AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 16ರ ಬಳಿಕ ಕೊವಿಡ್ ಲಸಿಕೆ ವಿತರಣೆ: ಕೊವ್ಯಾಕ್ಸಿನ್ ಪಡೆಯಲು ಕಾಂಗ್ರೆಸ್‌ ವಿರೋಧ

ಸಂಕ್ರಾಂತಿ ಬಳಿಕ ಕೊವಿಡ್ ಲಸಿಕೆ ವಿತರಣೆಯಾಗುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸೆರಮ್ ಸಂಸ್ಥೆ ಹಾಗೂ ಭಾರತ್ ಬಯೋಟೆಕ್ ಕಂಪೆನಿಗಳ ಕೊವಿಡ್ ಲಸಿಕೆ ಸಂಕ್ರಾಂತಿ ಬಳಿಕ ವಿತರಣೆಯಾಗಲಿದೆ.

ಜನವರಿ 16ರ ಬಳಿಕ ಕೊವಿಡ್ ಲಸಿಕೆ ವಿತರಣೆ: ಕೊವ್ಯಾಕ್ಸಿನ್ ಪಡೆಯಲು ಕಾಂಗ್ರೆಸ್‌ ವಿರೋಧ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 9:12 PM

Share

ದೆಹಲಿ: ಭಾರತದಲ್ಲಿ ಜನವರಿ 16ರಿಂದ ಕೊವಿಡ್ ಲಸಿಕೆ ವಿತರಣೆಯಾಗಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸೆರಮ್ ಸಂಸ್ಥೆ ಹಾಗೂ ಭಾರತ್ ಬಯೋಟೆಕ್ ಕಂಪೆನಿಗಳ ಕೊವಿಡ್ ಲಸಿಕೆ ಸಂಕ್ರಾಂತಿ ಬಳಿಕ ವಿತರಣೆಯಾಗಲಿದೆ. ಸೆರಮ್ ಸಂಸ್ಥೆ ಹೆಚ್ಚಿನ ಲಸಿಕೆ ಉತ್ಪಾದನಾ ಸಾಮರ್ಥ್ಯ ಹೊಂದಿದೆ. ಸೆರಮ್, ಈಗಾಗಲೇ 4-5 ಕೋಟಿ ಡೋಸ್ ಲಸಿಕೆ ಸಂಗ್ರಹ ಮಾಡಿಕೊಂಡಿದೆ. ಹೀಗಾಗಿ, ಸೆರಮ್ ಸಂಸ್ಥೆಯ ಕೊವಿಶೀಲ್ಡ್ ಲಸಿಕೆ ಹೆಚ್ಚಾಗಿ ವಿತರಣೆ ಮಾಡಲಾಗುವ ಬಗ್ಗೆ ತಿಳಿದುಬಂದಿದೆ.

ಕೊವಿಶೀಲ್ಡ್ ಪೂರೈಕೆ ಬಳಿಕ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ಬಳಕೆ ಮಾಡಲಾಗುವುದು ಎಂದು ತಿಳಿಯಲಾಗಿದೆ. ಕೇಂದ್ರ ಸರ್ಕಾರಕ್ಕೆ ಲಸಿಕೆ ಪೂರೈಕೆಯ ಸಮಸ್ಯೆ ಎದುರಾಗುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ. ಲಸಿಕೆ ಪಡೆಯುವ ಜನರಿಗೆ ಕೂಡ, ಯಾವ ಕಂಪೆನಿ ಲಸಿಕೆ ಎಂದು ತಿಳಿಸಲಾಗುತ್ತದೆ. ಲಸಿಕೆ ಪಡೆದ ವ್ಯಕ್ತಿಗೆ ಇ-ಪ್ರಮಾಣಪತ್ರ ನೀಡಲಾಗುತ್ತದೆ.

ಆದರೆ, ಪಂಜಾಬ್, ಛತ್ತೀಸ್‌ಗಢ ರಾಜ್ಯಗಳಿಂದ ಲಸಿಕೆ ಸ್ವೀಕರಿಸಲು ವಿರೋಧ ವ್ಯಕ್ತವಾಗಿದೆ. ಕೊವ್ಯಾಕ್ಸಿನ್ ಲಸಿಕೆಯನ್ನು ಸ್ವೀಕರಿಸಲು ಕಾಂಗ್ರೆಸ್‌ ಆಳ್ವಿಕೆಯ ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಕೊವ್ಯಾಕ್ಸಿನ್ ಲಸಿಕೆಯ 3ನೇ ಹಂತದ ಪ್ರಯೋಗ ಮುಕ್ತಾಯಗೊಂಡಿಲ್ಲ. ಲಸಿಕೆಯ ಸುರಕ್ಷತೆ, ಪರಿಣಾಮಕಾರಿತನದ ಮಾಹಿತಿ ಸಿಕ್ಕಿಲ್ಲ. ಹಾಗಾಗಿ, ಕೊವ್ಯಾಕ್ಸಿನ್ ಲಸಿಕೆ ಬೇಡ ಎಂದು ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳು ವಿರೋಧ ಸೂಚಿಸಿವೆ. ಜೊತೆಗೆ, ಜನವರಿ 16 ರಿಂದ ಕೊರೋನಾ ‌ಲಸಿಕೆ ವಿತರಣೆ ಹಿನ್ನಲೆಯಲ್ಲಿ, ಜನವರಿ 17 ರ ಪೊಲಿಯೋ ಲಸಿಕೆ ವಿತರಣೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಪ್ರಧಾನಿ ಸಭೆಗೆ ಕ್ಷಣಗಣನೆ; ಲಸಿಕೆ ವಿತರಣೆ ಬಗ್ಗೆ ಏನು ಮಾತಾಡ್ತಾರೆ ನಮೋ.. ಹೆಚ್ಚಿದ ಕುತೂಹಲ

Published On - 4:52 pm, Mon, 11 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ