AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ತಾಲೀಮು ಪರಿಶೀಲಿಸಲು ತಮಿಳುನಾಡಿಗೆ ಬಂದ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್

ಜನವರಿ 2ರಂದು ಸುಮಾರು 125 ಜಿಲ್ಲೆಗಳಲ್ಲಿ ಯಶಸ್ವಿಯಾಗಿ ತಾಲೀಮು ನಡೆಸಿದ್ದೇವೆ. ಇದೀಗ ಅದರ ಮುಂದುವರಿದ ಭಾಗವಾಗಿ ಇನ್ನೂ ದೊಡ್ಡಮಟ್ಟದ ತಾಲೀಮು ನಡೆಸಲಾಗುತ್ತಿದೆ ಎಂದಿದ್ದಾರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ.ಹರ್ಷವರ್ಧನ್​.

ಕೊರೊನಾ ಲಸಿಕೆ ತಾಲೀಮು ಪರಿಶೀಲಿಸಲು ತಮಿಳುನಾಡಿಗೆ ಬಂದ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್
ಡಾ.ಹರ್ಷವರ್ಧನ್​
Skanda
| Edited By: |

Updated on: Jan 08, 2021 | 12:08 PM

Share

ಚೆನ್ನೈ: ದೇಶಾದ್ಯಂತ ಕೊರೊನಾ ಲಸಿಕೆ ತಾಲೀಮು ಪ್ರಕ್ರಿಯೆ ಆರಂಭವಾಗಿದೆ. ತಮಿಳುನಾಡಿನ ಚೆನ್ನೈನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ.ಹರ್ಷವರ್ಧನ್​ ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಜನವರಿ 2ರಂದು ಸುಮಾರು 125 ಜಿಲ್ಲೆಗಳಲ್ಲಿ ಯಶಸ್ವಿಯಾಗಿ ತಾಲೀಮು ನಡೆಸಿದ್ದೇವೆ. ಇದೀಗ ಅದರ ಮುಂದುವರಿದ ಭಾಗವಾಗಿ ಇನ್ನೂ ದೊಡ್ಡಮಟ್ಟದ ತಾಲೀಮು ನಡೆಸಲಾಗುತ್ತಿದೆ. ಕೊರೊನಾ ಲಸಿಕೆ ವಿತರಣೆಗೆ ಬೇಕಾದ ಎಲ್ಲಾ ತಯಾರಿಯೂ ಆಗಲಿ ಎಂಬ ಉದ್ದೇಶದಿಂದ ಇದನ್ನು ನಡೆಸುತ್ತಿದ್ದೇವೆ ಎಂದು ಡಾ.ಹರ್ಷವರ್ಧನ್  ಹೇಳಿದ್ದಾರೆ.

ಲಸಿಕೆ ವಿತರಣೆಗೆ ಮೊದಲು ಇನ್ನೊಮ್ಮೆ ತಾಲೀಮು.. ಇಂದೇ ನಡೆಯಲಿದೆ ಕೊವಿನ್​ ಸಾಫ್ಟ್​ವೇರ್​ ಪರಿಶೀಲನೆ