AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Vaccine: 2-18 ವರ್ಷದ ಮಕ್ಕಳಿಗೆ ಕೊವ್ಯಾಕ್ಸಿನ್​; ವೈದ್ಯಕೀಯ ಪರೀಕ್ಷೆ ಚುರುಕುಗೊಳಿಸಲು ಭಾರತ್ ಬಯೋಟೆಕ್​ಗೆ ತಜ್ಞರ ಸಲಹೆ

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ತಯಾಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ನೀಡಲು ಅಡ್ಡಿಯಿಲ್ಲವೇ ಎಂದು ತಿಳಿಯಲು 2 ಹಾಗೂ 3ನೇ ಹಂತದ ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ.

Corona Vaccine: 2-18 ವರ್ಷದ ಮಕ್ಕಳಿಗೆ ಕೊವ್ಯಾಕ್ಸಿನ್​; ವೈದ್ಯಕೀಯ ಪರೀಕ್ಷೆ ಚುರುಕುಗೊಳಿಸಲು ಭಾರತ್ ಬಯೋಟೆಕ್​ಗೆ ತಜ್ಞರ ಸಲಹೆ
ಪ್ರಾತಿನಿಧಿಕ ಚಿತ್ರ
Skanda
|

Updated on: May 12, 2021 | 11:02 AM

Share

ದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಸೋಂಕು ಹಬ್ಬುವಿಕೆ ಹೆಚ್ಚಾಗಿದ್ದು, ಇನ್ನು ಕೆಲ ತಿಂಗಳ ಬಳಿಕ ಮೂರನೇ ಅಲೆ ಬರುವ ಸಾಧ್ಯತೆಯೂ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಮೂರನೇ ಅಲೆಯಲ್ಲಿ ಮಕ್ಕಳು ಹೆಚ್ಚು ತೊಂದರೆ ಅನುಭವಿಸುವ ಸಾಧ್ಯತೆ ಇದೆ ಎಂಬ ಆತಂಕವನ್ನೂ ಕೆಲವರು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂದಿನ ಸನ್ನಿವೇಶಗಳನ್ನು ಎದುರಿಸಲು ಸಜ್ಜಾಗಿರಬೇಕಾದ ಅನಿವಾರ್ಯತೆ ಎದುರಾಗಿದ್ದು, ಈ ನಿಟ್ಟಿನಲ್ಲಿ 2 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಎರಡು ಹಾಗೂ ಮೂರನೇ ಹಂತದ ವೈದ್ಯಕೀಯ ಪರೀಕ್ಷೆ ಆರಂಭಿಸುವಂತೆ ತಜ್ಞರ ಸಮಿತಿ ಭಾರತ್ ಬಯೋಟೆಕ್ ಸಂಸ್ಥೆಗೆ ಸಲಹೆ ನೀಡಿದೆ.

ವೈದ್ಯಕೀಯ ಪರೀಕ್ಷೆಯು ದೆಹಲಿ ಹಾಗೂ ಪಾಟ್ನಾದ AIIMS ಹಾಗೂ ನಾಗ್ಪುರದ ಮೆಡಿತ್ರಿನ ವೈದ್ಯಕೀಯ ವಿಜ್ಞಾನದ ಸಂಸ್ಥೆ ಸೇರಿದಂತೆ ವಿವಿಧೆಡೆ ನಡೆಯಲಿದ್ದು 525 ವಿಚಾರಗಳತ್ತ ಗಮನ ಹರಿಸಲಾಗುವುದು ಎಂದು ತಜ್ಞರು ತಿಳಿಸಿದ್ದಾರೆ. ಸದ್ಯ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ತಯಾಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ನೀಡಲು ಅಡ್ಡಿಯಿಲ್ಲವೇ ಎಂದು ತಿಳಿಯಲು 2 ಹಾಗೂ 3ನೇ ಹಂತದ ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ.

ಜನವರಿ 16, 2021ರಿಂದ ಭಾರತದಲ್ಲಿ ಸೆರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿದ ಕೊವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಲಸಿಕೆಯನ್ನು 55 ವರ್ಷ ಮೇಲ್ಪಟ್ಟವರಿಗೆ ಹಾಗೂ ಫ್ರಂಟ್​ಲೈನ್ ವಾರಿಯರ್ಸ್​ಗೆ ನೀಡಲಾಗುತ್ತಿದ್ದು, ಮೇ 1 ರಿಂದ 18-44 ವರ್ಷದವರಿಗೂ ಲಸಿಕೆ ವಿತರಣೆ ಆರಂಭವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಲಸಿಕೆಯ ಕೊರತೆ ಉಂಟಾಗಿರುವುದರಿಂದ ಅಭಿಯಾನಕ್ಕೆ ಹಿನ್ನೆಡೆ ಉಂಟಾಗುತ್ತಿದೆ.

ಇದನ್ನೂ ಓದಿ: ದೇಶದ ಎಲ್ಲಾ ನಾಗರಿಕರಿಗೆ ಲಸಿಕೆ ಕೊಟ್ಟು ಮುಗಿಸಬೇಕು ಎಂದರೆ ಎಷ್ಟು ದಿನ ಬೇಕು? ಇಲ್ಲಿದೆ ನೋಡಿ ವಿವರ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ