AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Vaccine: 2-18 ವರ್ಷದ ಮಕ್ಕಳಿಗೆ ಕೊವ್ಯಾಕ್ಸಿನ್​; ವೈದ್ಯಕೀಯ ಪರೀಕ್ಷೆ ಚುರುಕುಗೊಳಿಸಲು ಭಾರತ್ ಬಯೋಟೆಕ್​ಗೆ ತಜ್ಞರ ಸಲಹೆ

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ತಯಾಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ನೀಡಲು ಅಡ್ಡಿಯಿಲ್ಲವೇ ಎಂದು ತಿಳಿಯಲು 2 ಹಾಗೂ 3ನೇ ಹಂತದ ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ.

Corona Vaccine: 2-18 ವರ್ಷದ ಮಕ್ಕಳಿಗೆ ಕೊವ್ಯಾಕ್ಸಿನ್​; ವೈದ್ಯಕೀಯ ಪರೀಕ್ಷೆ ಚುರುಕುಗೊಳಿಸಲು ಭಾರತ್ ಬಯೋಟೆಕ್​ಗೆ ತಜ್ಞರ ಸಲಹೆ
ಪ್ರಾತಿನಿಧಿಕ ಚಿತ್ರ
Skanda
|

Updated on: May 12, 2021 | 11:02 AM

Share

ದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಸೋಂಕು ಹಬ್ಬುವಿಕೆ ಹೆಚ್ಚಾಗಿದ್ದು, ಇನ್ನು ಕೆಲ ತಿಂಗಳ ಬಳಿಕ ಮೂರನೇ ಅಲೆ ಬರುವ ಸಾಧ್ಯತೆಯೂ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಮೂರನೇ ಅಲೆಯಲ್ಲಿ ಮಕ್ಕಳು ಹೆಚ್ಚು ತೊಂದರೆ ಅನುಭವಿಸುವ ಸಾಧ್ಯತೆ ಇದೆ ಎಂಬ ಆತಂಕವನ್ನೂ ಕೆಲವರು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂದಿನ ಸನ್ನಿವೇಶಗಳನ್ನು ಎದುರಿಸಲು ಸಜ್ಜಾಗಿರಬೇಕಾದ ಅನಿವಾರ್ಯತೆ ಎದುರಾಗಿದ್ದು, ಈ ನಿಟ್ಟಿನಲ್ಲಿ 2 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಎರಡು ಹಾಗೂ ಮೂರನೇ ಹಂತದ ವೈದ್ಯಕೀಯ ಪರೀಕ್ಷೆ ಆರಂಭಿಸುವಂತೆ ತಜ್ಞರ ಸಮಿತಿ ಭಾರತ್ ಬಯೋಟೆಕ್ ಸಂಸ್ಥೆಗೆ ಸಲಹೆ ನೀಡಿದೆ.

ವೈದ್ಯಕೀಯ ಪರೀಕ್ಷೆಯು ದೆಹಲಿ ಹಾಗೂ ಪಾಟ್ನಾದ AIIMS ಹಾಗೂ ನಾಗ್ಪುರದ ಮೆಡಿತ್ರಿನ ವೈದ್ಯಕೀಯ ವಿಜ್ಞಾನದ ಸಂಸ್ಥೆ ಸೇರಿದಂತೆ ವಿವಿಧೆಡೆ ನಡೆಯಲಿದ್ದು 525 ವಿಚಾರಗಳತ್ತ ಗಮನ ಹರಿಸಲಾಗುವುದು ಎಂದು ತಜ್ಞರು ತಿಳಿಸಿದ್ದಾರೆ. ಸದ್ಯ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ತಯಾಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ನೀಡಲು ಅಡ್ಡಿಯಿಲ್ಲವೇ ಎಂದು ತಿಳಿಯಲು 2 ಹಾಗೂ 3ನೇ ಹಂತದ ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ.

ಜನವರಿ 16, 2021ರಿಂದ ಭಾರತದಲ್ಲಿ ಸೆರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿದ ಕೊವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಲಸಿಕೆಯನ್ನು 55 ವರ್ಷ ಮೇಲ್ಪಟ್ಟವರಿಗೆ ಹಾಗೂ ಫ್ರಂಟ್​ಲೈನ್ ವಾರಿಯರ್ಸ್​ಗೆ ನೀಡಲಾಗುತ್ತಿದ್ದು, ಮೇ 1 ರಿಂದ 18-44 ವರ್ಷದವರಿಗೂ ಲಸಿಕೆ ವಿತರಣೆ ಆರಂಭವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಲಸಿಕೆಯ ಕೊರತೆ ಉಂಟಾಗಿರುವುದರಿಂದ ಅಭಿಯಾನಕ್ಕೆ ಹಿನ್ನೆಡೆ ಉಂಟಾಗುತ್ತಿದೆ.

ಇದನ್ನೂ ಓದಿ: ದೇಶದ ಎಲ್ಲಾ ನಾಗರಿಕರಿಗೆ ಲಸಿಕೆ ಕೊಟ್ಟು ಮುಗಿಸಬೇಕು ಎಂದರೆ ಎಷ್ಟು ದಿನ ಬೇಕು? ಇಲ್ಲಿದೆ ನೋಡಿ ವಿವರ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ