯನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.  ಇದೀಗ ವಯಸ್ಕರಿಗೆ ನೀಡಲಾಗುತ್ತಿರುವ ಕೇಂದ್ರದಲ್ಲೇ ಮಕ್ಕಳಿಗೆ ಕೊವ್ಯಾಕ್ಸಿನ್ ನೀಡಿದರೆ ಸ್ವಲ್ಪ ಗೊಂದಲ ಆಗಬಹುದು. ಹಾಗಾಗಿ ಅವರಿಗೆ ಕೊವಿಡ್​ 19 ಲಸಿಕೆ ನೀಡಲು ಪ್ರತ್ಯೇಕ ತಂಡ ಇರಬೇಕು. 15-18 ವರ್ಷದವರು ಪ್ರತ್ಯೇಕ ಸಾಲುಗಳಲ್ಲಿಯೇ ನಿಲ್ಲಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಎಲ್ಲಿ ಲಸಿಕೆ ಪಡೆಯಬಹದು ಸದ್ಯ ದೇಶಾದ್ಯಂತ ಇರುವ ಕೊವಿಡ್​ 19 ಲಸಿಕಾ ಕೇಂದ್ರಗಳಲ್ಲಿಯೇ ಇಂದಿನಿಂದ 15-18ವರ್ಷದವರೆಗಿನವರಿಗೆ ಕೂಡ ಕೊರೊನಾ ಲಸಿಕೆ ನೀಡಲಾಗುತ್ತದೆ. ಆದರೆ ಮಕ್ಕಳಿಗಾಗಿ ಪ್ರತ್ಯೇಕ ಕೇಂದ್ರವನ್ನೂ ನಿರ್ಮಿಸಿಕೊಳ್ಳಬಹುದು ಎಂದೂ ಕೇಂದ್ರ ಸರ್ಕಾರ ತಿಳಿಸಿದೆ. ಹಾಗಾಗಿ, ಸ್ಥಳೀಯ ಆಡಳಿತಗಳು ಎಲ್ಲಿ ವ್ಯವಸ್ಥೆ ಮಾಡಿವೆ ಎಂಬುದನ್ನು ಅವರೇ ತಿಳಿಸುತ್ತಾರೆ. ವಿವಿಧ ವಯೋಮಾನಗಳವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಅದರಲ್ಲಿ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಈಗಿರುವ ಕೊರೊನಾ ಲಸಿಕೆ ಕೇಂದ್ರದಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ಕ್ಯೂ ಮಾಡಲು ಹೇಳಲಾಗಿದೆ.   ಇನ್ನುಳಿದಂತೆ ವಯಸ್ಕರ ಕೊವಿಡ್​ 19 ಲಸಿಕೆ ಅಭಿಯಾನಕ್ಕಾಗಿ ಮಾಡಲಾದಂಥ ವ್ಯವಸ್ಥೆಗಳನ್ನೆಲ್ಲ ಮಾಡಲಾಗಿದೆ.

ಇದನ್ನೂ ಓದಿ: ನವೀಕರಣಗೊಂಡ ಕಾಶಿ ವೈಭವ ನೋಡಲು ಹೊಸವರ್ಷದ ಮೊದಲ ದಿನ 5 ಲಕ್ಷಕ್ಕೂ ಅಧಿಕ ಭಕ್ತರ ಭೇಟಿ; ಶಿವರಾತ್ರಿಯಲ್ಲೂ ಇಷ್ಟು ಜನರು ಬಂದಿರಲಿಲ್ಲ !

Published On - 7:33 am, Mon, 3 January 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?