AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್​ ಬಯೋಟೆಕ್​ ಕೊರೊನಾ ಲಸಿಕೆ ಬಗ್ಗೆ ಹೆಚ್ಚಿದ ವಿಶ್ವಾಸ: ಕೊವ್ಯಾಕ್ಸಿನ್ ಶೀಘ್ರದಲ್ಲೇ ವಿತರಣೆ?

3 ತಿಂಗಳ ಹಿಂದೆ ಮೊದಲ ಹಂತದ ಕೊವ್ಯಾಕ್ಸಿನ್ ಪರೀಕ್ಷೆಗೆ ಒಳಪಟ್ಟವರಲ್ಲಿ ಟಿ-ಸೆಲ್​ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು, ರೋಗ ನಿರೋಧಕ ಶಕ್ತಿಯೂ ಅಭಿವೃದ್ಧಿ ಹೊಂದಿದೆ. ಎರಡನೇ ಹಂತದ ಪರೀಕ್ಷೆಗೆ ಒಳಪಟ್ಟ ವ್ಯಕ್ತಿಗಳಲ್ಲಿಯೂ ಕೊವ್ಯಾಕ್ಸಿನ್​ ಉತ್ತಮ ಪರಿಣಾಮ ಬೀರಿದೆ. ಈ ಫಲಿಂತಾಶಗಳನ್ನು ಗಮನಿಸಿದ ಭಾರತ್ ಬಯೋಟೆಕ್ ಕೊವ್ಯಾಕ್ಸಿನ್​ ಕುರಿತು ವಿಶ್ವಾಸ ವ್ಯಕ್ತಪಡಿಸಿದೆ.

ಭಾರತ್​ ಬಯೋಟೆಕ್​ ಕೊರೊನಾ ಲಸಿಕೆ ಬಗ್ಗೆ ಹೆಚ್ಚಿದ ವಿಶ್ವಾಸ: ಕೊವ್ಯಾಕ್ಸಿನ್ ಶೀಘ್ರದಲ್ಲೇ ವಿತರಣೆ?
ಪ್ರಾತಿನಿಧಿಕ ಚಿತ್ರ
Skanda
|

Updated on:Dec 24, 2020 | 1:07 PM

Share

ಹೈದರಾಬಾದ್: ಭಾರತ್​ ಬಯೋಟೆಕ್​ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೊರೊನಾ ಲಸಿಕೆ ಕೊವ್ಯಾಕ್ಸಿನ್​ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ತಜ್ಞರು ಅಭಿಮತ ವ್ಯಕ್ತಪಡಿಸಿದ್ದಾರೆ. 3 ತಿಂಗಳ ಹಿಂದೆ ಮೊದಲ ಹಂತದ ಕೊವ್ಯಾಕ್ಸಿನ್ ಪರೀಕ್ಷೆಗೆ ಒಳಪಟ್ಟವರಲ್ಲಿ ಟಿ-ಸೆಲ್​ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು, ರೋಗ ನಿರೋಧಕ ಶಕ್ತಿಯೂ ಅಭಿವೃದ್ಧಿ ಹೊಂದಿರುವುದು ಸಾಬೀತಾಗಿದೆ.

ಅಂತೆಯೇ, ಎರಡನೇ ಹಂತದ ಪರೀಕ್ಷೆಗೆ ಒಳಪಟ್ಟ ವ್ಯಕ್ತಿಗಳಲ್ಲಿಯೂ ಕೊವ್ಯಾಕ್ಸಿನ್​ ಉತ್ತಮ ಪರಿಣಾಮ ಬೀರಿದೆ. ಈ ಫಲಿಂತಾಶಗಳನ್ನು ಗಮನಿಸಿದ ಭಾರತ್ ಬಯೋಟೆಕ್ ಕೊವ್ಯಾಕ್ಸಿನ್​ ಕುರಿತು ವಿಶ್ವಾಸ ವ್ಯಕ್ತಪಡಿಸಿದೆ. ನಮ್ಮ ಸಂಸ್ಥೆ ತಯಾರಿಸಿದ ಕೊರೊನಾ ಲಸಿಕೆ ಪಡೆದವರ ದೇಹದಲ್ಲಿ ಕನಿಷ್ಠ 6ರಿಂದ 12 ತಿಂಗಳ ಕಾಲ ಕೊರೊನಾ ವಿರುದ್ಧ ಹೋರಾಡುವ ರೋಗ ನಿರೋಧಕ ಶಕ್ತಿ ಉಳಿಯಲಿದೆ ಎಂದು ಸಂಶೋಧನಾ ಪತ್ರದಲ್ಲಿ ತಿಳಿಸಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತು ನ್ಯಾಶನಲ್​ ಇನ್​​ಸ್ಟಿಟ್ಯೂಟ್​ ಆಫ್​ ವೈರಾಲಜಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಕೊವ್ಯಾಕ್ಸಿನ್​ ಲಸಿಕೆ ಸದ್ಯ 3ನೇ ಹಂತದ ಪರೀಕ್ಷೆಗೆ ಒಳಪಟ್ಟಿದೆ. ಈ ಲಸಿಕೆಯು ಅತ್ಯಂತ ಪರಿಣಾಮಕಾರಿ ಎಂದು ಕಂಡುಬರುತ್ತಿರುವುದರಿಂದ ಬೇಡಿಕೆ ಹೆಚ್ಚುವ ಸಾಧ್ಯತೆಯೂ ಇದೆ ಎಂಬ ವಿಶ್ಲೇಷಣೆಗಳು ಈಗಾಗಲೇ ಕೇಳಿ ಬರುತ್ತಿವೆ.

ಕೊರೊನಾ ಲಸಿಕೆಗಾಗಿ ಆರೋಬಿಂದೋ ಮತ್ತು ಅಮೆರಿಕಾ ಸಂಸ್ಥೆಯ ಒಪ್ಪಂದ ಇನ್ನೊಂದೆಡೆ, ಕೊರೊನಾ ಲಸಿಕೆ ತಯಾರಿಸಲು ಆರೋಬಿಂದೋ ಫಾರ್ಮಾ ಸಂಸ್ಥೆಯ ಜೊತೆ ಅಮೆರಿಕಾದ ಔಷಧ ತಯಾರಿಕಾ ಸಂಸ್ಥೆ ಕೈಜೋಡಿಸಲು ಮುಂದಾಗಿದೆ. ಈ ಎರಡೂ ಸಂಸ್ಥೆಗಳು ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಲಿವೆ. ಈ ಮೂಲಕ ಆರೋಬಿಂದೋ ಫಾರ್ಮಾ (ಲಿ) ಮತ್ತು ಅಮೆರಿಕಾ ಮೂಲದ ಸಂಸ್ಥೆ ಯುಬಿ-612 ಲಸಿಕೆಯನ್ನು ಕೊರೊನಾ ವಿರುದ್ಧ ಹೋರಾಡಲು ತಯಾರಿಸಲಿವೆ ಎಂದು ಆರೋಬಿಂದೋ ಸಂಸ್ಥೆಯ ಮುಖ್ಯಸ್ಥ ಎನ್​.ಗೋವಿಂದರಾಜನ್​ ತಿಳಿಸಿದ್ದಾರೆ.

ಕೊವಿಡ್​ನಿಂದ ಗುಣಮುಖರಾದವರಿಗೂ ಲಸಿಕೆ ಅಗತ್ಯವಿದೆ: ಭಾರತ್​ ಬಯೋಟೆಕ್​ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಎಲ್ಲಾ

Published On - 11:35 am, Thu, 24 December 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!